AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಬಿಜೆಪಿಯಿಂದ ಮಂಡಿ ಲೋಕಸಭಾ ಕ್ಷೇತ್ರದ ಟಿಕೆಟ್​ ಸಿಕ್ಕಿದೆ.

ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ
ಕಂಗನಾ ರಣಾವತ್
Follow us
ಮದನ್​ ಕುಮಾರ್​
|

Updated on:Mar 24, 2024 | 11:18 PM

ಲೋಕಸಭಾ ಚುನಾವಣೆಗೆ (Lok Sabha Election) ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ನಟಿ ಕಂಗನಾ ರಣಾವತ್​ (Kangana Ranaut) ಅವರ ಹೆಸರು ಕೂಡ ಇದೆ. ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್​ ಅವರಿಗೆ ಈಗ ಬಿಜೆಪಿ ಟಿಕೆಟ್​ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ (BJP) ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಧಿಕೃತವಾಗಿ ಕಂಗನಾ ರಣಾವತ್​ ಅವರು ರಾಜಕೀಯದ ಅಖಾಡಕ್ಕೆ ಇಳಿಯುತ್ತಿದ್ದಾರೆ.

‘ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್​ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ಅವರು ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಮಂಡಿ ಕ್ಷೇತ್ರದ ಟಿಕೆಟ್​ ಸಿಕ್ಕಿದೆ. ಸ್ಟಾರ್​ ನಟಿಯಾಗಿರುವ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಅವರ ರಾಜಕೀಯ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಕಂಗನಾ ರಣಾವತ್ ಎಕ್ಸ್​ (ಟ್ವಿಟರ್​) ಪೋಸ್ಟ್​:

‘ನನ್ನ ಪ್ರೀತಿಯ ಭಾರತ ಹಾಗೂ ಭಾರತೀಯರ ಸ್ವಂತ ಪಕ್ಷವಾದ ಭಾರತೀಯ ಜನತಾ ಪಾರ್ಟಿಗೆ ನಾನು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದೇನೆ. ಇಂದು ರಾಷ್ಟ್ರೀಯ ನಾಯಕರು ನನ್ನ ಜನ್ಮ ಸ್ಥಳವಾದ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಚುನಾವಣಾ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಹೈಕಮಾಂಡ್​ ತೆಗೆದುಕೊಂಡ ಈ ನಿರ್ಧಾರವನ್ನು ನಾನು ಪಾಲಿಸುತ್ತೇನೆ. ಅಧಿಕೃತವಾಗಿ ಪಕ್ಷವನ್ನು ಸೇರಿಕೊಂಡಿದ್ದಕ್ಕೆ ನನಗೆ ಹೆಮ್ಮೆ ಮತ್ತು ಗೌರವ ಎನಿಸುತ್ತಿದೆ. ನಂಬಿಕಾರ್ಹ ಜನಸೇವಕಿ ಹಾಗೂ ಕಾರ್ಯಕರ್ತೆಯಾಗುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಪ್ರತಿಕ್ರಿಯಿಸಿದ್ದಾರೆ.

Arun Govil: ‘ರಾಮಾಯಣ’ ಧಾರಾವಾಹಿ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ನೇರ ಮತ್ತು ನಿಷ್ಠುರವಾದ ನಡೆ-ನುಡಿಯಿಂದಾಗಿ ಕಂಗನಾ ರಣಾವತ್​ ಅವರು ಗುರುತಿಸಿಕೊಂಡಿದ್ದಾರೆ. ಇದರಿಂದಾಗಿ ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದು ಕೂಡ ಉಂಟು. ಸಿನಿಮಾದಲ್ಲಿ ಜನಪ್ರಿಯತೆ ಪಡೆದ ಅವರು ಈಗ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಈ ಹಿಂದೆ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗುವ ಮೂಲಕವೂ ಕಂಗನಾ ಸುದ್ದಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:51 pm, Sun, 24 March 24

ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ