AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಬಹಿಷ್ಕಾರ ಮಾಡುವಂತೆ ಕಂಗನಾ ಒತ್ತಾಯ; ಗಂಭೀರ ಆರೋಪ ಮಾಡಿದ ನಟಿ

Boycott Grammy Awards: ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭದ ಆಯೋಜಕರ ಮೇಲೆ ಕಂಗನಾ ರಣಾವತ್​ ಅವರು ಕಿಡಿಕಾಡಿದ್ದಾರೆ. ಲೆಜೆಂಡರಿ ಕಲಾವಿದರನ್ನು ಬೇಕಂತಲೇ ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಬಹಿಷ್ಕಾರ ಮಾಡುವಂತೆ ಕಂಗನಾ ಒತ್ತಾಯ; ಗಂಭೀರ ಆರೋಪ ಮಾಡಿದ ನಟಿ
ಕಂಗನಾ ರಣಾವತ್
TV9 Web
| Edited By: |

Updated on: Apr 06, 2022 | 9:25 AM

Share

ನಟಿ ಕಂಗನಾ ರಣಾವತ್​ ಅವರು ಹಲವು ವಿಚಾರಗಳ ಬಗ್ಗೆ ಆಗಾಗ ತಕರಾರು ತೆಗೆಯುತ್ತಾರೆ. ಈಗ ಅವರು ಗ್ರ್ಯಾಮಿ ಅವಾರ್ಡ್ಸ್​ ಮತ್ತು ಆಸ್ಕರ್​​ ಅವಾರ್ಡ್ಸ್​ ಬಗ್ಗೆ ಕಿಡಿ ಕಾರಿದ್ದಾರೆ. ಅಲ್ಲದೇ ಈ ಎರಡೂ ಪ್ರಶಸ್ತಿಗಳ ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅಷ್ಟಕ್ಕೂ ಕಂಗನಾ ರಣಾವತ್​ (Kangana Ranaut) ಅವರು ಈ ಪ್ರತಿಷ್ಠಿತ ಪ್ರಶಸ್ತಿಗಳ ಬಗ್ಗೆ ಗರಂ ಆಗಲು ಕಾರಣ ಏನು? ಇತ್ತೀಚಿಗೆ ಆಸ್ಕರ್​ ಮತ್ತು ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದವು. ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕರಿಗೆ ಗ್ರ್ಯಾಮಿ​ ಪ್ರಶಸ್ತಿ (Grammy Awards) ನೀಡಿ ಗೌರವಿಸಲಾಯಿತು. ಆದರೆ ಆ ಸಮಾರಂಭದಲ್ಲಿ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್​ (Lata Mangeshkar) ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಆ ಕಾರಣಕ್ಕಾಗಿ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್​ ಅವರು ಕೂಡ ಗ್ರ್ಯಾಮಿ ಅವಾರ್ಡ್ಸ್​ ಕಾರ್ಯಕ್ರಮದ ಆಯೋಜಕರನ್ನು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ, ಇಂಥ ಪ್ರಶಸ್ತಿಗಳನ್ನು ನಾವು ಬಹಿಷ್ಕಾರ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಸಂಗೀತ ಕ್ಷೇತ್ರಕ್ಕೆ ಲತಾ ಮಂಗೇಶ್ಕರ್​ ಅವರು ನೀಡಿದ ಕೊಡುಗೆ ಅಪಾರ. ಆದರೆ ಅಂಥ ಸಾಧಕಿಯನ್ನು ಗ್ರ್ಯಾಮಿ ಅವಾರ್ಡ್ಸ್​ ಮತ್ತು ಆಸ್ಕರ್​ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಕಡೆಗಣಿಸಲಾಗಿದೆ. ಆಯಾ ವರ್ಷದಲ್ಲಿ ಅಗಲಿದ ಸಾಧಕರಿಗೆ ಈ ರೀತಿಯ ಸಮಾರಂಭಗಳಲ್ಲಿ ಗೌರವ ಸೂಚಿಸಲಾಗುತ್ತದೆ. ಸಿನಿಮಾ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿ, ಇಹಲೋಕ ತ್ಯಜಿಸಿದ ಗಣ್ಯರನ್ನು ಆಸ್ಕರ್​ ಮತ್ತು ಗ್ರ್ಯಾಮಿ ಅವಾರ್ಡ್ಸ್​ ಸಮಾರಂಭದಲ್ಲಿ ಸ್ಮರಿಸಿಕೊಳ್ಳಲಾಯಿತು. ಆದರೆ ಇದರಲ್ಲಿ ಲತಾ ಮಂಗೇಶ್ಕರ್​ ಅವರ ಹೆಸರು ಇರಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಗರಂ ಆಗಿದ್ದಾರೆ. ಕಂಗನಾ ರಣಾವತ್​ ಕೂಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಅಂತಾರಾಷ್ಟ್ರೀಯ ಪ್ರಶಸ್ತಿ ಎಂದು ಹೇಳಿಕೊಳ್ಳುವ ಇಂಥ ಎಲ್ಲ ಲೋಕಲ್​ ಪ್ರಶಸ್ತಿಗಳ ಬಗ್ಗೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕು. ಜನಾಂಗ ಮತ್ತು ಸಿದ್ಧಾಂತದ ಕಾರಣದಿಂದ ಲೆಜೆಂಡರಿ ಕಲಾವಿದರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣಿಸಲಾಗಿದೆ. ಭಾರತ ರತ್ನ ಲತಾ ಮಂಗೇಶ್ಕರ್​ ಅವರಿಗೆ ಗೌರವ ಸಲ್ಲಿಸಲು ಗ್ರ್ಯಾಮಿ ಮತ್ತು ಆಸ್ಕರ್​ ಪ್ರಶಸ್ತಿ ಸಮಾರಂಭಗಳು ವಿಫಲವಾಗಿವೆ. ಜಾಗತಿಕ ಪ್ರಶಸ್ತಿ ಎಂದು ಹೇಳಿಕೊಳ್ಳುವ ಈ ಲೋಕಲ್​ ಪ್ರಶಸ್ತಿಗಳನ್ನು ನಮ್ಮ ಮಾಧ್ಯಮಗಳು ಬಹಿಷ್ಕಾರ ಮಾಡಬೇಕು. ಬೇರೆಯವರ ಬಗ್ಗೆ ತಾರತಮ್ಯ ಮಾಡುವ ಪಾಶ್ಚಿಮಾತ್ಯ ಪ್ರಶಸ್ತಿಗಳಿವು’ ಎಂದು ಕಂಗನಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಬೆಂಗಳೂರಿನ ರಿಕ್ಕಿ ಕೇಜ್​ಗೆ ಗ್ರ್ಯಾಮಿ ಪ್ರಶಸ್ತಿ:

64ನೇ ಗ್ರ್ಯಾಮಿ ಅವಾರ್ಡ್​ ಕಾರ್ಯಕ್ರಮ ಇತ್ತೀಚೆಗೆ ಲಾಸ್​ ವೇಗಸ್​ನಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಭಾರತದ ಮ್ಯೂಸಿಕ್​ ಕಂಪೋಸರ್​ ರಿಕ್ಕಿ ಕೇಜ್​ ಅವರಿಗೆ ಪ್ರಶಸ್ತಿ ದೊರೆತಿದೆ. ರಿಕ್ಕಿ ಕೇಜ್​ ಹುಟ್ಟಿದ್ದು ಅಮೆರಿಕದಲ್ಲಿ. ಸದ್ಯ, ಅವರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಿಕ್ಕಿ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಅವರು 100ಕ್ಕೂ ಅಧಿಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2015ರಲ್ಲಿ ‘ವಿಂಡ್ಸ್​ ಆಫ್​ ಸಂಸಾರ’ ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿತ್ತು. ಈ ಬಾರಿ ‘ಡಿವೈನ್​ ಟೈಡ್ಸ್​’ ಆಲ್ಬಂಗೆ ಸ್ಟೀವರ್ಟ್ ಕೋಪ್​​ಲ್ಯಾಂಡ್​ ಹಾಗೂ ರಿಕ್ಕಿ ಕೇಜ್​ಗೆ ಒಟ್ಟಾಗಿ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ. ಈ ಮೂಲಕ ಅವರು ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಚಿತ್ರರಂಗದಲ್ಲಿ ಅವಕಾಶ ಸಿಗಲು ವಶೀಕರಣ ಮಾಡಿಸಿದ್ದ ಪಾಯಲ್; ‘ನನ್ನ ಮೇಲೂ ಇಂಥದ್ದೇ ಆರೋಪ ಬಂದಿತ್ತು’ ಎಂದ ಕಂಗನಾ!

ಬೋಲ್ಡ್ ಲುಕ್​ನಲ್ಲಿ ಮಿಂಚುತ್ತಿದ್ದಾರೆ ಕಂಗನಾ; ಇಲ್ಲಿದೆ ಅವರ ಹಾಟ್​ ಫೋಟೋಗಳು

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​