Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್​ ಫೋಟೋ ವೈರಲ್​

‘ತೇಜಸ್’​ ಚಿತ್ರದ ಬಗ್ಗೆ ಕಂಗನಾ ರಣಾವತ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭಾರತೀಯ ವಾಯುಸೇನೆಯ ಪೈಲಟ್​​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್​ ಫೋಟೋ ವೈರಲ್​
ಕಂಗನಾ ರಣಾವತ್
Follow us
| Updated By: ಮದನ್​ ಕುಮಾರ್​

Updated on: Aug 21, 2021 | 6:20 PM

ನಟಿ ಕಂಗನಾ ರಣಾವತ್​ (Kangana Ranaut) ಅವರು ಎಷ್ಟೇ ಕಿರಿಕ್​ ಮಾಡಿಕೊಂಡರೂ ಸಿನಿಮಾ ಕೆಲಸಗಳನ್ನು ನಿರ್ಲಕ್ಷಿಸುವುದಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಅವರು ಕಂಡಕಂಡ ವಿಚಾರಗಳಲ್ಲೆಲ್ಲ ಮೂಗು ತೂರಿಸುತ್ತಾರೆ. ಈ ನಡುವೆಯೇ ಸಿನಿಮಾ ಶೂಟಿಂಗ್​ಗಳಲ್ಲೂ ಪಾಲ್ಗೊಳ್ಳುತ್ತಾರೆ. ಅವರು ನಟಿಸಿರುವ ‘ತಲೈವಿ’ (Thalaivi) ಚಿತ್ರ ರಿಲೀಸ್​ಗೆ ರೆಡಿ ಇದೆ. ಆದರೆ ಕೊವಿಡ್​ ಕಾರಣದಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಈಗ ಕಂಗನಾ ಅವರು ಭಾರತೀಯ ವಾಯುಸೇನೆಯ (Indian Air Force) ಸಮವಸ್ತ್ರ ಧರಿಸಿರುವ ಫೋಟೋ ವೈರಲ್​ ಆಗಿದೆ. ಅದರ ಹಿಂದಿನ ಕಹಾನಿ ಏನು? ಸಿನಿಮಾ ಬಿಟ್ಟು ಅವರೇನಾದ್ರೂ ಸೇನೆ ಸೇರಿಕೊಂಡ್ರಾ? ಹಾಗೇನೂ ಇಲ್ಲ. ಇದು ಅವರ ಹೊಸ ಸಿನಿಮಾ ‘ತೇಜಸ್’​ ಗೆಟಪ್​.

ಇತ್ತೀಚೆಗಷ್ಟೇ ಕಂಗನಾ ಅವರು ‘ಧಾಕಡ್​’ ಸಿನಿಮಾದ ಶೂಟಿಂಗ್ ಮುಗಿಸಿದರು. ಈಗ ‘ತೇಜಸ್​’ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶನಿವಾರ (ಆ.21) ಶೂಟಿಂಗ್​ ಆರಂಭ ಆಗಿದ್ದು, ಮೊದಲ ದಿನವೇ ಸೆಟ್​ನಲ್ಲಿ ಅವರು ವಾಯುಸೇನೆಯ ಸಮವಸ್ತ್ರ ಧರಿಸಿ ಕ್ಯಾಮೆರಾ ಎದುರಿಸಿದ್ದಾರೆ. ಈ ಚಿತ್ರಕ್ಕೆ ಸರ್ವೇಶ್​ ಮೇವರಾ ಅವರು ನಿರ್ದೇಶನ ಮಾಡುತ್ತಿದ್ದಾರೆ.

ತೇಜಸ್​ ಚಿತ್ರದ ಬಗ್ಗೆ ಕಂಗನಾ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭಾರತೀಯ ವಾಯುಸೇನೆಯ ಪೈಲಟ್​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಹಗಲಿರುಳು ದೇಶದ ರಕ್ಷಣೆ ಮಾಡುವ ಯೋಧರಿಗೆ ಈ ಸಿನಿಮಾ ಅರ್ಪಣೆ ಎಂದು ಅವರು ಈ ಹಿಂದೆ ಹೇಳಿದ್ದರು. ಈ ವರ್ಷ ಮಾರ್ಚ್​ನಲ್ಲಿ ಕಂಗನಾ ಜನ್ಮದಿನದ ಪ್ರಯುಕ್ತ ‘ತೇಜಸ್​’ ಸಿನಿಮಾದ ಫಸ್ಟ್​ಲುಕ್​ ಬಿಡುಗಡೆ ಆಗಿತ್ತು. ಈ ಪಾತ್ರಕ್ಕಾಗಿ ಅವರು ಭರ್ಜರಿ ತರಬೇತಿ ಪಡೆದುಕೊಂಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಂಗನಾ ರಣಾವತ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಜಯಲಲಿತಾ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ತಲೈವಿ’ ಚಿತ್ರದ ಬಿಡುಗಡೆಗಾಗಿ ಅವರ ಫ್ಯಾನ್ಸ್​ ಕಾಯುತ್ತಿದ್ದಾರೆ. ‘ಮಣಿಕರ್ಣಿಕಾ ರಿಟರ್ನ್ಸ್​’ ಮತ್ತು ಇಂದಿರಾ ಗಾಂಧಿ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕೂಡ ಕಂಗನಾ ಕೈಯಲ್ಲಿದೆ. ಈ ಎರಡೂ ಸಿನಿಮಾಗಳಿಗೆ ಅವರೇ ನಿರ್ದೇಶನ ಮಾಡಲಿರುವುದು ವಿಶೇಷ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹಾಟ್​ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದ ಕಂಗನಾ, ಪಡ್ಡೆಗಳ ನಿದ್ದೆ ಕದ್ದಿದ್ದರು.

ಇದನ್ನೂ ಓದಿ:

ಕಂಗನಾಗೆ ಇನ್​ಸ್ಟಾಗ್ರಾಮ್​ಗೆ ಚೀನಾ ಹ್ಯಾಕರ್ಸ್​ ಕಾಟ; ತಾಲಿಬಾನ್​ ಪೋಸ್ಟ್​ಗಳು ಡಿಲೀಟ್ ​

Kangana Ranaut: ನಟಿ ಕಂಗನಾರ ಹಾಟ್ ಫೊಟೊಸ್ ವೈರಲ್ ಆದ ಬೆನ್ನಲ್ಲೇ ಡಿನ್ನರ್ ಡೇಟ್ ಚಿತ್ರಗಳೂ ವೈರಲ್!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ