Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ಬಿಟ್ಟು ದೀಪಿಕಾ, ಆಲಿಯಾ ಹೊಗಳಿದ ಆಮಿರ್ ಖಾನ್; ಸರಿಯಾಗಿ ತಿರುಗೇಟು ಕೊಟ್ಟ ರಣಾವತ್

ಖ್ಯಾತ ಬರಹಗಾರ್ತಿ ಶೋಭಾ ಡೇ ಅವರ ಪುಸ್ತಕ ರಿಲೀಸ್ ಕಾರ್ಯಕ್ರಮಕ್ಕೆ ಆಮಿರ್ ಖಾನ್ ಬಂದಿದ್ದರು. ಈ ವೇಳೆ ಶೋಭಾ ಅವರ ಬಯೋಪಿಕ್ ಬಗ್ಗೆ ಚರ್ಚೆ ಆಗಿದೆ.

ಕಂಗನಾ ಬಿಟ್ಟು ದೀಪಿಕಾ, ಆಲಿಯಾ ಹೊಗಳಿದ ಆಮಿರ್ ಖಾನ್; ಸರಿಯಾಗಿ ತಿರುಗೇಟು ಕೊಟ್ಟ ರಣಾವತ್
ಕಂಗನಾ-ಆಮಿರ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Feb 11, 2023 | 3:07 PM

ಕಂಗನಾ ರಣಾವತ್​ಗೆ (Kangana Ranaut) ಬಾಲಿವುಡ್​ನ ಬಹುತೇಕರನ್ನು ಕಂಡರೆ ಆಗೋದಿಲ್ಲ. ಒಬ್ಬಲ್ಲಾ ಒಬ್ಬರ ಬಗ್ಗೆ ಅವರು ಟೀಕೆ ಮಾಡುತ್ತಲೇ ಇರುತ್ತಾರೆ. ಯಾರಿಗೂ ಅವರು ಹೆಚ್ಚು ತಲೆಕೆಡಿಸಿಕೊಳ್ಳುವವರಲ್ಲ. ಸ್ಟಾರ್​ ನಟರಿಂದ ಹಿಡಿದು ಎಲ್ಲರಿಗೂ ಅವರು ತಿರುಗೇಟು ಕೊಡುತ್ತಲೇ ಇರುತ್ತಾರೆ. ಈಗ ಕಂಗನಾ ಅವರು ಆಮಿರ್ ಖಾನ್ (Aamir Khan) ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಹೆಸರನ್ನು ಹೇಳಲು ಮರೆತ ಆಮಿರ್ ಖಾನ್​ಗೆ ಕಂಗನಾ ಟಾಂಗ್ ಕೊಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಖ್ಯಾತ ಬರಹಗಾರ್ತಿ ಶೋಭಾ ಡೇ ಅವರ ಪುಸ್ತಕ ರಿಲೀಸ್ ಕಾರ್ಯಕ್ರಮಕ್ಕೆ ಆಮಿರ್ ಖಾನ್ ಬಂದಿದ್ದರು. ಈ ವೇಳೆ ಶೋಭಾ ಅವರ ಬಯೋಪಿಕ್ ಬಗ್ಗೆ ಚರ್ಚೆ ಆಗಿದೆ. ಅವರ ಬಯೋಪಿಕ್​ನಲ್ಲಿ ನಟಿಸೋಕೆ ಯಾರು ಸೂಕ್ತ ಎನ್ನುವ ಚರ್ಚೆ ಆಗಿದೆ. ಇದಕ್ಕೆ ಆಮಿರ್ ಖಾನ್ ಒಂದಷ್ಟು ಹೆಸರುಗಳನ್ನು ಹೇಳಿದ್ದಾರೆ.

‘ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್ ಅವರು ಶೋಭಾ ಪಾತ್ರದಲ್ಲಿ ಉತ್ತಮವಾಗಿ ನಟಿಸಬಹುದು’ ಎಂದರು ಆಮಿರ್​ ಖಾನ್. ಆಗ ಶೋಭಾ ಅವರು ಕಂಗನಾ ಹೆಸರನ್ನು ಹೇಳಿದರು. ‘ಅವರು ಉತ್ತಮವಾಗಿ ನಟಿಸುತ್ತಾರೆ. ಅವರು ಅದ್ಭುತ ನಟಿ. ಸ್ಟ್ರಾಂಗ್ ನಟಿ’ ಎಂದು ಕಂಗನಾ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು ಆಮಿರ್ ಖಾನ್. ಆದರೆ, ಇದು ಕಂಗನಾಗೆ ಖುಷಿ ನೀಡಿಲ್ಲ. ಶೋಭಾ ಅವರು ಹೇಳಿದ ಬಳಿಕವೇ ಆಮಿರ್​​ಗೆ ತಮ್ಮ ಹೆಸರು ನೆನಪಾಗಿದೆ ಎಂಬುದನ್ನು ತಿಳಿದು ಅವರು ಅಸಮಾಧಾನಗೊಂಡಿದ್ದಾರೆ. ಹೊಗಳಿದ ಆಮಿರ್ ಖಾನ್​ಗೂ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

‘ನಾನು ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಎಂಬುದನ್ನು ತಿಳಿದಿಲ್ಲದವರಂತೆ ನಟಿಸಲು ಅವರು ಪ್ರಯತ್ನಿಸಿದರು. ಅವರು ಉಲ್ಲೇಖಿಸಿದ ನಟಿಯರು ಒಂದು ಪ್ರಶಸ್ತಿ ಕೂಡ ಪಡೆದಿಲ್ಲ’ ಎಂದು ಕಂಗನಾ ತಿರುಗೇಟು ನೀಡಿದ್ದಾರೆ. ಸದ್ಯ ಈ ಟ್ವೀಟ್ ವೈರಲ್ ಆಗುತ್ತಿದೆ.

ಇದನ್ನೂ ಓದಿ:Kangana Ranaut: ಕಂಗನಾ ರಣಾವತ್​ ವಾಟ್ಸಪ್​ ಮೆಸೇಜ್​ ಲೀಕ್​; ಸ್ಟಾರ್​ ದಂಪತಿ ಮೇಲೆ ಅನುಮಾನ

ಕಂಗನಾ ಅವರು ಸದ್ಯ ‘ಎಮರ್ಜೆನ್ಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜತೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರ ಸಾಕಷ್ಟು ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್