Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಬಹಿಷ್ಕಾರ ಮಾಡುವಂತೆ ಕಂಗನಾ ಒತ್ತಾಯ; ಗಂಭೀರ ಆರೋಪ ಮಾಡಿದ ನಟಿ

Boycott Grammy Awards: ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭದ ಆಯೋಜಕರ ಮೇಲೆ ಕಂಗನಾ ರಣಾವತ್​ ಅವರು ಕಿಡಿಕಾಡಿದ್ದಾರೆ. ಲೆಜೆಂಡರಿ ಕಲಾವಿದರನ್ನು ಬೇಕಂತಲೇ ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಬಹಿಷ್ಕಾರ ಮಾಡುವಂತೆ ಕಂಗನಾ ಒತ್ತಾಯ; ಗಂಭೀರ ಆರೋಪ ಮಾಡಿದ ನಟಿ
ಕಂಗನಾ ರಣಾವತ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 06, 2022 | 9:25 AM

ನಟಿ ಕಂಗನಾ ರಣಾವತ್​ ಅವರು ಹಲವು ವಿಚಾರಗಳ ಬಗ್ಗೆ ಆಗಾಗ ತಕರಾರು ತೆಗೆಯುತ್ತಾರೆ. ಈಗ ಅವರು ಗ್ರ್ಯಾಮಿ ಅವಾರ್ಡ್ಸ್​ ಮತ್ತು ಆಸ್ಕರ್​​ ಅವಾರ್ಡ್ಸ್​ ಬಗ್ಗೆ ಕಿಡಿ ಕಾರಿದ್ದಾರೆ. ಅಲ್ಲದೇ ಈ ಎರಡೂ ಪ್ರಶಸ್ತಿಗಳ ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅಷ್ಟಕ್ಕೂ ಕಂಗನಾ ರಣಾವತ್​ (Kangana Ranaut) ಅವರು ಈ ಪ್ರತಿಷ್ಠಿತ ಪ್ರಶಸ್ತಿಗಳ ಬಗ್ಗೆ ಗರಂ ಆಗಲು ಕಾರಣ ಏನು? ಇತ್ತೀಚಿಗೆ ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದವು. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕರಿಗೆ ಗ್ರ್ಯಾಮಿ​ ಪ್ರಶಸ್ತಿ (Grammy Awards) ನೀಡಿ ಗೌರವಿಸಲಾಯಿತು. ಆದರೆ ಆ ಸಮಾರಂಭದಲ್ಲಿ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್​ (Lata Mangeshkar) ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಆ ಕಾರಣಕ್ಕಾಗಿ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್​ ಅವರು ಕೂಡ ಗ್ರ್ಯಾಮಿ ಅವಾರ್ಡ್ಸ್​ ಕಾರ್ಯಕ್ರಮದ ಆಯೋಜಕರನ್ನು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ, ಇಂಥ ಪ್ರಶಸ್ತಿಗಳನ್ನು ನಾವು ಬಹಿಷ್ಕಾರ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಸಂಗೀತ ಕ್ಷೇತ್ರಕ್ಕೆ ಲತಾ ಮಂಗೇಶ್ಕರ್​ ಅವರು ನೀಡಿದ ಕೊಡುಗೆ ಅಪಾರ. ಆದರೆ ಅಂಥ ಸಾಧಕಿಯನ್ನು ಗ್ರ್ಯಾಮಿ ಅವಾರ್ಡ್ಸ್​ ಮತ್ತು ಆಸ್ಕರ್​ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಕಡೆಗಣಿಸಲಾಗಿದೆ. ಆಯಾ ವರ್ಷದಲ್ಲಿ ಅಗಲಿದ ಸಾಧಕರಿಗೆ ಈ ರೀತಿಯ ಸಮಾರಂಭಗಳಲ್ಲಿ ಗೌರವ ಸೂಚಿಸಲಾಗುತ್ತದೆ. ಸಿನಿಮಾ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿ, ಇಹಲೋಕ ತ್ಯಜಿಸಿದ ಗಣ್ಯರನ್ನು ಆಸ್ಕರ್​ ಮತ್ತು ಗ್ರ್ಯಾಮಿ ಅವಾರ್ಡ್ಸ್​ ಸಮಾರಂಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಆದರೆ ಇದರಲ್ಲಿ ಲತಾ ಮಂಗೇಶ್ಕರ್​ ಅವರ ಹೆಸರು ಇರಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಗರಂ ಆಗಿದ್ದಾರೆ. ಕಂಗನಾ ರಣಾವತ್​ ಕೂಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಅಂತಾರಾಷ್ಟ್ರೀಯ ಪ್ರಶಸ್ತಿ ಎಂದು ಹೇಳಿಕೊಳ್ಳುವ ಇಂಥ ಎಲ್ಲ ಲೋಕಲ್​ ಪ್ರಶಸ್ತಿಗಳ ಬಗ್ಗೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕು. ಜನಾಂಗ ಮತ್ತು ಸಿದ್ಧಾಂತದ ಕಾರಣದಿಂದ ಲೆಜೆಂಡರಿ ಕಲಾವಿದರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣಿಸಲಾಗಿದೆ. ಭಾರತ ರತ್ನ ಲತಾ ಮಂಗೇಶ್ಕರ್​ ಅವರಿಗೆ ಗೌರವ ಸಲ್ಲಿಸಲು ಗ್ರ್ಯಾಮಿ ಮತ್ತು ಆಸ್ಕರ್​ ಪ್ರಶಸ್ತಿ ಸಮಾರಂಭಗಳು ವಿಫಲವಾಗಿವೆ. ಜಾಗತಿಕ ಪ್ರಶಸ್ತಿ ಎಂದು ಹೇಳಿಕೊಳ್ಳುವ ಈ ಲೋಕಲ್​ ಪ್ರಶಸ್ತಿಗಳನ್ನು ನಮ್ಮ ಮಾಧ್ಯಮಗಳು ಬಹಿಷ್ಕಾರ ಮಾಡಬೇಕು. ಬೇರೆಯವರ ಬಗ್ಗೆ ತಾರತಮ್ಯ ಮಾಡುವ ಪಾಶ್ಚಿಮಾತ್ಯ ಪ್ರಶಸ್ತಿಗಳಿವು’ ಎಂದು ಕಂಗನಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಬೆಂಗಳೂರಿನ ರಿಕ್ಕಿ ಕೇಜ್​ಗೆ ಗ್ರ್ಯಾಮಿ ಪ್ರಶಸ್ತಿ:

64ನೇ ಗ್ರ್ಯಾಮಿ ಅವಾರ್ಡ್​ ಕಾರ್ಯಕ್ರಮ ಇತ್ತೀಚೆಗೆ ಲಾಸ್​ ವೇಗಸ್​ನಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಭಾರತದ ಮ್ಯೂಸಿಕ್​ ಕಂಪೋಸರ್​ ರಿಕ್ಕಿ ಕೇಜ್​ ಅವರಿಗೆ ಪ್ರಶಸ್ತಿ ದೊರೆತಿದೆ. ರಿಕ್ಕಿ ಕೇಜ್​ ಹುಟ್ಟಿದ್ದು ಅಮೆರಿಕದಲ್ಲಿ. ಸದ್ಯ, ಅವರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಿಕ್ಕಿ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಅವರು 100ಕ್ಕೂ ಅಧಿಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2015ರಲ್ಲಿ ‘ವಿಂಡ್ಸ್​ ಆಫ್​ ಸಂಸಾರ’ ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿತ್ತು. ಈ ಬಾರಿ ‘ಡಿವೈನ್​ ಟೈಡ್ಸ್​’ ಆಲ್ಬಂಗೆ ಸ್ಟೀವರ್ಟ್ ಕೋಪ್​​ಲ್ಯಾಂಡ್​ ಹಾಗೂ ರಿಕ್ಕಿ ಕೇಜ್​ಗೆ ಒಟ್ಟಾಗಿ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ. ಈ ಮೂಲಕ ಅವರು ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಚಿತ್ರರಂಗದಲ್ಲಿ ಅವಕಾಶ ಸಿಗಲು ವಶೀಕರಣ ಮಾಡಿಸಿದ್ದ ಪಾಯಲ್; ‘ನನ್ನ ಮೇಲೂ ಇಂಥದ್ದೇ ಆರೋಪ ಬಂದಿತ್ತು’ ಎಂದ ಕಂಗನಾ!

ಬೋಲ್ಡ್ ಲುಕ್​ನಲ್ಲಿ ಮಿಂಚುತ್ತಿದ್ದಾರೆ ಕಂಗನಾ; ಇಲ್ಲಿದೆ ಅವರ ಹಾಟ್​ ಫೋಟೋಗಳು

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ