AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಾದವರಿಗೂ ಇವರು ‘ಕಿಡ್ಸ್’ ಅಂತಾರೆ; ಸ್ಟಾರ್ ಮಕ್ಕಳ ಬಗ್ಗೆ ಕಂಗನಾ ನೇರ ಟೀಕೆ

ಕಂಗನಾ ರಣಾವತ್ ಅವರು ನೆಪೋಟಿಸಂ ಬಗ್ಗೆ ಟೀಕೆ ಮಾಡುತ್ತಲೇ ಬರುತ್ತಿದ್ದಾರೆ. ಅವರು ಅನೇಕ ಬಾಡಿ ನೆಪೋ ಕಿಡ್​ಗಳ ಬಗ್ಗೆ ಅಪಸ್ವರ ತೆಗೆದಿದ್ದು ಇದೆ. ಇದನ್ನು ಅವರು ನಿರಂತರವಾಗಿ ಮಾಡುತ್ತಲೇ ಬರುತ್ತಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ಬಹುತೇಕರನ್ನು ಕಂಡರೆ ಆಗೋದಿಲ್ಲ. ಈ ಕುರಿತು ಸಂದರ್ಶನಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ಹೇಳುತ್ತಾ ಇರುತ್ತಾರೆ.

ವಯಸ್ಸಾದವರಿಗೂ ಇವರು ‘ಕಿಡ್ಸ್’ ಅಂತಾರೆ; ಸ್ಟಾರ್ ಮಕ್ಕಳ ಬಗ್ಗೆ ಕಂಗನಾ ನೇರ ಟೀಕೆ
ಕಂಗನಾ-ರಣಬೀರ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Dec 13, 2024 | 9:30 AM

ಕಂಗನಾ ರಣಾವತ್ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರು ಚಿತ್ರರಂಗ ಬಿಟ್ಟು ಸಂಸದೆ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಅವರು ಸಂಸದೆ ಆಗಿದ್ದಾರೆ. ಹೀಗಿರುವಾಗಲೇ ಅವರು ಬಾಲಿವುಡ್​ನಿಂದ ಸಂಪೂರ್ಣ ದೂರ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಸೆಲೆಬ್ರಿಟಿ ಮಕ್ಕಳ ಬಗ್ಗೆ ಟೀಕೆ ಮಾಡಿದ್ದಾರೆ.

ಕಂಗನಾ ರಣಾವತ್ ಅವರು ನೆಪೋಟಿಸಂ ಬಗ್ಗೆ ಟೀಕೆ ಮಾಡುತ್ತಲೇ ಬರುತ್ತಿದ್ದಾರೆ. ಅವರು ಅನೇಕ ಬಾಡಿ ನೆಪೋ ಕಿಡ್​ಗಳ ಬಗ್ಗೆ ಅಪಸ್ವರ ತೆಗೆದಿದ್ದು ಇದೆ. ಇದನ್ನು ಅವರು ನಿರಂತರವಾಗಿ ಮಾಡುತ್ತಲೇ ಬರುತ್ತಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ಬಹುತೇಕರನ್ನು ಕಂಡರೆ ಆಗೋದಿಲ್ಲ. ಈ ಕುರಿತು ಸಂದರ್ಶನಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ಹೇಳುತ್ತಾ ಇರುತ್ತಾರೆ.

‘40 ವರ್ಷ ಆಗಿದೆ. 30 ವರ್ಷ ದಾಟಿದ ನಟಿಯರಿದ್ದಾರೆ. ಅವರಿಗೆ ಕಿಡ್​ ಎನ್ನುತ್ತಾರೆ. ಅದು ಹೇಗನ್ನಿಸಬೇಡ? 40 ವರ್ಷದ ವ್ಯಕ್ತಿ ಮಕ್ಕಳಂತೆ ಮಾತನಾಡಿದರೆ ನಿಮಗೆ ಹೇಗೆ ಅನಿಸುತ್ತದೆ ಹೇಳಿ’ ಎಂದು ಕಂಗನಾ ಅವರು ನೇರ ಪ್ರಶ್ನೆ ಮಾಡಿದ್ದಾರೆ. 25 ವರ್ಷ ದಾಟಿದವರೂ ಅವರಿನ್ನೂ ಸ್ಟಾರ್​ ಕಿಡ್’ ಎಂದಿರೋ ಕಂಗನಾ ಅವರು, ಅನನ್ಯಾ ಪಾಂಡೆಗೆ ಟಾಂಟ್ ಕೊಟ್ಟಿದ್ದಾರೆ.

ಸೆಲೆಬ್ರಿಟಿ ಮಕ್ಕಳಿಗೆ ಬಾಲಿವುಡ್​ನಲ್ಲಿ ಎಲ್ಲವೂ ವ್ಯವಸ್ಥಿತವಾಗಿದೆ ಎಂಬ ಆರೋಪ ಕಂಗನಾ ರಣಾವತ್ ಅವರದ್ದು. ಅವರು ನೆಪೋಟಿಸಂನ ಟೀಕಿಸುತ್ತಾ ಬರುತ್ತಿದ್ದಾರೆ. ಈ ಕಾರಣದಿಂದಲೂ ಕಂಗನಾ ರಣಾವತ್ ಅವರು ಬಾಲಿವುಡ್​ನಲ್ಲಿ ಅನೇಕರ ದ್ವೇಷ ಕಟ್ಟಿಕೊಂಡಿದ್ದಾರೆ. ಅವರು ಕಷ್ಟದಿಂದ ಬಂದಿರೋದರಿಂದ ಇದೆಲ್ಲ ತಪ್ಪಾಗಿ ಅವರಿಗೆ ಕಾಣುತ್ತಿದೆ.

ಇದನ್ನೂ ಓದಿ: ಮದುವೆಯಲ್ಲಿ ಶೇ. 99ರಷ್ಟು ಪುರುಷರದೇ ತಪ್ಪಿರುತ್ತೆ; ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್​ ಆತ್ಮಹತ್ಯೆ ಬಗ್ಗೆ ಕಂಗನಾ ರಣಾವತ್ ಪ್ರತಿಕ್ರಿಯೆ

ಕಂಗನಾ ರಣಾವತ್ ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರು ಈಗ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ರಿಲೀಸ್ ಆಗಬೇಕಿತ್ತು. ಆದರೆ, ವಿಳಂಬ ಆಯಿತು. ಸೆನ್ಸಾರ್ ಪತ್ರ ಸಿಗಲು ಅವರಿಗೆ ವಿಳಂಬ ಆಗಿದೆ. ಈಗ ಸಿನಿಮಾ ರಿಲೀಸ್ ಮಾಡಲು ರೆಡಿ ಇದ್ದಾರೆ. ಇದರ ರಿಲೀಸ್ ದಿನಾಂಕ ಇನ್ನಷ್ಟೇ ಘೋಷಣೆ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:30 am, Fri, 13 December 24

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ