AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಭಿ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ್ರಾ ಆಲಿಯಾ? ಮನಬಂದಂತೆ ಟೀಕಿಸಿದ ಕಂಗನಾ ರಣಾವತ್

ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆದರೂ ಚಿತ್ರರಂಗದಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ನಟನೆಗೆ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇದನ್ನು ಅವರು ಲಾಭಿ ಮಾಡಿ ಪಡೆದಿದ್ದಾರೆ ಎಂದು ಕಂಗನಾ ರಣಾವತ್ ಅವರು ಪರೋಕ್ಷವಾಗಿ ಆರೋಪಿಸಿದ್ದಾರೆ.

ಲಾಭಿ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ್ರಾ ಆಲಿಯಾ? ಮನಬಂದಂತೆ ಟೀಕಿಸಿದ ಕಂಗನಾ ರಣಾವತ್
ಆಲಿಯಾ-ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 09, 2024 | 8:38 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಬಾಲಿವುಡ್​ನ ಅನೇಕರನ್ನು ಕಂಡರೆ ಸಿಟ್ಟಿದೆ. ಅದರಲ್ಲೂ ನೆಪೋ ಕಿಡ್​ಗಳ ಮೇಲೆ ಅವರಿಗೆ ಕೋಪ ಜಾಸ್ತಿಯೇ ಇದೆ. ಅವರು ಆಲಿಯಾ ಭಟ್, ರಣಬೀರ್ ಕಪೂರ್ ಸೇರಿ ಅನೇಕರನ್ನು ಟೀಕೆ ಮಾಡುತ್ತಲೇ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಆಲಿಯಾ ಭಟ್​ನ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಚಾರದಲ್ಲಿ ಈ ಟೀಕೆ ನಡೆದಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆದರೂ ಚಿತ್ರರಂಗದಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಅವರು ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ನಟನೆಗೆ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇದನ್ನು ಅವರು ಲಾಭಿ ಮಾಡಿ ಪಡೆದಿದ್ದಾರೆ ಎಂದು ಕಂಗನಾ ರಣಾವತ್ ಅವರು ಪರೋಕ್ಷವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಸೇರಿದ ಬಳಿಕ 2.46 ಕೋಟಿ ರೂಪಾಯಿ ಬೆಲೆಯ ಕಾರು ಖರೀದಿಸಿದ ಕಂಗನಾ

ಕಂಗನಾ ರಣಾವತ್ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಹುಟ್ಟೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಯಾವ ರೀತಿಯಲ್ಲಿ ನೋಡುತ್ತೀರಿ ಎಂದು ಅವರಿಗೆ ಕೇಳಲಾಯಿತು. ಇದಕ್ಕೆ ಕಂಗನಾ ಉತ್ತರಿಸಿದ್ದಾರೆ. ‘ನಾನು ಅವರನ್ನು ಇಂಡಸ್ಟ್ರಿಯ ಸ್ಟಾರ್​ ಕಿಡ್ ರೀತಿಯೇ ನೋಡುತ್ತೇನೆ. ಕಂಗನಾಗೆ ಎಲ್ಲಾ ಅವಾರ್ಡ್ ಸಿಕ್ಕಿದೆ ನನಗೂ ಬೇಕು ಎಂದು ಅವರು (ಆಲಿಯಾ?) ಹಠ ಹಿಡಿದಿರುತ್ತಾರೆ. ಹೀಗಾಗಿ ಎಲ್ಲಾ ಪ್ರಶಸ್ತಿಗಳನ್ನು ಅವರಿಗೆ ಸಿಕ್ಕಿದೆ’ ಎಂದಿದ್ದಾರೆ ಕಂಗನಾ.

She is still talking about Alia… National Awards? byu/Legitimate-Display27 inBollyBlindsNGossip

ರಾಜಕೀಯ ಜರ್ನಿ ಆರಂಭಿಸಿದ್ದಕ್ಕೆ ಬಾಲಿವುಡ್​ನ ಯಾರಾದರೂ ವಿಶ್ ಮಾಡಿದರೇ ಎಂದು ಅವರಿಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಬಾಲಿವುಡ್ ಮಂದಿಗೂ ನನ್ನ ಬಗ್ಗೆ ಖುಷಿ ಇದೆ. ನಾವು ರಾಷ್ಟ್ರೀಯತಾ ವಾದಿಗಳು. ನಾವು ಸಿನಿಮಾ ರಂಗದಲ್ಲಿ 10-15 ವರ್ಷ ಕಳೆದಿದ್ದೇವೆ. ನೆಪೋ ಮಾಫಿಯಾ ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಲೇ ಇದೆ’ ಎಂದಿದ್ದಾರೆ ಕಂಗನಾ. ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್