AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ದೆಹಲಿಯಲ್ಲಿ ಮೊದಲ ಬಾರಿ ಮಹಿಳೆಯಿಂದ ರಾವಣ ದಹನ; ಇತಿಹಾಸ ಬರೆಯಲಿರುವ ಕಂಗನಾ ರಣಾವತ್​

Ravan Dahan: ಕಳೆದ 50 ವರ್ಷಗಳಿಂದ ಪುರುಷರಿಂದಲೇ ರಾವಣ ದಹನ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಕಂಗನಾ ರಣಾವತ್​ ಈ ಕೆಲಸ ಮಾಡಲಿದ್ದಾರೆ. ಕೆಂಪು ಕೋಟೆಯಲ್ಲಿ ನಡೆಯುವ ‘ಲವಕುಶ ರಾಮ್​ಲೀಲಾ’ದಲ್ಲಿ ರಾವಣ ದಹನ ಮಾಡಿದ ಮೊದಲ ಮಹಿಳೆ ಎಂಬ ಖ್ಯಾತಿಗೆ ಅವರು ಪಾತ್ರರಾಗುತ್ತಿದ್ದಾರೆ. ಆ ಮೂಲಕ ಹೊಸ ಇತಿಹಾಸ ನಿರ್ಮಾಣ ಆಗಲಿದೆ.

Kangana Ranaut: ದೆಹಲಿಯಲ್ಲಿ ಮೊದಲ ಬಾರಿ ಮಹಿಳೆಯಿಂದ ರಾವಣ ದಹನ; ಇತಿಹಾಸ ಬರೆಯಲಿರುವ ಕಂಗನಾ ರಣಾವತ್​
ಕಂಗನಾ ರಣಾವತ್​, ರಾವಣ ದಹನ
ಮದನ್​ ಕುಮಾರ್​
|

Updated on: Oct 23, 2023 | 7:34 PM

Share

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರು ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈಗ ಅವರು ರಿಯಲ್​ ಲೈಫ್​ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಲವಕುಶ ರಾಮ್​ಲೀಲಾ (Lav Kush Ramleela) ಸಮಾರಂಭದಲ್ಲಿ ಅವರು ರಾವಣ ದಹನ ಮಾಡಲಿದ್ದಾರೆ. 50 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯಿಂದ ರಾವಣ ದಹನ (Ravan Dahan) ಆಗುತ್ತಿದೆ. ಆ ಮೂಲಕ ಕಂಗನಾ ರಣಾವತ್​​ ಅವರು ದಾಖಲೆ ಬರೆಯಲಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳವಾರ (ಅಕ್ಟೋಬರ್​ 24) ಈ ಸಮಾರಂಭ ನಡೆಯಲಿದೆ.

ಕಳೆದ 50 ವರ್ಷಗಳಿಂದ ಪುರುಷರಿಂದಲೇ ರಾವಣ ದಹನ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಕಂಗನಾ ರಣಾವತ್​ ಅವರು ಈ ಕೆಲಸ ಮಾಡಲಿದ್ದಾರೆ. ಕೆಂಪು ಕೋಟೆಯಲ್ಲಿ ನಡೆಯುವ ‘ಲವಕುಶ ರಾಮ್​ಲೀಲಾ’ದಲ್ಲಿ ರಾವಣ ದಹನ ಮಾಡಿದ ಮೊದಲ ಮಹಿಳೆ ಎಂಬ ಖ್ಯಾತಿಗೆ ಕಂಗನಾ ಪಾತ್ರರಾಗುತ್ತಿದ್ದಾರೆ. ಕಳೆದ ವರ್ಷ ಪ್ರಭಾಸ್​ ಅವರು ರಾವಣ ದಹನ ಮಾಡಿದ್ದರು. ಅದಕ್ಕೂ ಹಿಂದಿನ ವರ್ಷಗಳಲ್ಲಿ ನರೇಂದ್ರ ಮೋದಿ, ರಾಮತಾಥ್​ ಕೋವಿಂದ್​, ಅಜಯ್​ ದೇವಗನ್​, ಜಾನ್​ ಅಬ್ರಾಹಂ ಮುಂತಾದವರು ಇದರಲ್ಲಿ ಭಾಗಿ ಆಗಿದ್ದರು.

ಕಂಗನಾ ಅವರು ರಾವಣ ದಹನ ಮಾಡಲಿರುವ ಬಗ್ಗೆ ‘ಲವಕುಶ ರಾಮ್​ಲೀಲಾ ಕಮಿಟಿ’ ಅಧ್ಯಕ್ಷ ಅರ್ಜುನ್​ ಸಿಂಗ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಮಹಿಳೆಯರಿಗೆ ಸಮಾನ ಹಕ್ಕು ಸಿಗಬೇಕು ಎಂದು ನಮ್ಮ ಕಮಿಟಿ ಬಯಸುತ್ತದೆ. ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗುತ್ತಿದೆ. ಇನ್ನೂ ಸುಧಾರಣೆ ಆಗುವುದು ಬಾಕಿ ಇದೆ. ಮಹಿಳಾ ಮೀಸಲಾತಿ ಮಸೂದೆಯು ನಮ್ಮ ದೇಶ ಮತ್ತು ಸಮಾಜದ ಅಭಿವೃದ್ಧಿಗೆ ಸಹಕಾರಿ ಆಗಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಹೆದರಿದ್ರಾ ಕಂಗನಾ? ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ

ಕಂಗನಾ ರಣಾವತ್​ ನಟನೆಯ ‘ತೇಜಸ್​’ ಸಿನಿಮಾ ಕೂಡ ಇದೇ ವಾರ ಬಿಡುಗಡೆ ಆಗುತ್ತಿದೆ. ಈ ಶುಕ್ರವಾರ (ಅ.27) ತೆರೆಕಾಣಲಿರುವ ಈ ಸಿನಿಮಾದ ಪ್ರಚಾರ ಕಾರ್ಯದಲ್ಲೂ ಕಂಗನಾ ಬ್ಯುಸಿ ಆಗಿದ್ದಾರೆ. ‘ನಮಸ್ಕಾರ ಗೆಳೆಯರೇ.. ಅಕ್ಟೋಬರ್​ 24ರಂದು ರಾವಣ ದಹನ ಮಾಡಲು, ಕೆಟ್ಟದ್ದರ ಮೇಲೆ ಒಳ್ಳೆಯದರ ಗೆಲುವನ್ನು ಸ್ಥಾಪಿಸಲು ಬರುತ್ತಿದ್ದೇನೆ. ಇದರಲ್ಲಿ ನೀವೂ ಕೂಡ ಭಾಗಿಯಾಗಿ. ಹಾಗೆಯೇ, ಅಕ್ಟೋಬರ್​ 27ರಂದು ನನ್ನ ‘ತೇಜಸ್​’ ಸಿನಿಮಾ ರಿಲೀಸ್​ ಆಗಲಿದೆ. ಆ ಸಿನಿಮಾದಲ್ಲಿ ಭಾರತೀಯ ವಾಯುಸೇನೆಯ ಕಥೆ ಇದೆ. ಅದನ್ನು ನೋಡಲು ಮರೆಯದಿರಿ. ಜೈ ಶ್ರೀರಾಮ್​’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು