AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಲು ಸಿದ್ಧ’; ಕೊನೆಗೂ ತಲೆಬಾಗಿದ ಕಂಗನಾ

ನಟಿ, ಸಂಸದೆ ಕಂಗನಾ ರನೌತ್ ತಾವೇ ನಟಿಸಿ, ನಿರ್ದೇಶನ ಮಾಡಿ, ನಿರ್ಮಾಣವೂ ಮಾಡಿರುವ ಸಿನಿಮಾದ ಬಿಡುಗಡೆಗೆ ಇನ್ನಿಲ್ಲದ ಕಷ್ಟಪಡುತ್ತಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾವನ್ನು ಕಂಗನಾ ನಿರ್ದೇಶನ ಮಾಡಿದ್ದು, ಈ ಸಿನಿಮಾ ಇಂದಿರಾ ಗಾಂಧಿ ಜೀವನ ಆಧರಿಸಿದ ಕತೆ ಹೊಂದಿದೆ. ಈಗ ಸಿನಿಮಾ ರಿಲೀಸ್ ಆಗುವ ಸೂಚನೆ ಸಿಕ್ಕಿದೆ.

‘ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಲು ಸಿದ್ಧ’; ಕೊನೆಗೂ ತಲೆಬಾಗಿದ ಕಂಗನಾ
ಕಂಗನಾ ರನೌತ್
ರಾಜೇಶ್ ದುಗ್ಗುಮನೆ
|

Updated on: Sep 30, 2024 | 12:46 PM

Share

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ರಿಲೀಸ್ ಭಾಗ್ಯ ಸಿಗುವ ಸೂಚನೆ ಸಿಕ್ಕಿದೆ. ಪರಿಷ್ಕರಣಾ ಸಮಿತಿ ಸೂಚಿಸಿದ ಬದಲಾವಣೆಗಳನ್ನು ಮಾಡಲು ನಿರ್ಮಾಣ ಸಂಸ್ಥೆ ಒಪ್ಪಿದೆ. ಈ ಬಗ್ಗೆ ತಂಡದವರು ಬಾಂಬೆ ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ. ಸೋಮವಾರ (ಸೆಪ್ಟೆಂಬರ್ 30) ಕೋರ್ಟ್​ಗೆ ಈ ಬಗ್ಗೆ ತಂಡ ಮಾಹಿತಿ ನೀಡಿದ್ದು, ಗುರುವಾರ (ಅಕ್ಟೋಬರ್ 3) ಮುಂದಿನ ವಿಚಾರಣೆ ಇದೆ.

ಸೆನ್ಸಾರ್ ಮಂಡಳಿಯವರು ‘ಎಮರ್ಜೆನ್ಸಿ’ ನೋಡಿ ನಂತರ ಅದನ್ನು ಪರಿಷ್ಕರಣಾ ಸಮಿತಿಗೆ ವರ್ಗಾಯಿಸಿತ್ತು. ಅವರು ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನೀಡಲು ನಿರಕಾರಿಸಿದ್ದರು. ಜೊತೆಗೆ ಒಂದಷ್ಟು ಬದಲಾವಣೆ ಮಾಡಲು ಸೂಚನೆ ನೀಡಿದ್ದರು. ಆದರೆ, ಇದಕ್ಕೆ ತಂಡ ಸಿದ್ಧ ಇರಲಿಲ್ಲ. ಕೊನೆಗೆ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಈಗ ಕೋರ್ಟ್​ಗೆ ತಂಡದವರು ಮಾಹಿತಿ ನೀಡಿದ್ದು, ಬದಲಾವಣೆಗೆ ಒಪ್ಪಿರೋದಾಗಿ ತಿಳಿಸಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಸಿನಿಮಾ ರಿಲೀಸ್ ಆಗಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಸಿನಿಮಾ ರಿಲೀಸ್ ದಿನಾಂಕ ವಿಳಂಬವಾಗಿದೆ. ಕೊನೆಗೂ ಸಿನಿಮಾ ರಿಲೀಸ್ ಆಗುತ್ತಿದೆ.

‘ಎಮರ್ಜೆನ್ಸಿ’ ಸಿನಿಮಾ ಬಗ್ಗೆ ಅನೇಕರು ಆತಂಕ ಹೊರಹಾಕಿದ್ದಾರೆ. ಅದರಲ್ಲೂ ಪ್ರಮುಖವಾಗಿ ಸಿಖ್ ಸಮುದಾಯದವರು ಅಪಸ್ವರ ತೆಗೆದಿದ್ದಾರೆ. ‘ಸಿಖ್ ಸಮುದಾಯದಯಕ್ಕೆ ಇರುವ ಗೌರವ ಹಾಳು ಮಾಡುವ ಕೆಲಸ ಆಗಿದೆ’ ಎಂದು ಸಿಖ್ ಸಮುದಾಯದವರು ಅಭಿಪ್ರಾಯಪಟ್ಟಿದ್ದರು.

1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ ಸಿನಿಮಾ ಇದೆ. ಕಂಗನಾ ಅವರು ಈ ಚಿತ್ರ ನಿರ್ದೇಶನ ಮಾಡಿದ್ದು ಜೊತೆಗೆ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನುಪಮ್ ಖೇರ್, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಬಾಂಬೆ ಕೋರ್ಟ್ ಆದೇಶದಿಂದ ಕಂಗನಾ ನಿರಾಳ: ‘ಎಮರ್ಜೆನ್ಸಿ’ಗೆ ಬಿಡುಗಡೆ ಭಾಗ್ಯ?

ಕಂಗನಾ ಈಗ ಕೇವಲ ನಟಿ ಮಾತ್ರವಲ್ಲ. ಸಂಸದೆ ಕೂಡ ಹೌದು. ರಾಜಕೀಯದಲ್ಲಿ ಯಶಸ್ಸು ಸಿಕ್ಕರೆ ಚಿತ್ರರಂಗ ತೊರೆಯೋದಾಗಿ ಹೇಳಿದ್ದರು. ಈ ಬಗ್ಗೆ ಅವರು ತಮ್ಮ ನಿಲುವು ಏನು ಎಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಅವರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!