AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಬಿಜೆಪಿಯಿಂದ ಮಂಡಿ ಲೋಕಸಭಾ ಕ್ಷೇತ್ರದ ಟಿಕೆಟ್​ ಸಿಕ್ಕಿದೆ.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on:Mar 24, 2024 | 11:18 PM

Share

ಲೋಕಸಭಾ ಚುನಾವಣೆಗೆ (Lok Sabha Election) ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ನಟಿ ಕಂಗನಾ ರಣಾವತ್​ (Kangana Ranaut) ಅವರ ಹೆಸರು ಕೂಡ ಇದೆ. ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್​ ಅವರಿಗೆ ಈಗ ಬಿಜೆಪಿ ಟಿಕೆಟ್​ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ (BJP) ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಧಿಕೃತವಾಗಿ ಕಂಗನಾ ರಣಾವತ್​ ಅವರು ರಾಜಕೀಯದ ಅಖಾಡಕ್ಕೆ ಇಳಿಯುತ್ತಿದ್ದಾರೆ.

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ಅವರು ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಮಂಡಿ ಕ್ಷೇತ್ರದ ಟಿಕೆಟ್​ ಸಿಕ್ಕಿದೆ. ಸ್ಟಾರ್​ ನಟಿಯಾಗಿರುವ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಅವರ ರಾಜಕೀಯ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಕಂಗನಾ ರಣಾವತ್ ಎಕ್ಸ್​ (ಟ್ವಿಟರ್​) ಪೋಸ್ಟ್​:

‘ನನ್ನ ಪ್ರೀತಿಯ ಭಾರತ ಹಾಗೂ ಭಾರತೀಯರ ಸ್ವಂತ ಪಕ್ಷವಾದ ಭಾರತೀಯ ಜನತಾ ಪಾರ್ಟಿಗೆ ನಾನು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದೇನೆ. ಇಂದು ರಾಷ್ಟ್ರೀಯ ನಾಯಕರು ನನ್ನ ಜನ್ಮ ಸ್ಥಳವಾದ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಚುನಾವಣಾ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಹೈಕಮಾಂಡ್​ ತೆಗೆದುಕೊಂಡ ಈ ನಿರ್ಧಾರವನ್ನು ನಾನು ಪಾಲಿಸುತ್ತೇನೆ. ಅಧಿಕೃತವಾಗಿ ಪಕ್ಷವನ್ನು ಸೇರಿಕೊಂಡಿದ್ದಕ್ಕೆ ನನಗೆ ಹೆಮ್ಮೆ ಮತ್ತು ಗೌರವ ಎನಿಸುತ್ತಿದೆ. ನಂಬಿಕಾರ್ಹ ಜನಸೇವಕಿ ಹಾಗೂ ಕಾರ್ಯಕರ್ತೆಯಾಗುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಪ್ರತಿಕ್ರಿಯಿಸಿದ್ದಾರೆ.

Arun Govil: ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ನೇರ ಮತ್ತು ನಿಷ್ಠುರವಾದ ನಡೆ-ನುಡಿಯಿಂದಾಗಿ ಕಂಗನಾ ರಣಾವತ್​ ಅವರು ಗುರುತಿಸಿಕೊಂಡಿದ್ದಾರೆ. ಇದರಿಂದಾಗಿ ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದು ಕೂಡ ಉಂಟು. ಸಿನಿಮಾದಲ್ಲಿ ಜನಪ್ರಿಯತೆ ಪಡೆದ ಅವರು ಈಗ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಈ ಹಿಂದೆ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗುವ ಮೂಲಕವೂ ಕಂಗನಾ ಸುದ್ದಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:51 pm, Sun, 24 March 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ