AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಡ್ರಗ್ಸ್​ ತೆಗೆದುಕೊಳ್ಳುವ, ಸ್ತ್ರೀಲೋಲ ನಟನಿಗೆ ರಾಮನ ಪಾತ್ರವೇ? ಇದೆಂಥ ಕಲಿಯುಗ’: ಕಂಗನಾ ಕಿಡಿಕಾರಿದ್ದು ಯಾರ ಬಗ್ಗೆ?

Ranbir Kapoor: ‘ಆತ ಇತ್ತೀಚೆಗೆ ಶಿವನ ಪಾತ್ರ ಮಾಡಲು ಹೆಣಗಾಡಿದ್ದ. ಆ ಚಿತ್ರವನ್ನು ಯಾರೂ ನೋಡಿಲ್ಲ. ಅಂತಹ ನಟನಿಗೆ ಈಗ ರಾಮನ ಪಾತ್ರ ಮಾಡುವ ಬಯಕೆ ಉಂಟಾಗಿದೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

Kangana Ranaut: ‘ಡ್ರಗ್ಸ್​ ತೆಗೆದುಕೊಳ್ಳುವ, ಸ್ತ್ರೀಲೋಲ ನಟನಿಗೆ ರಾಮನ ಪಾತ್ರವೇ? ಇದೆಂಥ ಕಲಿಯುಗ’: ಕಂಗನಾ ಕಿಡಿಕಾರಿದ್ದು ಯಾರ ಬಗ್ಗೆ?
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 11, 2023 | 9:38 AM

Share

ಖ್ಯಾತ ನಟಿ ಕಂಗನಾ ರಣಾವತ್​ (Kangana Ranaut) ಅವರು ಅನೇಕ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ. ಅದರಿಂದ ಹಲವು ಬಾರಿ ಅವರು ವಿವಾದ ಮಾಡಿಕೊಂಡಿದ್ದೂ ಉಂಟು. ಈಗ ಅವರು ರಾಮನ ಪಾತ್ರ ಮಾಡಬೇಕು ಎಂದುಕೊಂಡಿರುವ ಬಾಲಿವುಡ್​ ನಟರೊಬ್ಬರ ಬಗ್ಗೆ ಖಾರವಾಗಿ ಟೀಕೆ ಮಾಡಿದ್ದಾರೆ. ಸದ್ಯಕ್ಕೆ ‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನ (Lord Rama) ಪಾತ್ರ ಮಾಡಿದ್ದು, ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆದರೆ ಕಂಗನಾ ಮಾತನಾಡಿರುವುದು ಪ್ರಭಾಸ್​ ಬಗ್ಗೆ ಅಲ್ಲ. ಬಾಲಿವುಡ್​ನಲ್ಲಿ ರಾಮಾಯಣದ ಕುರಿತು ಮತ್ತೊಂದು ಸಿನಿಮಾ ಸಿದ್ಧವಾಗುತ್ತಿದ್ದು, ಆ ಚಿತ್ರದಲ್ಲಿ ರಣಬೀರ್​ ಕಪೂರ್​ಗೆ ರಾಮನ ಪಾತ್ರ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆ ಕುರಿತಾಗಿ ಕಂಗನಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಎಲ್ಲಿಯೂ ಅವರು ರಣಬೀರ್​ ಕಪೂರ್​ (Ranbir Kapoor) ಹೆಸರನ್ನು ಪ್ರಸ್ತಾಪಿಸಿಲ್ಲ. ಹಾಗಿದ್ದರೂ ಕೂಡ ಅದು ಅವರ ಕುರಿತಾಗಿಯೇ ಹೇಳಿದ್ದು ಎಂಬುದು ಎಲ್ಲರಿಗೂ ತಿಳಿಯುತ್ತಿದೆ.

ನಿರ್ದೇಶಕ ನಿತೇಶ್​ ತಿವಾರಿ ಅವರು ರಾಮಾಯಣದ ಕಥೆ ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಸಿನಿಮಾಗೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಸೀತೆ ಪಾತ್ರದಲ್ಲಿ ಆಲಿಯಾ ಭಟ್​, ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ ಹಾಗೂ ರಾವಣನ ಪಾತ್ರದಲ್ಲಿ ಯಶ್​ ನಟಿಸುತ್ತಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಎಲ್ಲವೂ ಅಂತೆ-ಕಂತೆಯ ಹಂತದಲ್ಲೇ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅಷ್ಟರಲ್ಲಾಗಲೇ ಕಂಗನಾ ರಣಾವತ್​ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Kangana Ranaut: ಚಿಕ್ಕ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬಂದ ಹುಡುಗಿಗೆ ಕಂಗನಾ ರಣಾವತ್​ ಕ್ಲಾಸ್​; ವೈರಲ್​ ಆಯ್ತು ಫೋಟೋ

‘ಬಾಲಿವುಡ್​ನಲ್ಲಿ ರಾಮಾಯಣದ ಕುರಿತು ಮತ್ತೊಂದು ಸಿನಿಮಾ ಆಗುತ್ತಿದೆ ಎಂಬ ಸುದ್ದಿ ಕೇಳಿದೆ. ಬಡಕಲು ಬಿಳಿ ಇಲಿ ರೀತಿ ಇರುವ ಒಬ್ಬ ವ್ಯಕ್ತಿಯು ನಟ ಅಂತ ಕರೆಸಿಕೊಳ್ಳುತ್ತಾನೆ. ಚಿತ್ರರಂಗದಲ್ಲಿ ಇರುವ ಎಲ್ಲರ ಬಗ್ಗೆಯೂ ಆತ ಅಪಪ್ರಚಾರ ಮಾಡಿಸುತ್ತಾನೆ. ಹೆಂಗಸರ ಸಹವಾಸ ಮತ್ತು ಡ್ರಗ್ಸ್​ ಸೇವನೆಗೆ ಆತ ಫೇಮಸ್​. ಇತ್ತೀಚೆಗೆ ಶಿವನ ಪಾತ್ರ ಮಾಡಲು ಹೆಣಗಾಡಿದ್ದ. ಆ ಚಿತ್ರವನ್ನು ಯಾರೂ ನೋಡಿಲ್ಲ. ಅದರ ಮುಂದಿನ ಭಾಗ ಮಾಡಲು ಕೂಡ ಯಾರೂ ಸಿದ್ಧರಿಲ್ಲ. ಅಂತಹ ನಟನಿಗೆ ಈಗ ರಾಮನ ಪಾತ್ರ ಮಾಡುವ ಬಯಕೆ ಉಂಟಾಗಿದೆ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kangana Ranaut: ವಿಜಯೇಂದ್ರ ಪ್ರಸಾದ್ ಜತೆ ದೇವಸ್ಥಾನ ಸುತ್ತಿದ್ದ ಕಂಗನಾ ರಣಾವತ್​; ಫೋಟೋ ವೈರಲ್​

‘ದಕ್ಷಿಣದ ಯುವ ಸೂಪರ್​ ಸ್ಟಾರ್​ ಒಬ್ಬರು ಫ್ಯಾಮಿಲಿ ಮ್ಯಾನ್​ ರೀತಿ ಗುರುತಿಸಿಕೊಂಡಿದ್ದಾರೆ. ಎಲ್ಲ ರೀತಿಯಿಂದಲೂ ಅವರು ರಾಮನ ರೀತಿ ಕಾಣುತ್ತಾರೆ. ಅಂಥವರಿಗೆ ಹೋಗಿ ರಾವಣನ ಪಾತ್ರ ನೀಡುತ್ತಾರಂತೆ. ಇದು ಎಂಥ ಕಲಿಯುಗ? ಬಡಕಲು ದೇಹ ಇರುವ, ಡ್ರಗ್​ ಅಡಿಕ್ಟ್ ಆಗಿರುವಂತವನು ರಾಮನ ಪಾತ್ರ ಮಾಡಬಾರದು. ಜೈ ಶ್ರೀರಾಮ್​’ ಎಂದು ಕಂಗನಾ ರಣಾವತ್​ ಅವರು ಇನ್​ಸ್ಟಾಗ್ರಾಮ್​​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ. ಇದರ ಸ್ಕ್ರೀನ್​ ಶಾಟ್​ ಹರಿದಾಡುತ್ತಿದೆ. ಈ ಬಗ್ಗೆ ರಣಬೀರ್ ಕಪೂರ್​ ಅವರು ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು