AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿಯನ್ನು ಟೀಕಿಸಿದ ಬಲಪಂಥೀಯರಿಗೆ ಖಡಕ್ ಎಚ್ಚರಿಕೆ ನೀಡಿದ ಕಂಗನಾ ರಣಾವತ್

ನ್ಯೂಯಾರ್ಕರ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಾಜಮೌಳಿ ಅವರು, ‘ಧರ್ಮವು ಮೂಲಭೂತವಾಗಿ ಒಂದು ರೀತಿಯ ಶೋಷಣೆಯಾಗಿದೆ' ಎಂದು ಹೇಳಿದ್ದರು.

ರಾಜಮೌಳಿಯನ್ನು ಟೀಕಿಸಿದ ಬಲಪಂಥೀಯರಿಗೆ ಖಡಕ್ ಎಚ್ಚರಿಕೆ ನೀಡಿದ ಕಂಗನಾ ರಣಾವತ್
ಕಂಗನಾ-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Feb 18, 2023 | 6:21 PM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಸದಾ ಎಲ್ಲರನ್ನೂ ಟೀಕೆ ಮಾಡುತ್ತಾ ಇರುತ್ತಾರೆ. ಚಿತ್ರರಂಗದ ಬಹುತೇಕರನ್ನು ಕಂಡರೆ ಅವರಿಗೆ ಆಗುವುದಿಲ್ಲ. ಈಗ ಕಂಗನಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜಮೌಳಿ ಅವರು ಮಾತನಾಡುತ್ತಾ ಧರ್ಮದ ಬಗ್ಗೆ ಮಾತನಾಡಿದ್ದರು. ತಾವು ಧರ್ಮದಿಂದ ದೂರ ಇರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಅನೇಕರು ಅವರನ್ನು ಟೀಕೆ ಮಾಡಿದ್ದರು. ಈಗ ಕಂಗನಾ ರಣಾವತ್ ಅವರು ರಾಜಮೌಳಿ ಪರ ಬ್ಯಾಟ್ ಬೀಸಿದ್ದಾರೆ.

ನ್ಯೂಯಾರ್ಕರ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಾಜಮೌಳಿ ಅವರು, ‘ಧರ್ಮವು ಮೂಲಭೂತವಾಗಿ ಒಂದು ರೀತಿಯ ಶೋಷಣೆಯಾಗಿದೆ’ ಎಂದು ಹೇಳಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಈಗ ಕಂಗನಾ ಅವರು ರಾಜಮೌಳಿ ಪರ ಮಾತನಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿಮೂಡಿಸಿದೆ.

‘ಇದಕ್ಕೆ ಅತಿಯಾಗಿ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಎಲ್ಲ ಕಡೆ ಕೇಸರಿ ಬಾವುಟ ತೆಗೆದುಕೊಂಡು ಹೋಗದೇ ಇದ್ದರೆ ತೊಂದರೆ ಏನಿಲ್ಲ. ಮಾತಿಗಿಂತ ನಮ್ಮ ಕೆಲಸ ದೊಡ್ಡದಾಗಿ ಕಾಣುತ್ತದೆ. ನಾವು ಎಲ್ಲರಿಗೋಸ್ಕರ ಸಿನಿಮಾ ಮಾಡುತ್ತೇವೆ. ನಾವು ಕಲಾವಿದರು ದುರ್ಬಲರಾಗಿದ್ದೇವೆ. ವಿಶೇಷವಾಗಿ ಬಲಪಂಥೀಯರು ಎಂದು ಕರೆಯುವವರಿಂದ ನಮಗೆ ಯಾವುದೇ ಬೆಂಬಲ ಸಿಗದ ಕಾರಣ, ನಾವು ಸಂಪೂರ್ಣವಾಗಿ ನಮ್ಮ ಕಾಲ ಮೇಲೆ ನಿಂತಿದ್ದೇವೆ. ದಯವಿಟ್ಟು ಕುಳಿತುಕೊಳ್ಳಿ, ಧೈರ್ಯ ಮಾಡಬೇಡಿ. ಮಳೆಯಲ್ಲಿ ಜ್ವಾಲೆಯಂತಿರುವ ರಾಜಮೌಳಿ ವಿರುದ್ಧ ಮಾತನಾಡಿದರೆ ನಾನು ಏನನ್ನೂ ಸಹಿಸುವುದಿಲ್ಲ. ಅವರು ಒಬ್ಬ ಮೇಧಾವಿ ಮತ್ತು ರಾಷ್ಟ್ರವಾದಿ. ಅವರು ನಮ್ಮ ಜೊತೆ ಇರೋದು ನಮ್ಮ ಅದೃಷ್ಟ’ ಎಂದು ಕಂಗನಾ ಹೇಳಿದ್ದಾರೆ.

ರಾಜಮೌಳಿ ಹೇಳಿದ್ದೇನು?

‘ನಾನು ನಿಧಾನವಾಗಿ ಧರ್ಮದಿಂದ ದೂರ ಸರಿಯಲು ಪ್ರಾರಂಭಿಸಿದೆ. ಆ ಕಾಲದಲ್ಲಿ ಮಹಾಭಾರತ ಅಥವಾ ರಾಮಾಯಣದಂತಹ ಕಥೆಗಳ ಮೇಲಿನ ಪ್ರೀತಿ ಕಡಿಮೆಯಾಗಿರಲಿಲ್ಲ. ನಾನು ಅವುಗಳ ಧಾರ್ಮಿಕ ಅಂಶಗಳಿಂದ ದೂರ ತಳ್ಳಲು ಪ್ರಾರಂಭಿಸಿದೆ. ಆದರೆ ನನ್ನೊಂದಿಗೆ ಉಳಿದುಕೊಂಡಿದ್ದು ಹೇಗೆ ಕಥೆ ಹೇಳಬೇಕು ಎನ್ನುವುದು’ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್