AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್​ ಫೋಟೋ ವೈರಲ್​

‘ತೇಜಸ್’​ ಚಿತ್ರದ ಬಗ್ಗೆ ಕಂಗನಾ ರಣಾವತ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭಾರತೀಯ ವಾಯುಸೇನೆಯ ಪೈಲಟ್​​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

Kangana Ranaut: ವಾಯುಸೇನೆ ಸಮವಸ್ತ್ರ ಧರಿಸಿದ ಕಂಗನಾ ರಣಾವತ್​ ಫೋಟೋ ವೈರಲ್​
ಕಂಗನಾ ರಣಾವತ್
TV9 Web
| Edited By: |

Updated on: Aug 21, 2021 | 6:20 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಎಷ್ಟೇ ಕಿರಿಕ್​ ಮಾಡಿಕೊಂಡರೂ ಸಿನಿಮಾ ಕೆಲಸಗಳನ್ನು ನಿರ್ಲಕ್ಷಿಸುವುದಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುವ ಅವರು ಕಂಡಕಂಡ ವಿಚಾರಗಳಲ್ಲೆಲ್ಲ ಮೂಗು ತೂರಿಸುತ್ತಾರೆ. ಈ ನಡುವೆಯೇ ಸಿನಿಮಾ ಶೂಟಿಂಗ್​ಗಳಲ್ಲೂ ಪಾಲ್ಗೊಳ್ಳುತ್ತಾರೆ. ಅವರು ನಟಿಸಿರುವ ‘ತಲೈವಿ’ (Thalaivi) ಚಿತ್ರ ರಿಲೀಸ್​ಗೆ ರೆಡಿ ಇದೆ. ಆದರೆ ಕೊವಿಡ್​ ಕಾರಣದಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಈಗ ಕಂಗನಾ ಅವರು ಭಾರತೀಯ ವಾಯುಸೇನೆಯ (Indian Air Force) ಸಮವಸ್ತ್ರ ಧರಿಸಿರುವ ಫೋಟೋ ವೈರಲ್​ ಆಗಿದೆ. ಅದರ ಹಿಂದಿನ ಕಹಾನಿ ಏನು? ಸಿನಿಮಾ ಬಿಟ್ಟು ಅವರೇನಾದ್ರೂ ಸೇನೆ ಸೇರಿಕೊಂಡ್ರಾ? ಹಾಗೇನೂ ಇಲ್ಲ. ಇದು ಅವರ ಹೊಸ ಸಿನಿಮಾ ‘ತೇಜಸ್’​ ಗೆಟಪ್​.

ಇತ್ತೀಚೆಗಷ್ಟೇ ಕಂಗನಾ ಅವರು ‘ಧಾಕಡ್​’ ಸಿನಿಮಾದ ಶೂಟಿಂಗ್ ಮುಗಿಸಿದರು. ಈಗ ‘ತೇಜಸ್​’ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶನಿವಾರ (ಆ.21) ಶೂಟಿಂಗ್​ ಆರಂಭ ಆಗಿದ್ದು, ಮೊದಲ ದಿನವೇ ಸೆಟ್​ನಲ್ಲಿ ಅವರು ವಾಯುಸೇನೆಯ ಸಮವಸ್ತ್ರ ಧರಿಸಿ ಕ್ಯಾಮೆರಾ ಎದುರಿಸಿದ್ದಾರೆ. ಈ ಚಿತ್ರಕ್ಕೆ ಸರ್ವೇಶ್​ ಮೇವರಾ ಅವರು ನಿರ್ದೇಶನ ಮಾಡುತ್ತಿದ್ದಾರೆ.

ತೇಜಸ್​ ಚಿತ್ರದ ಬಗ್ಗೆ ಕಂಗನಾ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಭಾರತೀಯ ವಾಯುಸೇನೆಯ ಪೈಲಟ್​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಹಗಲಿರುಳು ದೇಶದ ರಕ್ಷಣೆ ಮಾಡುವ ಯೋಧರಿಗೆ ಈ ಸಿನಿಮಾ ಅರ್ಪಣೆ ಎಂದು ಅವರು ಈ ಹಿಂದೆ ಹೇಳಿದ್ದರು. ಈ ವರ್ಷ ಮಾರ್ಚ್​ನಲ್ಲಿ ಕಂಗನಾ ಜನ್ಮದಿನದ ಪ್ರಯುಕ್ತ ‘ತೇಜಸ್​’ ಸಿನಿಮಾದ ಫಸ್ಟ್​ಲುಕ್​ ಬಿಡುಗಡೆ ಆಗಿತ್ತು. ಈ ಪಾತ್ರಕ್ಕಾಗಿ ಅವರು ಭರ್ಜರಿ ತರಬೇತಿ ಪಡೆದುಕೊಂಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಂಗನಾ ರಣಾವತ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಜಯಲಲಿತಾ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ತಲೈವಿ’ ಚಿತ್ರದ ಬಿಡುಗಡೆಗಾಗಿ ಅವರ ಫ್ಯಾನ್ಸ್​ ಕಾಯುತ್ತಿದ್ದಾರೆ. ‘ಮಣಿಕರ್ಣಿಕಾ ರಿಟರ್ನ್ಸ್​’ ಮತ್ತು ಇಂದಿರಾ ಗಾಂಧಿ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕೂಡ ಕಂಗನಾ ಕೈಯಲ್ಲಿದೆ. ಈ ಎರಡೂ ಸಿನಿಮಾಗಳಿಗೆ ಅವರೇ ನಿರ್ದೇಶನ ಮಾಡಲಿರುವುದು ವಿಶೇಷ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹಾಟ್​ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದ ಕಂಗನಾ, ಪಡ್ಡೆಗಳ ನಿದ್ದೆ ಕದ್ದಿದ್ದರು.

ಇದನ್ನೂ ಓದಿ:

ಕಂಗನಾಗೆ ಇನ್​ಸ್ಟಾಗ್ರಾಮ್​ಗೆ ಚೀನಾ ಹ್ಯಾಕರ್ಸ್​ ಕಾಟ; ತಾಲಿಬಾನ್​ ಪೋಸ್ಟ್​ಗಳು ಡಿಲೀಟ್ ​

Kangana Ranaut: ನಟಿ ಕಂಗನಾರ ಹಾಟ್ ಫೊಟೊಸ್ ವೈರಲ್ ಆದ ಬೆನ್ನಲ್ಲೇ ಡಿನ್ನರ್ ಡೇಟ್ ಚಿತ್ರಗಳೂ ವೈರಲ್!

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!