AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಗತ್​ ಸಿಂಗ್​ಗೆ ಗಲ್ಲು ಶಿಕ್ಷೆ ಆಗ್ಬೇಕು ಅಂತ ಗಾಂಧಿ ಬಯಸಿದ್ದರು ಎಂಬುದಕ್ಕೆ ಸಾಕ್ಷಿಗಳಿವೆ’: ಕಂಗನಾ

Kangana Ranaut: ‘ಗಾಂಧಿ ಎಂದಿಗೂ ಭಗತ್​ ಸಿಂಗ್​ ಮತ್ತು ನೇತಾಜಿಗೆ ಬೆಂಬಲ ನೀಡಲಿಲ್ಲ. ಭಗತ್​ ಸಿಂಗ್​ ಅವರನ್ನು ನೇಣಿಗೆ ಹಾಕಬೇಕು ಅಂತ ಗಾಂಧಿ ಬಯಸಿದ್ದರು ಎಂಬುದಕ್ಕೆ ಸಾಕ್ಷಿಗಳಿವೆ’ ಎಂದು ಕಂಗನಾ ರಣಾವತ್​ ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಭಗತ್​ ಸಿಂಗ್​ಗೆ ಗಲ್ಲು ಶಿಕ್ಷೆ ಆಗ್ಬೇಕು ಅಂತ ಗಾಂಧಿ ಬಯಸಿದ್ದರು ಎಂಬುದಕ್ಕೆ ಸಾಕ್ಷಿಗಳಿವೆ’: ಕಂಗನಾ
ಕಂಗನಾ ರಣಾವತ್
TV9 Web
| Edited By: |

Updated on:Nov 24, 2021 | 5:37 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಭಾರಿ ವಿವಾದಕ್ಕೆ ಕಾರಣ ಆಗುವಂತಹ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ‘1948ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. ದೇಶಕ್ಕೆ ನಿಜವಾಗಿ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಮೋದಿ ಗೆದ್ದ ಬಳಿಕ’ ಎಂದಿದ್ದ ಕಂಗನಾ ಮಾತಿಗೆ (Kangana Ranaut Statement) ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಮಾತನ್ನು ಕಂಗನಾ ಈಗ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೇ, ಮಹಾತ್ಮ ಗಾಂಧಿ (Mahatma Gandhi) ಬಗ್ಗೆ ಕಟು ಟೀಕೆಯನ್ನು ಮುಂದುವರಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಲವು ಪೋಸ್ಟ್​ಗಳನ್ನು ಅವರು ಮಾಡಿಕೊಂಡಿದ್ದಾರೆ. ಅವು ಕೂಡ ಮತ್ತೆ ವಿವಾದದ ಬೆಂಕಿ ಹೊತ್ತಿಸುವ ಮುನ್ಸೂಚನೆ ನೀಡಿವೆ. 1940ರ ಸಮಯದ ಒಂದು ನ್ಯೂಸ್​ ಪೇಪರ್​ ತುಣುಕನ್ನು ಕಂಗನಾ ಶೇರ್​ ಮಾಡಿಕೊಂಡಿದ್ದಾರೆ. ‘ನೇತಾಜಿಯನ್ನು ಹಿಡಿದುಕೊಡಲು ಒಪ್ಪಿದ ಗಾಂಧಿ ಮತ್ತು ಇತರರು’ ಎಂಬ ಸುದ್ದಿ ಅದರಲ್ಲಿದೆ. ‘ನೀವು ಗಾಂಧಿ ಅಭಿಮಾನಿ ಆಗಬೇಕು ಅಥವಾ ನೇತಾಜಿ ಬೆಂಬಲಿಗರಾಗಬೇಕು. ಎರಡೂ ಆಗಲು ಸಾಧ್ಯವಿಲ್ಲ. ಆಯ್ಕೆ ಮಾಡಿ ಮತ್ತು ನಿರ್ಧರಿಸಿ’ ಎಂದು ಕಂಗನಾ ಬರೆದುಕೊಂಡಿದ್ದಾರೆ.

‘ದೇಶಕ್ಕಾಗಿ ಹೋರಾಡಿದವರನ್ನು ಹಿಡಿದುಕೊಡಲಾಯ್ತು. ಹೋರಾಡುವ ಬಿಸಿ ರಕ್ತ ಇಲ್ಲದವರು ಅಂಥ ಕೆಲಸ ಮಾಡಿದರು. ಅವರು ಅಧಿಕಾರದ ದಾಹ ಇಟ್ಟುಕೊಂಡ ಕುತಂತ್ರಿಗಳಾಗಿದ್ದರು. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ನೀಡಿ, ಅದರಿಂದ ಸ್ವಾತಂತ್ರ್ಯ ಸಿಗತ್ತೆ ಎಂದು ಅವರೇ ನಮಗೆ ಹೇಳಿಕೊಟ್ಟಿದ್ದು. ಆ ರೀತಿ ಪಡೆಯುವುದು ಭಿಕ್ಷೆಯೇ ಹೊರತು, ಸ್ವಾತಂತ್ರ್ಯವಲ್ಲ. ನಿಮ್ಮ ನಾಯಕರನ್ನು ಬುದ್ಧಿವಂತಿಕೆಯಿಂದ ಆಯ್ಕೆ ಮಾಡಿಕೊಳ್ಳಿ’ ಎಂದು ಕಂಗನಾ ಸ್ಟೋರಿ ಪೋಸ್ಟ್​ ಮಾಡಿದ್ದಾರೆ.

‘ಗಾಂಧಿ ಎಂದಿಗೂ ಭಗತ್​ ಸಿಂಗ್​ ಮತ್ತು ನೇತಾಜಿಗೆ ಬೆಂಬಲ ನೀಡಲಿಲ್ಲ. ಭಗತ್​ ಸಿಂಗ್​ ಅವರನ್ನು ನೇಣಿಗೆ ಹಾಕಬೇಕು ಅಂತ ಗಾಂಧಿ ಬಯಸಿದ್ದರು ಎಂಬುದಕ್ಕೆ ಸಾಕ್ಷಿಗಳಿವೆ. ಹಾಗಾಗಿ ನೀವು ಯಾರಿಗೆ ಬೆಂಬಲ ನೀಡುತ್ತೀರಿ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು’ ಎಂದು ಕಂಗನಾ ಅವರು ಗಾಂಧಿ ಬಗ್ಗೆ ಕಟು ಟೀಕೆ ಮಾಡಿದ್ದಾರೆ. ಸದ್ಯ ಅವರ ಹೇಳಿಕೆಗಳಿಗೆ ಪರ-ವಿರೋಧದ ಮಾತುಗಳು ಕೇಳಿಬರುತ್ತಿವೆ. ದೇಶಾದ್ಯಂತ ಅನೇಕರು ಕಂಗನಾ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ‘1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. ದೇಶಕ್ಕೆ ನಿಜವಾಗಿ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಮೋದಿ ಗೆದ್ದ ಬಳಿಕ’ ಎಂದು ತಾವು ಹೇಳಿದ ಮಾತು ತಪ್ಪಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್​ ಕೊಡುವುದಾಗಿ ಕಂಗನಾ ಹೇಳಿದ್ದರು.

ಇದನ್ನೂ ಓದಿ:

1947ರ ಸ್ವಾತಂತ್ರ್ಯ ಸಿಕ್ಕಿದ್ದು ಭಿಕ್ಷೆಯಂತೆ: ನಟಿ ಕಂಗನಾ ರನೌತ್ ಹೇಳಿಕೆಗೆ ಹಿರಿಯ ನಟ ವಿಕ್ರಮ್ ಗೋಖಲೆ ಬೆಂಬಲ

ಸ್ವಾತಂತ್ರ್ಯ ಕುರಿತ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಂಗನಾ; ಈ ವಿಷಯ ಜ್ಞಾನೋದಯ ಮಾಡಿಸಿದರೆ ಪದ್ಮಶ್ರೀ ಮರಳಿಸುತ್ತಾರಂತೆ!

Published On - 3:46 pm, Wed, 17 November 21

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ