AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರಣಾವತ್ ಚಿತ್ರಕ್ಕೆ ಸಂಕಷ್ಟ; ಆರು ಕೋಟಿ ರೂ. ಹಿಂದಿರುಗಿಸಲು ಬೇಡಿಕೆ ಇಟ್ಟ ಹಂಚಿಕೆದಾರ

ಡಿಸ್ಟ್ರಿಬ್ಯೂಷನ್ ಕಂಪನಿ ನಿರ್ಮಾಪಕರಿಗೆ 6 ಕೋಟಿ ರೂಪಾಯಿ ಪೇಮೆಂಟ್ ಮಾಡಿ ಸಿನಿಮಾ ಹಂಚಿಕೆ ಹಕ್ಕು ಪಡೆದಿತ್ತು. ಆದರೆ, ಈ ಚಿತ್ರದಿಂದ ಹಂಚಿಕೆದಾರರಿಗೆ ನಷ್ಟ ಆಗಿದೆ.

ಕಂಗನಾ ರಣಾವತ್ ಚಿತ್ರಕ್ಕೆ ಸಂಕಷ್ಟ; ಆರು ಕೋಟಿ ರೂ. ಹಿಂದಿರುಗಿಸಲು ಬೇಡಿಕೆ ಇಟ್ಟ ಹಂಚಿಕೆದಾರ
ಕಂಗನಾ
ರಾಜೇಶ್ ದುಗ್ಗುಮನೆ
|

Updated on:Mar 22, 2023 | 11:51 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರು ಮಾಡಿದ ಯಾವ ಸಿನಿಮಾಗಳೂ ಕೆಲಸ ಮಾಡುತ್ತಿಲ್ಲ. ಈಗ ಅವರು ತಾವು ದುಡಿದ ಹಣವೆಲ್ಲವನ್ನೂ ‘ಎಮರ್ಜೆನ್ಸಿ’ ಚಿತ್ರದ ಮೇಲೆ ಹೂಡಿಕೆ ಮಾಡಿದ್ದಾರೆ. ಈ ಮಧ್ಯೆ ಅವರ ಸಿನಿಮಾ ಸಂಕಷ್ಟದಲ್ಲಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜೀವನದ ಕುರಿತು ಸಿದ್ಧವಾದ ‘ತಲೈವಿ’ (Thalaivi Movie) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರದ ಹಂಚಿಕೆದಾರರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. 6 ಕೋಟಿ ರೂಪಾಯಿ ನೀಡುವಂತೆ ಅವರು ಕೋರಿದ್ದಾರೆ.

ಜಯಲಲಿತಾ ನಟಿಯಾಗಿ, ರಾಜಕಾರಣಿಯಾಗಿ ಯಶಸ್ಸು ಕಂಡವರು. ಅವರ ಜೀವನದಲ್ಲಿ ಸಾಕಷ್ಟು ಏಳಬೀಳುಗಳು ಇದ್ದವು. ಇದನ್ನು ಸಿನಿಮಾ ಮಾಡಲಾಯಿತು. 2021ರ ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ರಿಲೀಸ್ ಆಯಿತು. ಈ ಸಿನಿಮಾ ಸೋಲು ಕಂಡಿತು. ಬಾಕ್ಸ್ ಆಫೀಸ್​ನಲ್ಲಿ ಚಿತ್ರ ಸದ್ದು ಮಾಡಿಲ್ಲ. ಈ ಸಿನಿಮಾ ರಿಲೀಸ್ ಆಗಿ ಒಂದೂವರೆ ವರ್ಷದ ಬಳಿಕ ಈ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ‘ತಲೈವಿ’ ಹಂಚಿಕೆದಾರರು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿ ಆಗಿದೆ.

ಡಿಸ್ಟ್ರಿಬ್ಯೂಷನ್ ಕಂಪನಿ ‘ತಲೈವಿ’ ನಿರ್ಮಾಪಕರಿಗೆ 6 ಕೋಟಿ ರೂಪಾಯಿ ಪೇಮೆಂಟ್ ಮಾಡಿ ಹಂಚಿಕೆ ಹಕ್ಕು ಪಡೆದಿತ್ತು. ಆದರೆ, ಈ ಚಿತ್ರದಿಂದ ಹಂಚಿಕೆದಾರರಿಗೆ ನಷ್ಟ ಆಗಿದೆ. ಹಣ ಹಿಂದಿರುಗಿಸುವಂತೆ ನಿರ್ಮಾಣ ಸಂಸ್ಥೆಗೆ ಡಿಸ್ಟ್ರಿಬ್ಯೂಷನ್ ಕಂಪನಿ ಇ-ಮೇಲ್ ಕಳುಹಿಸಿದೆ ಎನ್ನಲಾಗಿದೆ. ಆದರೆ, ಅವರಿಗೆ ನಿರ್ಮಾಣ ಸಂಸ್ಥೆಯಿಂದ ಅವರಿಗೆ ಯಾವುದೇ ಉತ್ತರ ಬಂದಿಲ್ಲ. ಸದ್ಯ ಈ ವಿಚಾರದಲ್ಲಿ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ. ಹಂಚಿಕೆದಾರರು ‘ತಲೈವಿ’ ನಿರ್ಮಾಪಕರ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kangana Ranaut: ಸತತ ಸೋಲಿನ ಬಳಿಕ ಬೇರೆ ಬಿಸ್ನೆಸ್​ ಮಾಡಲು ನಿರ್ಧರಿಸಿದ್ದ ಕಂಗನಾ; ಅದಕ್ಕೂ ಸಾಕಾಗಲಿಲ್ಲ ಹಣ

ಕಂಗನಾ ನಟನೆಯ ‘ಧಾಕಡ್​’ ಸಿನಿಮಾ ಕೂಡ ಸೋಲು ಕಂಡಿತು. 80 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾ 2.58 ಕೋಟಿ ರೂಪಾಯಿ ಅಷ್ಟೇ ಕಲೆಕ್ಷನ್ ಮಾಡಿತು. ಈ ಚಿತ್ರದಿಂದ ದೊಡ್ಡ ಮೊತ್ತದ ನಷ್ಟ ಉಂಟಾಗಿತ್ತು. ಈ ಚಿತ್ರದಿಂದ ನಿರ್ಮಾಪಕರಿಗೆ ಸುಮಾರು 78 ಕೋಟಿ ರೂಪಾಯಿ ಲಾಸ್ ಆಗಿದೆ ಎನ್ನಲಾಗಿದೆ.

‘ಎಮರ್ಜೆನ್ಸಿ’ ಚಿತ್ರದ ಮೇಲೆ ಕಂಗನಾ ರಣಾವತ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ಘಟಾನುಘಟಿಗಳು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:51 am, Wed, 22 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ