AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಏಜೆಂಟ್ ಅಗ್ನಿ’ಯಾಗಿ ಖಡಕ್ ಮಾಸ್ ಅವತಾರದಲ್ಲಿ ಕಂಗನಾ; ಚಿತ್ರದ ಬಿಡುಗಡೆ ಯಾವಾಗ?

Dhaakad: ತಲೈವಿ ಚಿತ್ರದ ಯಶಸ್ಸಿನಲ್ಲಿರುವಾಗಲೇ ಕಂಗನಾ ತಮ್ಮ ಮುಂದಿನ ಚಿತ್ರದ ಬಿಡುಗಡೆಯನ್ನು ಘೋಷಿಸಿದ್ದಾರೆ. ಆ ಚಿತ್ರ ಹಾಲಿವುಡ್ ಮಾದರಿಯಲ್ಲಿರಲಿದೆ ಎಂದೂ ಚಿತ್ರತಂಡ ಈಗಾಗಲೇ ಘೋಷಿಸಿದೆ.

Kangana Ranaut: ‘ಏಜೆಂಟ್ ಅಗ್ನಿ’ಯಾಗಿ ಖಡಕ್ ಮಾಸ್ ಅವತಾರದಲ್ಲಿ ಕಂಗನಾ; ಚಿತ್ರದ ಬಿಡುಗಡೆ ಯಾವಾಗ?
‘ಧಾಕಡ್’ ಚಿತ್ರದಲ್ಲಿ ಕಂಗನಾ
Follow us
TV9 Web
| Updated By: shivaprasad.hs

Updated on: Oct 19, 2021 | 1:55 PM

ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ ‘ತಲೈವಿ’ ಚಿತ್ರದ ಅಭಿನಯಕ್ಕೆ ಸಿಕ್ಕ ಉತ್ತಮ ಪ್ರತಿಕ್ರಿಯೆಯ ಸಂತಸದಲ್ಲಿದ್ದಾರೆ. ಈ ನಡುವೆ ಅವರ ಅಭಿಮಾನಿಗಳಿಗೆ ಖುಷಿ ನೀಡುವ ಸುದ್ದಿಯೊಂದು ಎದುರಾಗಿದೆ. ಈಗಾಗಲೇ ಪೋಸ್ಟರ್ ಮುಖಾಂತರ ಕುತೂಹಲ ಹುಟ್ಟಿಸಿರುವ ‘ಧಾಕಡ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. 2022ರ ಏಪ್ರಿಲ್ 8ರಂದು ಚಿತ್ರಮಂದಿರಗಳಲ್ಲಿ ‘ಧಾಕಡ್’ ಬಿಡುಗಡೆಯಾಗಲಿದೆ. ಈ ಚಿತ್ರ ಬಹುದೊಡ್ಡ ನಿರೀಕ್ಷೆ ಹುಟ್ಟುಹಾಕಿರಲು ಕಾರಣ,  ಈ ಚಿತ್ರದಲ್ಲಿ ಕಂಗನಾ ಲೇಡಿ ಸೂಪರ್ ಹೀರೋ ‘ಏಜೆಂಟ್ ಅಗ್ನಿ’ಯಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ಮಹಿಳಾ ಪ್ರಧಾನ ಸೂಪರ್ ಹೀರೋ ಮಾದರಿಯ ಮೊತ್ತಮೊದಲ ಆಕ್ಷನ್- ಥ್ರಿಲ್ಲರ್ ಸಿನಿಮಾ ಇದಾಗಿದೆ.

ಕೆಲವು ತಿಂಗಳ ಹಿಂದಷ್ಟೇ ‘ಧಾಕಡ್’ ಚಿತ್ರದ ಚಿತ್ರೀಕರಣ ಮುಗಿದಿತ್ತು. ಇದೀಗ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈ ಚಿತ್ರದಲ್ಲಿ ಕಂಗನಾ ಜೊತೆಯಲ್ಲಿ ಅರ್ಜುನ್ ರಾಮ್ ಪಾಲ್ ಹಾಗೂ ದಿವ್ಯಾ ದತ್ತಾ ಅಭಿನಯಿಸಿದ್ದಾರೆ. ಕಂಗನಾ ಏಜೆಂಟ್ ಅಗ್ನಿ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಚಿತ್ರವು ಮಹಿಳೆಯರು ಹಾಗೂ ಮಕ್ಕಳ ಕಳ್ಳಸಾಗಣೆಯ ಕತೆಯನ್ನು ಒಳಗೊಂಡಿದೆ. ದೊಡ್ಡ ಬಜೆಟ್ ಚಿತ್ರ ಇದಾಗಿದ್ದು, ಭೋಪಾಲ್, ಬುಡಾಪೆಸ್ಟ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವನ್ನು ನಡೆಸಲಾಗಿದೆ.

ಚಿತ್ರದ ಬಿಡುಗಡೆಯ ಕುರಿತಂತೆ ಕಂಗನಾ ಮಾತನಾಡಿದ್ದು, ‘ಧಾಕಡ್ ಮಾದರಿಯ ಚಿತ್ರಗಳನ್ನು ದೊಡ್ಡ ಸ್ಕ್ರೀನ್ ಗಳಲ್ಲೇ  ನೋಡುವುದು ಒಳ್ಳೆಯ ಅನುಭವ ನೀಡುತ್ತದೆ. ಈ ಚಿತ್ರವನ್ನು ತಯಾರಿಸಿರುವುದು ಕೂಡ ದೊಡ್ಡ ಪರದೆಯ ಮೇಲೆ ಪ್ರದರ್ಶಿಸುವ ಮಹತ್ವಾಕಾಂಕ್ಷೆಯಿಂದ. ಈ ಚಿತ್ರವು ಮಹಿಳೆಯರನ್ನು ಪ್ರತಿಬಿಂಬಿಸುತ್ತದೆ. ವೀಕ್ಷಕರನ್ನು ಏಪ್ರಿಲ್ 8ರಂದು ಭೇಟಿಯಾಗಲು ಬಹಳ ಕಾತರದಿಂದ ಕಾಯುತ್ತಿದ್ದೇನೆ’ ಎಂದು ಕಂಗನಾ ಪೋಸ್ಟ್ ಮುಖಾಂತರ ತಿಳಿಸಿದ್ದಾರೆ. ಕಂಗನಾ ಪೋಸ್ಟ್​​ಗೆ ಟಾಲಿವುಡ್ ನಟಿ ಸಮಂತಾ ಕೂಡ ಕಾಮೆಂಟ್ ಮಾಡಿದ್ದು, ಕಂಗನಾ ಲುಕ್​ಗಳು ಅದ್ಭುತವಾಗಿದೆ ಎಂಬರ್ಥದಲ್ಲಿ ಫೈರ್ ಎಮೋಜಿಗಳ ಮುಖಾಂತರ ಕಾಮೆಂಟ್ ಮಾಡಿದ್ದಾರೆ.

‘ಧಾಕಡ್’ ಚಿತ್ರದ ಬಿಡುಗಡೆ ಕುರಿತಂತೆ ಕಂಗನಾ ಹಂಚಿಕೊಂಡಿರುವ ಪೋಸ್ಟ್:

ಧಾಕಡ್ ಚಿತ್ರದ‌ ನಿರ್ದೇಶಕ ರಜ್ನೀಶ್ ರಾಜಿ ಘಾಯ್ ಚಿತ್ರವು ಹಾಲಿವುಡ್ ಆಕ್ಷನ್ ಚಿತ್ರಗಳಂತಿರಲಿದೆ ಎಂದು ತಿಳಿಸಿದ್ದಾರೆ. ಧಾಕಡ್ ಚಿತ್ರಕ್ಕಾಗಿ ಅಂತರಾಷ್ಟ್ರೀಯ ಮಟ್ಟದ ತಂತ್ರಜ್ಞರು ಕಾರ್ಯನಿರ್ವಹಿಸಿದ್ದಾರೆ. ಚಿತ್ರದ ಆಕ್ಷನ್ ದೃಶ್ಯಗಳನ್ನು ಹಾಲಿವುಡ್ ತಂತ್ರಜ್ಞರು ನಿರ್ವಹಿಸಿದ್ದು, ಖ್ಯಾತ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ ಜಪಾನ್‌ಮೂಲದ ಟೆಟ್ಸುವೋ ನಗಾಟಾ ಧಾಕಡ್ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರವನ್ನು ದೀಪಕ್‌ ಮುಕುತ್ ಹಾಗೂ ಸೋಹೆಲ್ ಮಕ್ಲಾಯ್ ನಿರ್ಮಾಣ ಮಾಡಿದ್ದು, ಬಾಲಿವುಡ್​ನ ಹಳೆಯ ಸಂಪ್ರದಾಯವನ್ನು ಮುರಿದು ಹೊಸ ಮಾದರಿಯ ಚಿತ್ರ ನಿರ್ಮಿಸುತ್ತಿರುವುದಾಗಿ ತಿಳಿಸಿದ್ದಾರೆ‌.

ಇದನ್ನೂ ಓದಿ:

‘ಅನ್ನ ಕೊಡುವ ಚಿತ್ರೋದ್ಯಮ ಮುಚ್ಚಬಾರದು, ಪೈರಸಿಗೆ ಅಂತ್ಯ ಹಾಡ್ತೀವಿ’: ಆರಗ ಜ್ಞಾನೇಂದ್ರ ಭರವಸೆ

Viral Video: ರಾನು ಮಂಡಲ್ ಕಂಠದಲ್ಲಿ ‘ಬಚ್ಪನ್​ ಕಾ ಪ್ಯಾರ್’ ಹಾಡು; ವಿಡಿಯೋ ಫುಲ್​ ವೈರಲ್​

‘ಭಜರಂಗಿ 2’ ಟ್ರೇಲರ್​ ಬಿಡುಗಡೆಗೂ ಮುನ್ನ ಧೂಳೆಬ್ಬಿಸಿದ ಪೋಸ್ಟರ್​; ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು