AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಿನ ಚರ್ಮದ ಬ್ಯಾಗ್ ಹಿಡಿದು ಬಂದ್ರಾ ಕಂಗನಾ? ಶುರುವಾಗಿದೆ ಚರ್ಚೆ

ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಗೋವಿನ ಚರ್ಮದ ಹರ್ಮೆಸ್ ಬ್ಯಾಗ್ ಹಿಡಿದು ಸದ್ದು ಮಾಡಿದ್ದಾರೆ. ಬರೋಬ್ಬರಿ 5 ಲಕ್ಷ ರೂಪಾಯಿ ಬೆಲೆಯ ಈ ಬ್ಯಾಗ್‌ನ ಮೂಲ ವಸ್ತುವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಅವರ ಅಭಿಮಾನಿಗಳು ಸಮರ್ಥನೆ ನೀಡುತ್ತಿದ್ದರೂ, ಈ ಬಗ್ಗೆ ಕಂಗನಾ ಸ್ಪಷ್ಟನೆ ನೀಡಬೇಕಿದೆ. ರಾಜಕೀಯ ಪ್ರಚಾರದ ನಡುವೆ ಈ ವಿವಾದ ಎದುರಾಗಿದೆ.

ಗೋವಿನ ಚರ್ಮದ ಬ್ಯಾಗ್ ಹಿಡಿದು ಬಂದ್ರಾ ಕಂಗನಾ? ಶುರುವಾಗಿದೆ ಚರ್ಚೆ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 22, 2026 | 7:55 AM

Share

ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು (Kangana Ranaut) ಆಗಾಗ ವಿವಿಧ ಕಾರಣಕ್ಕೆ ಚರ್ಚೆ ಆಗುತ್ತಾ ಇರುತ್ತಾರೆ. ಅವರ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಾರೆ. ಅವರು ನಿಡುವ ಹೇಳಿಕೆ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತದೆ. ಈಗ ಅವರು ತೆಗೆದುಕೊಂಡು ಬಂದ ಬ್ಯಾಗ್ ಬಗ್ಗೆ ಚರ್ಚೆ ನಡೆದಿದೆ. ಅವರು ಗೋವಿನ ಚರ್ಮದ ಬ್ಯಾಗ್ ಹಿಡಿದು ಬಂದರೇ ಎಂಬ ಪ್ರಶ್ನೆ ಮೂಡಿದೆ.

ಕಂಗನಾ ರಣಾವತ್ ಅವರು ಸದ್ಯ ಪಶ್ಚಿಮ ಬಂಗಾಳದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಹೀಗಿರುವಾಗಲೇ ಅವರ ಫೋಟೋ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ಬ್ಯಾಗ್ ಒಂದನ್ನು ಹಿಡಿದು ನಿಂತಿದ್ದಾರೆ. ಬಿಳಿ ಬಣ್ಣದಲ್ಲಿ ಈ ಬ್ಯಾಗ್ ಇದೆ. ಇದು ಹೆರ್ಮ್ಸ್ ವಚೆ ಹಂಟರ್ ಕಂಪನಿಯ ಬ್ಯಾಗ್. ಈ ಬ್ಯಾಗ್​​ನ ಬೆಲೆ ಬರೋಬ್ಬರಿ 5 ಲಕ್ಷ ರೂಪಾಯಿ.

ಬ್ಯಾಗ್​​​ನ ಬೆಲೆ ಇಲ್ಲಿ ಅಷ್ಟಾಗಿ ಚರ್ಚೆ ಆಗುತ್ತಿಲ್ಲ. ಏಕೆಂದರೆ ಅನೇಕ ಸೆಲೆಬ್ರಿಟಿಗಳು ಲಕ್ಷಾಂತರ ರೂಪಾಯಿ ಬೆಲೆಯ ಬ್ಯಾಗ್ ಅನ್ನೇ ಹಿಡಿದು ಓಡಾಡುತ್ತಾರೆ. ಆದರೆ, ಇಲ್ಲಿ ಚರ್ಚೆ ಆಗುತ್ತಿರುವುದು ಕಂಗನಾ ಬ್ಯಾಗ್ ತಯಾರಿಸಲು ಬಳಕೆ ಮಾಡಿದ ವಸ್ತುವಿನ ಬಗ್ಗೆ. ಹೆರ್ಮ್ಸ್ ವಚೆ ಹಂಟರ್ ಕಂಪನಿಯವರು ತಯಾರಿಸುವ ಬ್ಯಾಗ್ ಗೋವಿನ ಚರ್ಮದ್ದು. ಇದು ಫ್ರಾನ್ಸ್ ಕಂಪನಿ ಆಗಿದೆ. ಈಗ ಕಂಗನಾ ಬ್ಯಾಗ್ ವಿಷಯ ಸಾಕಷ್ಟು ಚರ್ಚೆ ಆಗುತ್ತಿದೆ.

ಅಂದಹಾಗೆ ಇದು ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಚರ್ಚೆ. ಆ ಬ್ಯಾಗ್ ನಿಜಕ್ಕೂ ಹೆರ್ಮ್ಸ್ ವಚೆ ಹಂಟರ್ ಕಂಪನಿಯದ್ದೇನಾ ಅಥವಾ ಇದನ್ನು ಆ ರೀತಿ ಊಹಿಸಲಾಗಿದೆಯೇ ಎಂಬ ಬಗ್ಗೆ ಕಂಗನಾ ಅವರಿಂದಲೇ ಸ್ಪಷ್ಟನೆ ಸಿಗಬೇಕಿದೆ. ಅವರ ಅಭಿಮಾನಿಗಳು ಕಂಗನಾ ಪರ ಬ್ಯಾಟ್ ಬೀಸುತ್ತಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ

ಕಂಗನಾ ರಣಾವತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಮೇಲೆ ಸಿನಿಮಾ ರಂಗ ತೊರೆಯೋದಾಗಿ ಹೇಳಿದ್ದರು. ಆದರೆ, ಈಗ ಅವರಿಗೆ ರಾಜಕೀಯವೇ ಸಾಕಾದಂತೆ ಇದೆ. ಮುಂದಿನ ದಿನಗಳಲ್ಲಿ ಅವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ