AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಬಿಜೆಪಿಯಿಂದ ಮಂಡಿ ಲೋಕಸಭಾ ಕ್ಷೇತ್ರದ ಟಿಕೆಟ್​ ಸಿಕ್ಕಿದೆ.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on:Mar 24, 2024 | 11:18 PM

Share

ಲೋಕಸಭಾ ಚುನಾವಣೆಗೆ (Lok Sabha Election) ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ನಟಿ ಕಂಗನಾ ರಣಾವತ್​ (Kangana Ranaut) ಅವರ ಹೆಸರು ಕೂಡ ಇದೆ. ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್​ ಅವರಿಗೆ ಈಗ ಬಿಜೆಪಿ ಟಿಕೆಟ್​ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ (BJP) ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಧಿಕೃತವಾಗಿ ಕಂಗನಾ ರಣಾವತ್​ ಅವರು ರಾಜಕೀಯದ ಅಖಾಡಕ್ಕೆ ಇಳಿಯುತ್ತಿದ್ದಾರೆ.

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ಅವರು ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಮಂಡಿ ಕ್ಷೇತ್ರದ ಟಿಕೆಟ್​ ಸಿಕ್ಕಿದೆ. ಸ್ಟಾರ್​ ನಟಿಯಾಗಿರುವ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಅವರ ರಾಜಕೀಯ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಕಂಗನಾ ರಣಾವತ್ ಎಕ್ಸ್​ (ಟ್ವಿಟರ್​) ಪೋಸ್ಟ್​:

‘ನನ್ನ ಪ್ರೀತಿಯ ಭಾರತ ಹಾಗೂ ಭಾರತೀಯರ ಸ್ವಂತ ಪಕ್ಷವಾದ ಭಾರತೀಯ ಜನತಾ ಪಾರ್ಟಿಗೆ ನಾನು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದೇನೆ. ಇಂದು ರಾಷ್ಟ್ರೀಯ ನಾಯಕರು ನನ್ನ ಜನ್ಮ ಸ್ಥಳವಾದ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಚುನಾವಣಾ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಹೈಕಮಾಂಡ್​ ತೆಗೆದುಕೊಂಡ ಈ ನಿರ್ಧಾರವನ್ನು ನಾನು ಪಾಲಿಸುತ್ತೇನೆ. ಅಧಿಕೃತವಾಗಿ ಪಕ್ಷವನ್ನು ಸೇರಿಕೊಂಡಿದ್ದಕ್ಕೆ ನನಗೆ ಹೆಮ್ಮೆ ಮತ್ತು ಗೌರವ ಎನಿಸುತ್ತಿದೆ. ನಂಬಿಕಾರ್ಹ ಜನಸೇವಕಿ ಹಾಗೂ ಕಾರ್ಯಕರ್ತೆಯಾಗುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಪ್ರತಿಕ್ರಿಯಿಸಿದ್ದಾರೆ.

Arun Govil: ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ನೇರ ಮತ್ತು ನಿಷ್ಠುರವಾದ ನಡೆ-ನುಡಿಯಿಂದಾಗಿ ಕಂಗನಾ ರಣಾವತ್​ ಅವರು ಗುರುತಿಸಿಕೊಂಡಿದ್ದಾರೆ. ಇದರಿಂದಾಗಿ ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದು ಕೂಡ ಉಂಟು. ಸಿನಿಮಾದಲ್ಲಿ ಜನಪ್ರಿಯತೆ ಪಡೆದ ಅವರು ಈಗ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಈ ಹಿಂದೆ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗುವ ಮೂಲಕವೂ ಕಂಗನಾ ಸುದ್ದಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:51 pm, Sun, 24 March 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು