AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಬಿಜೆಪಿಯಿಂದ ಮಂಡಿ ಲೋಕಸಭಾ ಕ್ಷೇತ್ರದ ಟಿಕೆಟ್​ ಸಿಕ್ಕಿದೆ.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on:Mar 24, 2024 | 11:18 PM

Share

ಲೋಕಸಭಾ ಚುನಾವಣೆಗೆ (Lok Sabha Election) ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ನಟಿ ಕಂಗನಾ ರಣಾವತ್​ (Kangana Ranaut) ಅವರ ಹೆಸರು ಕೂಡ ಇದೆ. ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್​ ಅವರಿಗೆ ಈಗ ಬಿಜೆಪಿ ಟಿಕೆಟ್​ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ (BJP) ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಧಿಕೃತವಾಗಿ ಕಂಗನಾ ರಣಾವತ್​ ಅವರು ರಾಜಕೀಯದ ಅಖಾಡಕ್ಕೆ ಇಳಿಯುತ್ತಿದ್ದಾರೆ.

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ಅವರು ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಮಂಡಿ ಕ್ಷೇತ್ರದ ಟಿಕೆಟ್​ ಸಿಕ್ಕಿದೆ. ಸ್ಟಾರ್​ ನಟಿಯಾಗಿರುವ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಅವರ ರಾಜಕೀಯ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಕಂಗನಾ ರಣಾವತ್ ಎಕ್ಸ್​ (ಟ್ವಿಟರ್​) ಪೋಸ್ಟ್​:

‘ನನ್ನ ಪ್ರೀತಿಯ ಭಾರತ ಹಾಗೂ ಭಾರತೀಯರ ಸ್ವಂತ ಪಕ್ಷವಾದ ಭಾರತೀಯ ಜನತಾ ಪಾರ್ಟಿಗೆ ನಾನು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದೇನೆ. ಇಂದು ರಾಷ್ಟ್ರೀಯ ನಾಯಕರು ನನ್ನ ಜನ್ಮ ಸ್ಥಳವಾದ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಚುನಾವಣಾ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಹೈಕಮಾಂಡ್​ ತೆಗೆದುಕೊಂಡ ಈ ನಿರ್ಧಾರವನ್ನು ನಾನು ಪಾಲಿಸುತ್ತೇನೆ. ಅಧಿಕೃತವಾಗಿ ಪಕ್ಷವನ್ನು ಸೇರಿಕೊಂಡಿದ್ದಕ್ಕೆ ನನಗೆ ಹೆಮ್ಮೆ ಮತ್ತು ಗೌರವ ಎನಿಸುತ್ತಿದೆ. ನಂಬಿಕಾರ್ಹ ಜನಸೇವಕಿ ಹಾಗೂ ಕಾರ್ಯಕರ್ತೆಯಾಗುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಪ್ರತಿಕ್ರಿಯಿಸಿದ್ದಾರೆ.

Arun Govil: ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ನೇರ ಮತ್ತು ನಿಷ್ಠುರವಾದ ನಡೆ-ನುಡಿಯಿಂದಾಗಿ ಕಂಗನಾ ರಣಾವತ್​ ಅವರು ಗುರುತಿಸಿಕೊಂಡಿದ್ದಾರೆ. ಇದರಿಂದಾಗಿ ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದು ಕೂಡ ಉಂಟು. ಸಿನಿಮಾದಲ್ಲಿ ಜನಪ್ರಿಯತೆ ಪಡೆದ ಅವರು ಈಗ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಈ ಹಿಂದೆ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗುವ ಮೂಲಕವೂ ಕಂಗನಾ ಸುದ್ದಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:51 pm, Sun, 24 March 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ