AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut Twitter: ಟ್ವಿಟರ್​ಗೆ ಮರಳಿದ ಕಂಗನಾ ರಣಾವತ್​; ಖಾತೆ ಪುನಃ ಸಿಕ್ಕ ಬಳಿಕ ಖುಷಿ ಹಂಚಿಕೊಂಡ ನಟಿ

Kangana Ranaut Twitter Account: ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆ ಮತ್ತೆ ಸಕ್ರಿಯವಾಗಿದೆ. 20 ತಿಂಗಳ ಬಳಿಕ ಅವರು ಟ್ವೀಟ್​ ಮಾಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

Kangana Ranaut Twitter: ಟ್ವಿಟರ್​ಗೆ ಮರಳಿದ ಕಂಗನಾ ರಣಾವತ್​; ಖಾತೆ ಪುನಃ ಸಿಕ್ಕ ಬಳಿಕ ಖುಷಿ ಹಂಚಿಕೊಂಡ ನಟಿ
ಕಂಗನಾ ರಣಾವತ್ ಟ್ವಿಟರ್
ಮದನ್​ ಕುಮಾರ್​
|

Updated on:Jan 24, 2023 | 6:41 PM

Share

ನಟಿ ಕಂಗನಾ ರಣಾವತ್​ (Kangana Ranaut) ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. ಸದಾ ವಿವಾದಗಳಿಂದಲೇ ಸದ್ದು ಮಾಡುವ ಕಂಗನಾ ಅವರು ಟ್ವಿಟರ್​ಗೆ ಮರಳಿದ್ದಾರೆ. ಈ ಕುರಿತು ಮಂಗಳವಾರ (ಜ.24) ಅವರು ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ. ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆ (Kangana Ranaut Twitter) ಮತ್ತೆ ಆ್ಯಕ್ಟೀವ್ ಆಗಿದೆ. ಆಕ್ಷೇಪಾರ್ಹ ಟ್ವೀಟ್​ ಮಾಡಿದ ಕಾರಣಕ್ಕೆ 20 ತಿಂಗಳ ಹಿಂದೆ ಅವರ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿತ್ತು. ಆದರೆ ಈಗ ಅವರು ಪುನಃ ಟ್ವಿಟರ್​ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಈ ಕುರಿತು ಅವರು ಸಂತಸ ಹಂಚಿಕೊಂಡಿದ್ದು, ‘ಮರಳಿ ಇಲ್ಲಿಗೆ ಬಂದಿದ್ದಕ್ಕೆ ಖುಷಿ ಆಗುತ್ತಿದೆ’ ಎಂದು ಟ್ವೀಟ್​ (Kangana Ranaut Tweet)​ ಮಾಡಿದ್ದಾರೆ. ಅಭಿಮಾನಿಗಳು ಕಮೆಂಟ್​ಗಳ ಮೂಲಕ ನೆಚ್ಚಿನ ನಟಿಗೆ ಸ್ವಾಗತ ಕೋರುತ್ತಿದ್ದಾರೆ.

ಟ್ವಿಟರ್​ಗೆ ಮರಳಿ ಬಂದಿರುವ ಕಂಗನಾ ರಣಾವತ್​ ಅವರು ತಮ್ಮ ಮುಂಬರುವ ಸಿನಿಮಾ ‘ಎಮರ್ಜೆನ್ಸಿ’ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್​ ಮುಗಿದಿದೆ ಎಂದು ಅವರು ಹೇಳಿದ್ದಾರೆ. ನಟಿಯ ಟ್ವಿಟರ್​ ಖಾತೆ ಮರಳಿ ಸಿಕ್ಕಿದ್ದಕ್ಕೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಂಗನಾ ರಣಾವತ್​ ಅವರು ಸಕ್ರಿಯರಾಗಿರುತ್ತಾರೆ. ಟ್ವಿಟರ್​ನಲ್ಲಿ ಅವರು ಹತ್ತು ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಟ್ವಿಟರ್​ ಖಾತೆ ಸಸ್ಪೆಂಡ್​ ಆದ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿ ಕಂಗನಾ ಹೆಚ್ಚು ಆ್ಯಕ್ಟೀವ್​ ಆಗಿದ್ದರು. ಈಗ ತಾವು ಟ್ವಿಟರ್​ಗೆ ಮರಳಿರುವ ಸುದ್ದಿಯನ್ನು ಇನ್​ಸ್ಟಾಗ್ರಾಮ್​ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​

ಈವರೆಗೆ (24 ಜನವರಿ 2023) ಕಂಗನಾ ರಣಾವತ್​ ಅವರನ್ನು ಟ್ವಿಟರ್​ನಲ್ಲಿ ಬರೋಬ್ಬರಿ 29 ಲಕ್ಷಕ್ಕೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಈಗ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚುತ್ತಿದೆ. ಸಿನಿಮಾ ಮಾತ್ರವಲ್ಲದೇ ರಾಜಕೀಯದ ವಿಚಾರಗಳ ಬಗ್ಗೆಯೂ ಕಂಗನಾ ಟ್ವೀಟ್​​ ಮಾಡಿದ್ದುಂಟು. ಹಾಗಾಗಿ ಅವರನ್ನು ಹಲವು ಕ್ಷೇತ್ರಗಳ ಜನರು ಫಾಲೋ ಮಾಡುತ್ತಾರೆ.

ಇದನ್ನೂ ಓದಿ: ಎಲ್ಲಾ ಬಿಟ್ಟು ಇನ್​ಸ್ಟಾಗ್ರಾಮ್​ ಬಗ್ಗೆ ಕೆಂಡಕಾರಿದ ನಟಿ ಕಂಗನಾ ರಣಾವತ್

ಸಿನಿಮಾ ವಿಚಾರಕ್ಕೆ ಬರೋದಾದರೆ, ನೈಜ ಘಟನೆಗಳನ್ನು ಆಧರಿಸಿದ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಕಂಗನಾ ರಣಾವತ್​ ಬ್ಯುಸಿ ಆಗಿದ್ದಾರೆ. ಇದರಲ್ಲಿ ಅವರು ಇಂದಿರಾ ಗಾಂಧಿ ಪಾತ್ರವನ್ನು ಮಾಡುತ್ತಿದ್ದಾರೆ. ಇರುವ ಆಸ್ತಿಯನ್ನೆಲ್ಲ ಅಡಿವಿಟ್ಟು, ಅದರಿಂದ ತಂದ ಸಾಲದಲ್ಲಿ ತಾವು ಈ ಚಿತ್ರದ ಶೂಟಿಂಗ್​ ಮುಗಿಸಿರುವುದಾಗಿ ಅವರು ಇತ್ತೀಚೆಗೆ ಮಾಹಿತಿ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:26 pm, Tue, 24 January 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು