AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ದೆಹಲಿಯಲ್ಲಿ ಮೊದಲ ಬಾರಿ ಮಹಿಳೆಯಿಂದ ರಾವಣ ದಹನ; ಇತಿಹಾಸ ಬರೆಯಲಿರುವ ಕಂಗನಾ ರಣಾವತ್​

Ravan Dahan: ಕಳೆದ 50 ವರ್ಷಗಳಿಂದ ಪುರುಷರಿಂದಲೇ ರಾವಣ ದಹನ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಕಂಗನಾ ರಣಾವತ್​ ಈ ಕೆಲಸ ಮಾಡಲಿದ್ದಾರೆ. ಕೆಂಪು ಕೋಟೆಯಲ್ಲಿ ನಡೆಯುವ ‘ಲವಕುಶ ರಾಮ್​ಲೀಲಾ’ದಲ್ಲಿ ರಾವಣ ದಹನ ಮಾಡಿದ ಮೊದಲ ಮಹಿಳೆ ಎಂಬ ಖ್ಯಾತಿಗೆ ಅವರು ಪಾತ್ರರಾಗುತ್ತಿದ್ದಾರೆ. ಆ ಮೂಲಕ ಹೊಸ ಇತಿಹಾಸ ನಿರ್ಮಾಣ ಆಗಲಿದೆ.

Kangana Ranaut: ದೆಹಲಿಯಲ್ಲಿ ಮೊದಲ ಬಾರಿ ಮಹಿಳೆಯಿಂದ ರಾವಣ ದಹನ; ಇತಿಹಾಸ ಬರೆಯಲಿರುವ ಕಂಗನಾ ರಣಾವತ್​
ಕಂಗನಾ ರಣಾವತ್​, ರಾವಣ ದಹನ
Follow us
ಮದನ್​ ಕುಮಾರ್​
|

Updated on: Oct 23, 2023 | 7:34 PM

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರು ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈಗ ಅವರು ರಿಯಲ್​ ಲೈಫ್​ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಲವಕುಶ ರಾಮ್​ಲೀಲಾ (Lav Kush Ramleela) ಸಮಾರಂಭದಲ್ಲಿ ಅವರು ರಾವಣ ದಹನ ಮಾಡಲಿದ್ದಾರೆ. 50 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯಿಂದ ರಾವಣ ದಹನ (Ravan Dahan) ಆಗುತ್ತಿದೆ. ಆ ಮೂಲಕ ಕಂಗನಾ ರಣಾವತ್​​ ಅವರು ದಾಖಲೆ ಬರೆಯಲಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳವಾರ (ಅಕ್ಟೋಬರ್​ 24) ಈ ಸಮಾರಂಭ ನಡೆಯಲಿದೆ.

ಕಳೆದ 50 ವರ್ಷಗಳಿಂದ ಪುರುಷರಿಂದಲೇ ರಾವಣ ದಹನ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಕಂಗನಾ ರಣಾವತ್​ ಅವರು ಈ ಕೆಲಸ ಮಾಡಲಿದ್ದಾರೆ. ಕೆಂಪು ಕೋಟೆಯಲ್ಲಿ ನಡೆಯುವ ‘ಲವಕುಶ ರಾಮ್​ಲೀಲಾ’ದಲ್ಲಿ ರಾವಣ ದಹನ ಮಾಡಿದ ಮೊದಲ ಮಹಿಳೆ ಎಂಬ ಖ್ಯಾತಿಗೆ ಕಂಗನಾ ಪಾತ್ರರಾಗುತ್ತಿದ್ದಾರೆ. ಕಳೆದ ವರ್ಷ ಪ್ರಭಾಸ್​ ಅವರು ರಾವಣ ದಹನ ಮಾಡಿದ್ದರು. ಅದಕ್ಕೂ ಹಿಂದಿನ ವರ್ಷಗಳಲ್ಲಿ ನರೇಂದ್ರ ಮೋದಿ, ರಾಮತಾಥ್​ ಕೋವಿಂದ್​, ಅಜಯ್​ ದೇವಗನ್​, ಜಾನ್​ ಅಬ್ರಾಹಂ ಮುಂತಾದವರು ಇದರಲ್ಲಿ ಭಾಗಿ ಆಗಿದ್ದರು.

ಕಂಗನಾ ಅವರು ರಾವಣ ದಹನ ಮಾಡಲಿರುವ ಬಗ್ಗೆ ‘ಲವಕುಶ ರಾಮ್​ಲೀಲಾ ಕಮಿಟಿ’ ಅಧ್ಯಕ್ಷ ಅರ್ಜುನ್​ ಸಿಂಗ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಮಹಿಳೆಯರಿಗೆ ಸಮಾನ ಹಕ್ಕು ಸಿಗಬೇಕು ಎಂದು ನಮ್ಮ ಕಮಿಟಿ ಬಯಸುತ್ತದೆ. ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗುತ್ತಿದೆ. ಇನ್ನೂ ಸುಧಾರಣೆ ಆಗುವುದು ಬಾಕಿ ಇದೆ. ಮಹಿಳಾ ಮೀಸಲಾತಿ ಮಸೂದೆಯು ನಮ್ಮ ದೇಶ ಮತ್ತು ಸಮಾಜದ ಅಭಿವೃದ್ಧಿಗೆ ಸಹಕಾರಿ ಆಗಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ

ಕಂಗನಾ ರಣಾವತ್​ ನಟನೆಯ ‘ತೇಜಸ್​’ ಸಿನಿಮಾ ಕೂಡ ಇದೇ ವಾರ ಬಿಡುಗಡೆ ಆಗುತ್ತಿದೆ. ಈ ಶುಕ್ರವಾರ (ಅ.27) ತೆರೆಕಾಣಲಿರುವ ಈ ಸಿನಿಮಾದ ಪ್ರಚಾರ ಕಾರ್ಯದಲ್ಲೂ ಕಂಗನಾ ಬ್ಯುಸಿ ಆಗಿದ್ದಾರೆ. ‘ನಮಸ್ಕಾರ ಗೆಳೆಯರೇ.. ಅಕ್ಟೋಬರ್​ 24ರಂದು ರಾವಣ ದಹನ ಮಾಡಲು, ಕೆಟ್ಟದ್ದರ ಮೇಲೆ ಒಳ್ಳೆಯದರ ಗೆಲುವನ್ನು ಸ್ಥಾಪಿಸಲು ಬರುತ್ತಿದ್ದೇನೆ. ಇದರಲ್ಲಿ ನೀವೂ ಕೂಡ ಭಾಗಿಯಾಗಿ. ಹಾಗೆಯೇ, ಅಕ್ಟೋಬರ್​ 27ರಂದು ನನ್ನ ‘ತೇಜಸ್​’ ಸಿನಿಮಾ ರಿಲೀಸ್​ ಆಗಲಿದೆ. ಆ ಸಿನಿಮಾದಲ್ಲಿ ಭಾರತೀಯ ವಾಯುಸೇನೆಯ ಕಥೆ ಇದೆ. ಅದನ್ನು ನೋಡಲು ಮರೆಯದಿರಿ. ಜೈ ಶ್ರೀರಾಮ್​’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ