AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ತ ಕುಡೀತಾಳೆ, ಮಾಟ ಮಾಡ್ತಾಳೆ’: ಕಂಗನಾ ಮೇಲೆ ಬಂದಿತ್ತು ಏನೇನೋ ಆರೋಪ

Kangana Ranaut: ಸಂಸದೆಯೂ ಆಗಿರುವ ಕಂಗನಾ ರನೌತ್, ಹಲವು ವರ್ಷಗಳಿಂದಲೂ ಬಾಲಿವುಡ್​ ಮಂದಿಯನ್ನು, ಬಾಲಿವುಡ್​​ನ ಪದ್ಧತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಕರಣ್ ಜೋಹರ್, ಮಹೇಶ್ ಭಟ್ ಇನ್ನೂ ಕೆಲವು ‘ದೊಡ್ಡವರ’ ಬಗ್ಗೆ ಬಹಿರಂಗ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಕಂಗನಾ, ಸಂದರ್ಶನವೊಂದರಲ್ಲಿ ತಮ್ಮ ಮೇಲೆ ಬಾಲಿವುಡ್​ನ ಕೆಲವರು ಮಾಡಿದ್ದ ನೀಚ ಆರೋಪಗಳ ಬಗ್ಗೆ ಮಾತನಾಡಿದ್ದಾರೆ.

‘ರಕ್ತ ಕುಡೀತಾಳೆ, ಮಾಟ ಮಾಡ್ತಾಳೆ’: ಕಂಗನಾ ಮೇಲೆ ಬಂದಿತ್ತು ಏನೇನೋ ಆರೋಪ
Kangana1
ಮಂಜುನಾಥ ಸಿ.
|

Updated on:Apr 17, 2026 | 1:27 PM

Share

ಕಂಗನಾ ರನೌತ್ (Kangana Ranaut), ಬಾಲಿವುಡ್​​ನಲ್ಲಿದ್ದರೂ ಬಾಲಿವುಡ್​​ನವರಲ್ಲ ಸ್ಟಾರ್ ನಟಿ. ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿಯರಲ್ಲಿ ಪ್ರಮುಖರಾಗಿರುವ ಕಂಗನಾ ರನೌತ್ ನಟನೆಗೆ ಮೂರು ರಾಷ್ಟ್ರಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಸಂಸದೆಯೂ ಆಗಿರುವ ಕಂಗನಾ ರನೌತ್, ಹಲವು ವರ್ಷಗಳಿಂದಲೂ ಬಾಲಿವುಡ್​ ಮಂದಿಯನ್ನು, ಬಾಲಿವುಡ್​​ನ ಪದ್ಧತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಕರಣ್ ಜೋಹರ್, ಮಹೇಶ್ ಭಟ್ ಇನ್ನೂ ಕೆಲವು ‘ದೊಡ್ಡವರ’ ಬಗ್ಗೆ ಬಹಿರಂಗ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಕಂಗನಾ, ಸಂದರ್ಶನವೊಂದರಲ್ಲಿ ತಮ್ಮ ಮೇಲೆ ಬಾಲಿವುಡ್​ನ ಕೆಲವರು ಮಾಡಿದ್ದ ನೀಚ ಆರೋಪಗಳ ಬಗ್ಗೆ ಮಾತನಾಡಿದ್ದಾರೆ.

ಹಿಂದೊಮ್ಮೆ ಕಂಗನಾ ರನೌತ್ ಅವರು ನಟ ಅಧ್ಯಯನ್ ಸುಮನ್ ಅವರೊಟ್ಟಿಗೆ ಪ್ರೀತಿಯಲ್ಲಿದ್ದರು. ಇಬ್ಬರೂ ಒಟ್ಟಿಗೆ ‘ರಾಜ್ 2’ ಸಿನಿಮಾನಲ್ಲಿ ನಟಿಸಿದ್ದರು. ಆಗ ಪರಸ್ಪರ ರಿಲೇಷನ್​​ನಲ್ಲಿದ್ದರು. ಆದರೆ ಒಂದೇ ವರ್ಷಕ್ಕೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತು. ಆ ಸಮಯದಲ್ಲಿ ಕಂಗನಾ ರನೌತ್ ವಿರುದ್ಧ ಅಧ್ಯಯನ್, ದೈಹಿಕ ಮತ್ತು ಮಾನಸಿಕ ಹಲ್ಲೆಯ ಆರೋಪ ಮಾಡಿ ದೂರು ಸಹ ದಾಖಲಿಸಿದ್ದರು. ಈ ವಿಷಯವನ್ನು ಸಂದರ್ಶನದಲ್ಲಿ ನಟಿ ಕಂಗನಾ ರನೌತ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಕಂಗನಾ ರನೌತ್ ಮುಂದಿನ ಸಿನಿಮಾಕ್ಕೆ ಆ ಕರಾಳ ಘಟನೆ ಸ್ಪೂರ್ತಿ

‘ನನ್ನ ವಿರುದ್ಧ ಆಗ ಏನೇನೋ ಆರೋಪಗಳನ್ನು ಮಾಡಲಾಗಿತ್ತು. ಇವಳು ಮಾಟಗಾತಿ, ರಾಕ್ಷಸಿ, ರಕ್ತ ಕುಡಿಯುತ್ತಾಳೆ. ಕಪ್ಪು ಬಟ್ಟೆ ಇರಿಸಿಕೊಂಡು, ಕತ್ತಲೆ ಕೋಣೆಯಲ್ಲಿ ಕುಳಿತು, ‘ಕಾಲಾ ಜಾದೂ’ (ಮಾಟ) ಮಾಡುತ್ತಾಳೆ ಎಂದೆಲ್ಲ ಸುದ್ದಿ ಹಬ್ಬಿಸಿದ್ದರು. ನನ್ನ ಕರಿಯರ್ ಅನ್ನು ಮುಗಿಸಿಯೇ ಬಿಡಬೇಕು ಎಂದುಕೊಂಡು ಅವರು ಹೀಗೆಲ್ಲ ಸುದ್ದಿಗಳನ್ನು ಹಬ್ಬಿಸಿದ್ದರು’ ಎಂದು ಕಂಗನಾ ರನೌತ್ ಹೇಳಿದ್ದಾರೆ. ‘ಅವರು (ಬಾಲಿವುಡ್​ನ ಕೆಲ ಮಂದಿ) ನನ್ನ ವಿರುದ್ಧ ಇಷ್ಟೆಲ್ಲ ಮಾಡುವಾಗ ನಾನು ಏಕೆ ಅವರನ್ನು ಸುಮ್ಮನೆ ಬಿಡಬೇಕು ಎಂದು ನನಗೆ ಅನಿಸಿತು. ಹಾಗಾಗಿ ನಾನು ಅಂಥಹವರ ವಿರುದ್ಧ ನೇರವಾಗಿ ಮಾತನಾಡಲು ಆರಂಭಿಸಿದೆ’ ಎಂದಿದ್ದಾರೆ ನಟಿ ಕಂಗನಾ ರನೌತ್.

ಕಂಗನಾ ರನೌತ್, ಬಾಲಿವುಡ್​ನ ಪ್ರತಿಭಾವಂತ ನಟಿ. ದಕ್ಷಿಣದ ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಹಲವು ವರ್ಷಗಳಿಂದಲೂ ಅವರು ಬಾಲಿವುಡ್ ವಿರುದ್ಧ ಮಾತನಾಡುತ್ತಲೇ ಇದ್ದಾರೆ. ಇದೀಗ ಅವರು ಬಿಜೆಪಿ ಪಕ್ಷದ ಸದಸ್ಯೆ ಆಗಿದ್ದು, ಮಂಡಿ ಕ್ಷೇತ್ರದಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಿ ಗೆದ್ದು ಸಂಸದೆ ಸಹ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Fri, 17 April 26

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​