AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್​ ಫೋಟೋ ವೈರಲ್​

‘ತೇಜಸ್’​ ಚಿತ್ರದ ಬಗ್ಗೆ ಕಂಗನಾ ರಣಾವತ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭಾರತೀಯ ವಾಯುಸೇನೆಯ ಪೈಲಟ್​​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್​ ಫೋಟೋ ವೈರಲ್​
ಕಂಗನಾ ರಣಾವತ್
TV9 Web
| Edited By: |

Updated on: Aug 21, 2021 | 6:20 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಎಷ್ಟೇ ಕಿರಿಕ್​ ಮಾಡಿಕೊಂಡರೂ ಸಿನಿಮಾ ಕೆಲಸಗಳನ್ನು ನಿರ್ಲಕ್ಷಿಸುವುದಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಅವರು ಕಂಡಕಂಡ ವಿಚಾರಗಳಲ್ಲೆಲ್ಲ ಮೂಗು ತೂರಿಸುತ್ತಾರೆ. ಈ ನಡುವೆಯೇ ಸಿನಿಮಾ ಶೂಟಿಂಗ್​ಗಳಲ್ಲೂ ಪಾಲ್ಗೊಳ್ಳುತ್ತಾರೆ. ಅವರು ನಟಿಸಿರುವ ‘ತಲೈವಿ’ (Thalaivi) ಚಿತ್ರ ರಿಲೀಸ್​ಗೆ ರೆಡಿ ಇದೆ. ಆದರೆ ಕೊವಿಡ್​ ಕಾರಣದಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಈಗ ಕಂಗನಾ ಅವರು ಭಾರತೀಯ ವಾಯುಸೇನೆಯ (Indian Air Force) ಸಮವಸ್ತ್ರ ಧರಿಸಿರುವ ಫೋಟೋ ವೈರಲ್​ ಆಗಿದೆ. ಅದರ ಹಿಂದಿನ ಕಹಾನಿ ಏನು? ಸಿನಿಮಾ ಬಿಟ್ಟು ಅವರೇನಾದ್ರೂ ಸೇನೆ ಸೇರಿಕೊಂಡ್ರಾ? ಹಾಗೇನೂ ಇಲ್ಲ. ಇದು ಅವರ ಹೊಸ ಸಿನಿಮಾ ‘ತೇಜಸ್’​ ಗೆಟಪ್​.

ಇತ್ತೀಚೆಗಷ್ಟೇ ಕಂಗನಾ ಅವರು ‘ಧಾಕಡ್​’ ಸಿನಿಮಾದ ಶೂಟಿಂಗ್ ಮುಗಿಸಿದರು. ಈಗ ‘ತೇಜಸ್​’ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶನಿವಾರ (ಆ.21) ಶೂಟಿಂಗ್​ ಆರಂಭ ಆಗಿದ್ದು, ಮೊದಲ ದಿನವೇ ಸೆಟ್​ನಲ್ಲಿ ಅವರು ವಾಯುಸೇನೆಯ ಸಮವಸ್ತ್ರ ಧರಿಸಿ ಕ್ಯಾಮೆರಾ ಎದುರಿಸಿದ್ದಾರೆ. ಈ ಚಿತ್ರಕ್ಕೆ ಸರ್ವೇಶ್​ ಮೇವರಾ ಅವರು ನಿರ್ದೇಶನ ಮಾಡುತ್ತಿದ್ದಾರೆ.

ತೇಜಸ್​ ಚಿತ್ರದ ಬಗ್ಗೆ ಕಂಗನಾ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭಾರತೀಯ ವಾಯುಸೇನೆಯ ಪೈಲಟ್​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಹಗಲಿರುಳು ದೇಶದ ರಕ್ಷಣೆ ಮಾಡುವ ಯೋಧರಿಗೆ ಈ ಸಿನಿಮಾ ಅರ್ಪಣೆ ಎಂದು ಅವರು ಈ ಹಿಂದೆ ಹೇಳಿದ್ದರು. ಈ ವರ್ಷ ಮಾರ್ಚ್​ನಲ್ಲಿ ಕಂಗನಾ ಜನ್ಮದಿನದ ಪ್ರಯುಕ್ತ ‘ತೇಜಸ್​’ ಸಿನಿಮಾದ ಫಸ್ಟ್​ಲುಕ್​ ಬಿಡುಗಡೆ ಆಗಿತ್ತು. ಈ ಪಾತ್ರಕ್ಕಾಗಿ ಅವರು ಭರ್ಜರಿ ತರಬೇತಿ ಪಡೆದುಕೊಂಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಂಗನಾ ರಣಾವತ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಜಯಲಲಿತಾ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ತಲೈವಿ’ ಚಿತ್ರದ ಬಿಡುಗಡೆಗಾಗಿ ಅವರ ಫ್ಯಾನ್ಸ್​ ಕಾಯುತ್ತಿದ್ದಾರೆ. ‘ಮಣಿಕರ್ಣಿಕಾ ರಿಟರ್ನ್ಸ್​’ ಮತ್ತು ಇಂದಿರಾ ಗಾಂಧಿ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕೂಡ ಕಂಗನಾ ಕೈಯಲ್ಲಿದೆ. ಈ ಎರಡೂ ಸಿನಿಮಾಗಳಿಗೆ ಅವರೇ ನಿರ್ದೇಶನ ಮಾಡಲಿರುವುದು ವಿಶೇಷ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹಾಟ್​ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದ ಕಂಗನಾ, ಪಡ್ಡೆಗಳ ನಿದ್ದೆ ಕದ್ದಿದ್ದರು.

ಇದನ್ನೂ ಓದಿ:

ಕಂಗನಾಗೆ ಇನ್​ಸ್ಟಾಗ್ರಾಮ್​ಗೆ ಚೀನಾ ಹ್ಯಾಕರ್ಸ್​ ಕಾಟ; ತಾಲಿಬಾನ್​ ಪೋಸ್ಟ್​ಗಳು ಡಿಲೀಟ್ ​

Kangana Ranaut: ನಟಿ ಕಂಗನಾರ ಹಾಟ್ ಫೊಟೊಸ್ ವೈರಲ್ ಆದ ಬೆನ್ನಲ್ಲೇ ಡಿನ್ನರ್ ಡೇಟ್ ಚಿತ್ರಗಳೂ ವೈರಲ್!

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?