AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhaakad BO collection: 8ನೇ ದಿನ ಸೇಲ್ ಆಗಿದ್ದು ಕೇವಲ 20 ಟಿಕೆಟ್​, ಗಳಿಸಿದ್ದು 4,420 ರೂ; ಇದು ಕಂಗನಾ ಚಿತ್ರದ ದುಸ್ಥಿತಿ

Kangana Ranaut | Dhaakad Movie: ಕಂಗನಾ ರಣಾವತ್ ನಟನೆಯ ಈ ಚಿತ್ರದ ಬಂಡವಾಳ ಸುಮಾರು 80 ಕೋಟಿ ರೂಗಳಿಂದ 90 ಕೋಟಿ ರೂ. ಪ್ರಚಾರದ ಖರ್ಚೂ ಸೇರಿದರೆ ಚಿತ್ರದ ಒಟ್ಟಾರೆ ಖರ್ಚು 100 ಕೋಟಿ ರೂ ಮುಟ್ಟುತ್ತದೆ. ಆದರೆ ಚಿತ್ರ ಮಾತ್ರ ಹೀನಾಯ ಸೋಲಿನ ರುಚಿ ಕಂಡಿದೆ.

Dhaakad BO collection: 8ನೇ ದಿನ ಸೇಲ್ ಆಗಿದ್ದು ಕೇವಲ 20 ಟಿಕೆಟ್​, ಗಳಿಸಿದ್ದು 4,420 ರೂ; ಇದು ಕಂಗನಾ ಚಿತ್ರದ ದುಸ್ಥಿತಿ
‘ಧಾಕಡ್’ ಚಿತ್ರದಲ್ಲಿ ಕಂಗನಾ ರಣಾವತ್​
Follow us
TV9 Web
| Updated By: shivaprasad.hs

Updated on:May 28, 2022 | 12:06 PM

ಕಂಗನಾ ರಣಾವತ್ (Kangana Ranaut)​ ನಟನೆಯ ‘ಧಾಕಡ್’ (Dhaakad) ಚಿತ್ರ ರಿಲೀಸ್​ಗೂ ಮೊದಲು ತೀವ್ರ ನಿರೀಕ್ಷೆ ಹುಟ್ಟಿಸಿತ್ತು. ಆದರೆ ಚಿತ್ರದ ಬಿಡುಗಡೆಯ ದಿನದಿಂದಲೇ ಬಹಳ ನೀರಸ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಮಹಿಳಾ ಸೂಪರ್ ಹೀರೋ ಮಾದರಿಯ ಈ ಚಿತ್ರದಲ್ಲಿ ಕಂಗನಾ ಏಜೆಂಟ್ ಅಗ್ನಿ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಪ್ರೇಕ್ಷಕರಿಗೆ ಈ ಪ್ರಯತ್ನ ಮೆಚ್ಚುಗೆಯಾಗಿಲ್ಲ. ಜತೆಗೆ ಚಿತ್ರಕ್ಕೆ ನೆಗೆಟಿವ್ ವಿಮರ್ಶೆಗಳೂ ಸಿಕ್ಕಿದ್ದು ಮತ್ತಷ್ಟು ಹಿನ್ನಡೆಯಾಯಿತು. ಇದೀಗ ಚಿತ್ರ ತೆರೆಕಂಡು ಒಂದು ವಾರವಾಗಿದ್ದು, ದಿನದಿಂದ ದಿನಕ್ಕೆ ಗಳಿಕೆ ಕುಸಿಯುತ್ತಿದೆ. ಬಾಲಿವುಡ್ ಹಂಗಾಮಾ ಚಿತ್ರದ 8ನೇ ದಿನದ ಗಳಿಕೆಯ ವರದಿಯನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ ದೇಶಾದ್ಯಂತ ಶುಕ್ರವಾರ ‘ಧಾಕಡ್’ ಚಿತ್ರದ ಕೇವಲ 20 ಟಿಕೆಟ್​ಗಳು ಮಾರಾಟವಾಗಿವೆ. ಅದರಿಂದ ‘ಧಾಕಡ್’ ಗಳಿಸಿದ್ದು 4,420 ರೂಗಳನ್ನು ಮಾತ್ರ!

8 ದಿನಗಳ ಅವಧಿಯಲ್ಲಿ ಚಿತ್ರದ ಒಟ್ಟಾರೆ ಕಲೆಕ್ಷನ್ 3 ಕೋಟಿ ರೂ ಆಸುಪಾಸಿನಲ್ಲಿದೆ. ಈಗಾಗಲೇ ಚಿತ್ರಕ್ಕೆ ಲಭ್ಯವಾಗಿದ್ದ ಥಿಯೇಟರ್​ಗಳಿಂದ ಸಿನಿಮಾವನ್ನು ತೆಗೆಯಲಾಗುತ್ತಿದೆ. ಪ್ರೇಕ್ಷಕರ ಅಲಭ್ಯತೆಯಿಂದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ‘ಧಾಕಡ್​’ ಮರೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ

ಇದನ್ನೂ ಓದಿ
Image
ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ
Image
Dhananjay: ಧನಂಜಯ್- ಅದಿತಿ ಅಭಿನಯದ ‘ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ’ ರಿಲೀಸ್ ಡೇಟ್ ಅನೌನ್ಸ್
Image
‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?
Image
Shruti Haasan: ‘ಮುಂಬೈಯನ್ನೇ ವಿಶ್ವದ ಕೇಂದ್ರ ಸ್ಥಾನ ಎಂದು ಹಲವರು ನಂಬಿದ್ದಾರೆ; ಆದರೆ..’; ಹಿಂದಿ ಚಿತ್ರರಂಗದ ಬಗ್ಗೆ ಶೃತಿ ಹಾಸನ್ ಮಾತು

ಕಂಗನಾ ರಣಾವತ್ ನಟನೆಯ ಈ ಚಿತ್ರದ ಬಂಡವಾಳ ಸುಮಾರು 80 ಕೋಟಿ ರೂಗಳಿಂದ 90 ಕೋಟಿ ರೂ. ಪ್ರಚಾರದ ಖರ್ಚೂ ಸೇರಿದರೆ ಚಿತ್ರದ ಒಟ್ಟಾರೆ ಖರ್ಚು 100 ಕೋಟಿ ರೂ ಮುಟ್ಟುತ್ತದೆ. ಆದರೆ ಚಿತ್ರ ಮಾತ್ರ ಹೀನಾಯ ಸೋಲಿನ ರುಚಿ ಕಂಡಿದೆ. ರಜನೀಶ್ ಘಾಯ್ ನಿರ್ದೇಶಿಸಿದ ‘ಧಾಕಡ್‌’ನಲ್ಲಿ ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮತ್ತು ಶಾಶ್ವತ ಚಟರ್ಜಿ ಸಹ ನಟಿಸಿದ್ದಾರೆ.

ಈ ವರ್ಷ ಹಿಂದಿ ಚಿತ್ರಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿಲ್ಲ. 2022ರಲ್ಲಿ ಇದುವರೆಗೆ ಬಾಕ್ಸಾಫೀಸ್​ನಲ್ಲಿ ತುಸು ಕಮಾಯಿ ಮಾಡಿದ ಚಿತ್ರಗಳು ಮೂರೇ ಮೂರು. ‘ದಿ ಕಾಶ್ಮೀರ್ ಫೈಲ್ಸ್’, ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಗಳು ಒಳ್ಳೆಯ ಗಳಿಕೆ ಮಾಡಿವೆ. ‘ಧಾಕಡ್’ ತೆರೆಕಂಡ ದಿನವೇ ರಿಲೀಸ್ ಆಗಿದ್ದ ‘ಭೂಲ್ ಭುಲಯ್ಯ 2’ಗೂ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದು ಅದರ ಗಳಿಕೆ 100 ಕೋಟಿ ರೂ ಸನಿಹ ಬಂದು ನಿಂತಿದೆ.

ಈ ನಡುವೆ ದಕ್ಷಿಣ ಭಾರತದ ಚಿತ್ರಗಳನ್ನು ಹಿಂದಿ ಪ್ರೇಕ್ಷಕರು ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ವರ್ಷ ‘ಪುಷ್ಪ: ದಿ ರೈಸ್’, ‘ಆರ್​ಆರ್​ಆರ್​’ ಚಿತ್ರಗಳ ಹಿಂದಿ ಅವತರಣಿಕೆಗಳು ಗೆಲುವಿನ ನಗೆ ಬೀರಿವೆ. ‘ಕೆಜಿಎಫ್ ಚಾಪ್ಟರ್ 2’ನ ಹಿಂದಿ ಅವತರಣಿಕೆ 433 ಕೋಟಿ ರೂ ಬಾಚಿಕೊಂಡಿದೆ. ಸಾರ್ವಕಾಲಿಕವಾಗಿ ಭಾರತದಲ್ಲಿ ಅತ್ಯಂತ ಹೆಚ್ಚು ಗಳಿಸಿದ ಹಿಂದಿ ಚಿತ್ರಗಳಲ್ಲಿ ‘ಕೆಜಿಎಫ್ ಚಾಪ್ಟರ್ 2’ ಎರಡನೇ ಸ್ಥಾನ ಪಡೆದಿದೆ. ಮೊದಲ ಸ್ಥಾನದಲ್ಲಿ ‘ಬಾಹುಬಲಿ 2’ ಇದೆ. ಸದ್ಯ ಬಾಲಿವುಡ್​ ಚಿತ್ರಗಳ ಸೋಲಿಗೆ ಕಾರಣಗಳೇನು ಎಂಬುದರ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ಸ್ಟಾರ್ ನಟರು ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:56 am, Sat, 28 May 22

ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ