AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿಯನ್ನು ಟೀಕಿಸಿದ ಬಲಪಂಥೀಯರಿಗೆ ಖಡಕ್ ಎಚ್ಚರಿಕೆ ನೀಡಿದ ಕಂಗನಾ ರಣಾವತ್

ನ್ಯೂಯಾರ್ಕರ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಾಜಮೌಳಿ ಅವರು, ‘ಧರ್ಮವು ಮೂಲಭೂತವಾಗಿ ಒಂದು ರೀತಿಯ ಶೋಷಣೆಯಾಗಿದೆ' ಎಂದು ಹೇಳಿದ್ದರು.

ರಾಜಮೌಳಿಯನ್ನು ಟೀಕಿಸಿದ ಬಲಪಂಥೀಯರಿಗೆ ಖಡಕ್ ಎಚ್ಚರಿಕೆ ನೀಡಿದ ಕಂಗನಾ ರಣಾವತ್
ಕಂಗನಾ-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Feb 18, 2023 | 6:21 PM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಸದಾ ಎಲ್ಲರನ್ನೂ ಟೀಕೆ ಮಾಡುತ್ತಾ ಇರುತ್ತಾರೆ. ಚಿತ್ರರಂಗದ ಬಹುತೇಕರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಈಗ ಕಂಗನಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜಮೌಳಿ ಅವರು ಮಾತನಾಡುತ್ತಾ ಧರ್ಮದ ಬಗ್ಗೆ ಮಾತನಾಡಿದ್ದರು. ತಾವು ಧರ್ಮದಿಂದ ದೂರ ಇರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಅನೇಕರು ಅವರನ್ನು ಟೀಕೆ ಮಾಡಿದ್ದರು. ಈಗ ಕಂಗನಾ ರಣಾವತ್ ಅವರು ರಾಜಮೌಳಿ ಪರ ಬ್ಯಾಟ್ ಬೀಸಿದ್ದಾರೆ.

ನ್ಯೂಯಾರ್ಕರ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಾಜಮೌಳಿ ಅವರು, ‘ಧರ್ಮವು ಮೂಲಭೂತವಾಗಿ ಒಂದು ರೀತಿಯ ಶೋಷಣೆಯಾಗಿದೆ’ ಎಂದು ಹೇಳಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಈಗ ಕಂಗನಾ ಅವರು ರಾಜಮೌಳಿ ಪರ ಮಾತನಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿಮೂಡಿಸಿದೆ.

‘ಇದಕ್ಕೆ ಅತಿಯಾಗಿ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಎಲ್ಲ ಕಡೆ ಕೇಸರಿ ಬಾವುಟ ತೆಗೆದುಕೊಂಡು ಹೋಗದೇ ಇದ್ದರೆ ತೊಂದರೆ ಏನಿಲ್ಲ. ಮಾತಿಗಿಂತ ನಮ್ಮ ಕೆಲಸ ದೊಡ್ಡದಾಗಿ ಕಾಣುತ್ತದೆ. ನಾವು ಎಲ್ಲರಿಗೋಸ್ಕರ ಸಿನಿಮಾ ಮಾಡುತ್ತೇವೆ. ನಾವು ಕಲಾವಿದರು ದುರ್ಬಲರಾಗಿದ್ದೇವೆ. ವಿಶೇಷವಾಗಿ ಬಲಪಂಥೀಯರು ಎಂದು ಕರೆಯುವವರಿಂದ ನಮಗೆ ಯಾವುದೇ ಬೆಂಬಲ ಸಿಗದ ಕಾರಣ, ನಾವು ಸಂಪೂರ್ಣವಾಗಿ ನಮ್ಮ ಕಾಲ ಮೇಲೆ ನಿಂತಿದ್ದೇವೆ. ದಯವಿಟ್ಟು ಕುಳಿತುಕೊಳ್ಳಿ, ಧೈರ್ಯ ಮಾಡಬೇಡಿ. ಮಳೆಯಲ್ಲಿ ಜ್ವಾಲೆಯಂತಿರುವ ರಾಜಮೌಳಿ ವಿರುದ್ಧ ಮಾತನಾಡಿದರೆ ನಾನು ಏನನ್ನೂ ಸಹಿಸುವುದಿಲ್ಲ. ಅವರು ಒಬ್ಬ ಮೇಧಾವಿ ಮತ್ತು ರಾಷ್ಟ್ರವಾದಿ. ಅವರು ನಮ್ಮ ಜೊತೆ ಇರೋದು ನಮ್ಮ ಅದೃಷ್ಟ’ ಎಂದು ಕಂಗನಾ ಹೇಳಿದ್ದಾರೆ.

ರಾಜಮೌಳಿ ಹೇಳಿದ್ದೇನು?

‘ನಾನು ನಿಧಾನವಾಗಿ ಧರ್ಮದಿಂದ ದೂರ ಸರಿಯಲು ಪ್ರಾರಂಭಿಸಿದೆ. ಆ ಕಾಲದಲ್ಲಿ ಮಹಾಭಾರತ ಅಥವಾ ರಾಮಾಯಣದಂತಹ ಕಥೆಗಳ ಮೇಲಿನ ಪ್ರೀತಿ ಕಡಿಮೆಯಾಗಿರಲಿಲ್ಲ. ನಾನು ಅವುಗಳ ಧಾರ್ಮಿಕ ಅಂಶಗಳಿಂದ ದೂರ ತಳ್ಳಲು ಪ್ರಾರಂಭಿಸಿದೆ. ಆದರೆ ನನ್ನೊಂದಿಗೆ ಉಳಿದುಕೊಂಡಿದ್ದು ಹೇಗೆ ಕಥೆ ಹೇಳಬೇಕು ಎನ್ನುವುದು’ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ