AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ಜೊತೆ ಇರೋ ಆ ಮಿಸ್ಟರಿ ಮ್ಯಾನ್ ಯಾರು? ಮದುವೆ ಬಗ್ಗೆ ಮೂಡಿದೆ ಚರ್ಚೆ

ಕಳೆದ ವರ್ಷ ಅಂದರೆ 2023ರ ಸಂದರ್ಶನವೊಂದರಲ್ಲಿ ಕಂಗನಾ ಮದುವೆ ಬಗ್ಗೆ ಮಾತನಾಡಿದ್ದರು. ‘ಎಲ್ಲದಕ್ಕೂ ಒಂದು ಸಮಯ ಅನ್ನೋದು ಬರಬೇಕು. ಆ ಸಮಯ ಬರುತ್ತದೆ. ಅದಕ್ಕಾಗಿ ಕಾಯಬೇಕು’ ಎಂದು ಕಂಗನಾ ಹೇಳಿದ್ದರು.

ಕಂಗನಾ ಜೊತೆ ಇರೋ ಆ ಮಿಸ್ಟರಿ ಮ್ಯಾನ್ ಯಾರು? ಮದುವೆ ಬಗ್ಗೆ ಮೂಡಿದೆ ಚರ್ಚೆ
ಕಂಗನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 13, 2024 | 1:51 PM

Share

ಕಂಗನಾ ರಣಾವತ್ (Kangana Ranaut) ಮತ್ತು ವಿವಾದಕ್ಕೆ ಎಲ್ಲಿಲ್ಲದ ನಂಟು. ಬೋಲ್ಡ್ ಸ್ಟೇಟ್​ಮೆಂಟ್ ಕೊಟ್ಟು ಕಂಗನಾ ಸದಾ ಸುದ್ದಿಯಲ್ಲಿರುತ್ತಾರೆ. ಅದೇ ರೀತಿ ಈ ಬಾರಿಯೂ ಕಂಗನಾ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಇದಕ್ಕೆ ಕಾರಣ ಕೊಂಚ ಭಿನ್ನವಾಗಿದೆ. ಅವರು ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಸುದ್ದಿಯಲ್ಲಿದ್ದಾರೆ. ಕಂಗನಾ ಮದುವೆ ಯಾವಾಗ? ಅವರ ಬಾಯ್​ಫ್ರೆಂಡ್ ಯಾರು ಎಂಬಿತ್ಯಾದಿ  ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿದೆ. ಕಂಗನಾ ರಣಾವತ್ ಇತ್ತೀಚೆಗೆ ‘ಮಿಸ್ಟರಿ ಮ್ಯಾನ್’ ಜೊತೆ ಕಾಣಿಸಿಕೊಂಡಿದ್ದಾರೆ. ಸಲೂನ್‌ನಿಂದ ಬರುವಾಗ ಕಂಗನಾ ವ್ಯಕ್ತಿಯೊಬ್ಬರ ಕೈ ಹಿಡಿದುಕೊಂಡು ಹೊರಬರುತ್ತಿರುವ ಫೋಟೋ ವೈರಲ್ ಆಗಿದೆ. ಇಬ್ಬರೂ ಪಾಪರಾಜಿಗಳಿಗೆ ಪೋಸ್ ಕೊಟ್ಟು ಮುಂದೆ ಸಾಗಿದ್ದಾರೆ.

ಆ ಬಳಿಕ ವಿವಿಧ ಚರ್ಚೆಗಳು ಪ್ರಾರಂಭವಾಗಿವೆ. ‘ಕಂಗನಾ ಜೊತೆ ಕಾಣಿಸಿಕೊಂಡಿರುವ ಆ ವ್ಯಕ್ತಿ ಯಾರು’  ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಅವರನ್ನು ಕಂಗನಾ ಮದುವೆಯಾಗಲಿದ್ದಾರಾ ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿದೆ. ಕೆಲವು ನೆಟ್ಟಿಗರು ಈ ವ್ಯಕ್ತಿಯನ್ನು ನಟ ಹೃತಿಕ್ ರೋಷನ್ ಅವರಿಗೆ ಹೋಲಿಸಿದ್ದಾರೆ. ‘ಕೊನೆಗೂ ಹೃತಿಕ್ ಅವರಂತೆ ಕಾಣುವ ವ್ಯಕ್ತಿ ಕಂಗನಾಗೆ ಸಿಕ್ಕಿದ್ದಾರೆ’ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಕಂಗನಾ ಮದುವೆ ಆಗಲಿ ಎಂದು ಕೆಲವರು ಆಶಿಸಿದ್ದಾರೆ.

ಮದುವೆ ಬಗ್ಗೆ ಕಂಗನಾ ಹೇಳಿದ್ದೇನು?

ಕಳೆದ ವರ್ಷ ಅಂದರೆ 2023ರ ಸಂದರ್ಶನವೊಂದರಲ್ಲಿ ಕಂಗನಾ ಮದುವೆ ಬಗ್ಗೆ ಮಾತನಾಡಿದ್ದರು. ‘ಎಲ್ಲದಕ್ಕೂ ಒಂದು ಸಮಯ ಅನ್ನೋದು ಬರಬೇಕು. ಆ ಸಮಯ ಬರುತ್ತದೆ. ಅದಕ್ಕಾಗಿ ಕಾಯಬೇಕು’ ಎಂದು ಕಂಗನಾ ಹೇಳಿದ್ದರು. ಮದುವೆ ಬಗ್ಗೆ ಅವರು ತಮ್ಮದೇ ಆದ ಕನಸು ಹೊಂದಿದ್ದಾರೆ.

ಇದನ್ನೂ ಓದಿ: ‘ಬಿಲ್ಕಿಸ್​ ಬಾನು ಬಗ್ಗೆ ಸ್ಕ್ರಿಪ್ಟ್​ ಸಿದ್ಧವಿದೆ, ಆದರೆ ಸಿನಿಮಾ ಮಾಡೋಕೆ ಆಗುತ್ತಿಲ್ಲ’: ಕಂಗನಾ ರಣಾವತ್​

ಕಂಗನಾ ಸಿನಿಮಾ ಬಗ್ಗೆ ಮಾತನಾಡುವುದಾದರೆ ಅವರಿಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಕಳೆದ ವರ್ಷ ರಿಲೀಸ್ ಆದ ‘ತೇಜಸ್’ ಹಾಗೂ ‘ಚಂದ್ರಮುಖಿ 2’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಹಿನಾಯವಾಗಿ ಸೋತವು. ಆದರೂ ಕಂಗನಾ ದೃತಿಗೆಟ್ಟಿಲ್ಲ. ಪ್ರಸ್ತುತ ತಮ್ಮ ಹೊಸ ಚಿತ್ರ ‘ಎಮರ್ಜೆನ್ಸಿ’ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ನಟಿಸುವುದು ಮಾತ್ರವಲ್ಲದೆ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಮೊದಲು ಚಿತ್ರವನ್ನು ನವೆಂಬರ್ 2023ರಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಅದು ಮುಂದಕ್ಕೆ ಹೋಗಿತ್ತು. ಈ ವರ್ಷ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಶ್ರೇಯಸ್ ತಲ್ಪಡೆ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿ ಬಗ್ಗೆ ಇದೆ. ಕಂಗನಾ ಇಂದಿರಾ ಗಾಂಧಿ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ