AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಾಕಡ್​’ ಸೋಲಿನ ಬೆನ್ನಲ್ಲೇ ಮಹತ್ವದ ಕೆಲಸಕ್ಕೆ ಮುಂದಾದ ಕಂಗನಾ ರಣಾವತ್

ಇಷ್ಟು ದೊಡ್ಡ ಸ್ಟಾರ್​ಡಮ್ ಇಟ್ಟುಕೊಂಡು ಚಿತ್ರಕ್ಕೆ ಈ ಮಟ್ಟದ ಸೋಲು ಆಗುತ್ತದೆ ಎಂದರೆ ಅದು ನಿಜಕ್ಕೂ ಅವಮಾನವೇ. ಆದರೆ, ಕಂಗನಾ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

‘ಧಾಕಡ್​’ ಸೋಲಿನ ಬೆನ್ನಲ್ಲೇ ಮಹತ್ವದ ಕೆಲಸಕ್ಕೆ ಮುಂದಾದ ಕಂಗನಾ ರಣಾವತ್
ಕಂಗನಾ
TV9 Web
| Edited By: |

Updated on: May 30, 2022 | 4:54 PM

Share

ಕಂಗನಾ ರಣಾವತ್ (Kangana Ranaut) ಹಾಗೂ ಅವರ ಫ್ಯಾನ್ಸ್​ ಬೇಸರದಲ್ಲಿದ್ದಾರೆ. ಕಂಗನಾ ನಟನೆಯ ‘ಧಾಕಡ್​’ ಸಿನಿಮಾ (Dhaakad Movie) ಹೀನಾಯದಲ್ಲೇ ಹೀನಾಯ ಸೋಲು ಕಂಡಿದೆ. ಕೆಲವೇ ಕೆಲವು ಕೋಟಿ ಕಲೆಕ್ಷನ್ ಮಾಡಿದ ಈ ಚಿತ್ರಕ್ಕೂ ಒಟಿಟಿಯಲ್ಲೂ ಬೆಲೆ ಇಲ್ಲದಂತೆ ಆಗಿದೆ. ಇದರಿಂದ ನಿರ್ಮಾಪಕರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಕಂಗನಾ ಈ ಸಿನಿಮಾದಲ್ಲಿ ನಟಿಸಲೇಬಾರದಿತ್ತು ಎಂದು ಫ್ಯಾನ್ಸ್ ಹೇಳಿದ್ದುಂಟು. ಸಿನಿಮಾದಲ್ಲಿ ನಟಿಸಿ, ಅದು ರಿಲೀಸ್ ಆಗಿ, ಸೋತು ಹೋಗಿದ್ದೂ ಆಗಿದೆ. ಈಗ ಯಾವುದನ್ನೂ ತಿದ್ದೋಕೆ ಆಗುವುದಿಲ್ಲ. ಈ ಕಾರಣಕ್ಕೆ ಕಂಗನಾ ಮುಂದಿನ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಈ ಬಾರಿ ಎಡವಲೇಬಾರದು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಅವರೇ ನಿರ್ದೇಶನ ಮಾಡಿ, ನಟಿಸುತ್ತಿರುವ ‘ಎಮರ್ಜೆನ್ಸಿ’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ ಕಂಗನಾ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

‘ಧಾಕಡ್​’ ಬಗ್ಗೆ ಕಂಗನಾಗೆ ಸಾಕಷ್ಟು ನಿರೀಕ್ಷೆ ಇತ್ತು. ಹೀಗಾಗಿ, ತಾವೇ ಮುಂದೆ ನಿಂತು ಸಿನಿಮಾ ಪ್ರಚಾರ ಮಾಡಿದ್ದರು. ತಿರುಪತಿಗೆ ಹೋಗಿ ಪೂಜೆ ಮಾಡಿ ಬಂದಿದ್ದರು. ಆದರೆ, ದೇವರು ಹಾಗೂ ಅಭಿಮಾನಿಗಳು ಅವರ ಕೈ ಹಿಡಿಯಲಿಲ್ಲ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 3 ಕೋಟಿ ರೂಪಾಯಿ ಗಳಿಸಲೂ ಒದ್ದಾಡಿದೆ. ಇಷ್ಟು ದೊಡ್ಡ ಸ್ಟಾರ್​ಡಮ್ ಇಟ್ಟುಕೊಂಡು ಚಿತ್ರಕ್ಕೆ ಈ ಮಟ್ಟದ ಸೋಲು ಆಗುತ್ತದೆ ಎಂದರೆ ಅದು ನಿಜಕ್ಕೂ ಅವಮಾನವೇ. ಆದರೆ, ಕಂಗನಾ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಆಗಿದ್ದು ಆಯಿತು ಮುಂದಾದರೂ ಸರಿಯಾಗಿ ನಡೆಯೋಣ ಎನ್ನುವ ನಿರ್ಧಾರಕ್ಕೆ ಅವರು ಬಂದಂತಿದೆ.

ಇದನ್ನೂ ಓದಿ: ನಿರ್ಮಾಪಕರ​ ಹೊಟ್ಟೆ ಮೇಲೆ ಹೊಡೆದ ಕಂಗನಾ; ಒಟಿಟಿಯಲ್ಲೂ ‘ಧಾಕಡ್​’ ಚಿತ್ರಕ್ಕೆ ಬೇಡಿಕೆ ಇಲ್ಲ

ಇದನ್ನೂ ಓದಿ
Image
ಕಂಗನಾ ನಟನೆಯ ‘ಧಾಕಡ್​’ ಚಿತ್ರ ನೋಡಲು ಒಬ್ಬರೂ ಬರಲಿಲ್ಲ; ಹಲವು ಕಡೆಗಳಲ್ಲಿ ಶೋ ಕ್ಯಾನ್ಸಲ್​
Image
ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ
Image
‘ಧಾಕಡ್​’ ರಿಲೀಸ್​ಗೂ ಮುನ್ನ ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ಕಂಗನಾ ರಣಾವತ್​
Image
ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?

‘ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝಾನ್ಸಿ’ ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದವರು ಕಂಗನಾ. ಆ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಎರಡನೇ ಸಿನಿಮಾ ‘ಎಮರ್ಜೆನ್ಸಿ’. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹುಟ್ಟುವಂತೆ ಮಾಡುವ ಕೆಲಸ ಆಗಬೇಕಿದೆ. ಆ ನಿಟ್ಟಿನಲ್ಲಿ ಕಂಗನಾ ಕೆಲಸ ಮಾಡುತ್ತಿದ್ದಾರೆ.

‘ಧಾಕಡ್​’ ಚಿತ್ರಕ್ಕೆ ಕಥೆ ಬರೆದ ರಿತೇಶ್​ ಷಾ ಅವರೇ ‘ಎಮರ್ಜೆನ್ಸಿ’ ಚಿತ್ರಕ್ಕೂ ಕಥೆ ಬರೆದಿದ್ದಾರೆ. ಈ ಕಾರಣಕ್ಕೆ ಅಭಿಮಾನಿಗಳಿಗೆ ಕೊಂಚ ಅಳಕು ಇದೆ. ‘ಎಮರ್ಜೆನ್ಸಿ’ ಎಂದಾಗ ನೆನಪಿಗೆ ಬರೋದು ಇಂದಿರಾ ಗಾಂಧಿ. ಆದರೆ, ಇದು ಅವರ ಬಯೋಪಿಕ್ ಅಲ್ಲ. ಈ ಬಗ್ಗೆ ಕಂಗನಾ ಈ ಮೊದಲೇ ಸ್ಪಷ್ಟನೆ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ