AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ಕಡೆಗಣಿಸಿದ ಶಾರುಖ್ ಖಾನ್; ಮರುಕ್ಷಣವೇ ತಿರುಗೇಟು ನೀಡಿದ ಕನ್ನಡಿಗರು

ಶಾರುಖ್ ಖಾನ್​ ಅವರು ಬಾಲಿವುಡ್​ನ ಬೇಡಿಕೆಯ ನಟ ನಿಜ. ಆದರೆ, ಅವರು ತಪ್ಪು ಮಾಡಿದಾಗ ಅನೇಕರು ತಿದ್ದಿ ಹೇಳಿದ್ದಾರೆ. ಈ ಬಾರಿ ಕನ್ನಡಿಗರು ಕಿಂಗ್ ಖಾನ್​ಗೆ ಬುದ್ಧಿವಾದ ಹೇಳಿದ್ದಾರೆ. ಎಲ್ಲಾ ಭಾಷೆಯನ್ನು ಗೌರವಿಸುವಂತೆ ಕನ್ನಡಿಗರು ಅವರನ್ನು ತಿವಿದಿದ್ದಾರೆ.

ಕನ್ನಡವನ್ನು ಕಡೆಗಣಿಸಿದ ಶಾರುಖ್ ಖಾನ್; ಮರುಕ್ಷಣವೇ ತಿರುಗೇಟು ನೀಡಿದ ಕನ್ನಡಿಗರು
ಶಾರುಖ್
TV9 Web
| Edited By: |

Updated on: Jun 25, 2022 | 3:50 PM

Share

ಶಾರುಖ್​ ಖಾನ್​ಗೆ (Shah Rukh Khan) ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಅಭಿಮಾನಿಗಳಿದ್ದಾರೆ. ರಾಜ್ಯ, ಭಾಷೆಗಳನ್ನೂ ಮೀರಿ ಅವರನ್ನು ಪ್ರೀತಿಸುತ್ತಾರೆ, ಗೌರವಿಸುತ್ತಾರೆ. ಅವರು ಚಿತ್ರರಂಗದಲ್ಲಿ ಈಗ 30 ವರ್ಷ ಪೂರೈಸಿದ್ದಾರೆ. ಶಾರುಖ್ ಅವರ ಈ ಸುದೀರ್ಘ ಪಯಣ ಅಷ್ಟು ಸುಲಭದ್ದಾಗಿರಲಿಲ್ಲ. ಈ ಅವಧಿಯಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಜತೆಗೆ ಕೆಲ ವಿವಾದಗಳನ್ನು ಅವರು ಮಾಡಿಕೊಂಡಿದ್ದಾರೆ. ಕೆಲವು ಕಣ್ತಿಪ್ಪಿನಿಂದ ಆದರೆ, ಕೆಲವು ಗೊತ್ತಿದ್ದೂ ಮಾಡಿದ ತಪ್ಪುಗಳು. ಈಗ ಶಾರುಖ್ ಕನ್ನಡವನ್ನು (Kannada) ಕಡೆಗಣಿಸಿ ತಪ್ಪು ಮಾಡಿದ್ದಾರೆ. ಇದಕ್ಕೆ ಕನ್ನಡಿಗರು ಕ್ಷಣಮಾತ್ರದಲ್ಲಿ ತಿರುಗೇಟು ನೀಡಿದ್ದಾರೆ.

ಶಾರುಖ್ ಖಾನ್​ ಅವರು ಬಾಲಿವುಡ್​ನ ಬೇಡಿಕೆಯ ನಟ ನಿಜ. ಆದರೆ, ಅವರು ತಪ್ಪು ಮಾಡಿದಾಗ ಅನೇಕರು ತಿದ್ದಿ ಹೇಳಿದ್ದಾರೆ. ಈ ಬಾರಿ ಕನ್ನಡಿಗರು ಕಿಂಗ್ ಖಾನ್​ಗೆ ಬುದ್ಧಿವಾದ ಹೇಳಿದ್ದಾರೆ. ಎಲ್ಲಾ ಭಾಷೆಯನ್ನು ಗೌರವಿಸುವಂತೆ ಕನ್ನಡಿಗರು ಅವರನ್ನು ತಿವಿದಿದ್ದಾರೆ. ಅಷ್ಟಕ್ಕೂ ಶಾರುಖ್ ಮಾಡಿದ ತಪ್ಪೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇದನ್ನೂ ಓದಿ
Image
ಶಾರುಖ್​ ಖಾನ್​-ಅಟ್ಲೀ ಹೊಸ ಸಿನಿಮಾ ಅನೌನ್ಸ್​; ಟೈಟಲ್ ಘೋಷಣೆ ಮಾಡಿದ ಕಿಂಗ್ ಖಾನ್
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?
Image
ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​

ಶಾರುಖ್ ಖಾನ್ ಅವರು ಇಂದು (ಜೂನ್ 25) ಚಿತ್ರತರಂಗದಲ್ಲಿ 30 ವರ್ಷ ಪೂರೈಸಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಶಾರುಖ್ ನಟನೆಯ ‘ಪಠಾಣ್​’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಇದರಲ್ಲಿ ಒಂದು ವಿಚಾರ ಸ್ಪಷ್ಟವಾಗಿದೆ. ಈ ಸಿನಿಮಾ ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ತೆರೆಗೆ ಬರುತ್ತಿಲ್ಲ. ಇದಕ್ಕೆ ಕನ್ನಡಿಗರಿಂದ ವಿರೋಧ ವ್ಯಕ್ತವಾಗಿದೆ.

ಇತ್ತೀಚೆಗೆ ‘ನೋ ಕನ್ನಡ ನೋ ಬಿಸ್ನೆಸ್​’ ಎನ್ನುವ ಹ್ಯಾಶ್​ಟ್ಯಾಗ್ ವೈರಲ್ ಆಗಿತ್ತು. ಕಮಲ್ ಹಾಸನ್​ ನಟನೆಯ ‘ವಿಕ್ರಮ್’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿರಲಿಲ್ಲ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅನೇಕರಿಂದ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗಿತ್ತು. ಈಗ ‘ಪಠಾಣ್​’ ಚಿತ್ರದ ಹೊಸ ಪೋಸ್ಟರ್​ಗೂ ಅನೇಕರು ವಿರೋಧ ತೋರಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಈ ಕಾವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

‘ಕನ್ನಡ ಹಾಗೂ ಮಲಯಾಳಂ ಭಾಷೆಯನ್ನು ನೀವು ಕಡೆಗಣಿಸುತ್ತಿರುವುದು ಏಕೆ?’ ಎಂದು ಕೆಲವರು ಶಾರುಖ್​ ಖಾನ್​ ಹಾಗೂ ಚಿತ್ರತಂಡವನ್ನು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಸಿನಿಮಾ ನಮ್ಮ ನಾಡಲ್ಲಿ ರಿಲೀಸ್ ಮಾಡುವುದೇ ಬೇಡ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ಗೆ ಏನು ಚಿಂತೆ? ಗಡಿಬಿಡಿಯಲ್ಲಿ ಹೊರಟ ಸ್ಟಾರ್​ ಕಿಡ್​

ಶಾರುಖ್​ ಖಾನ್​-ಅಟ್ಲೀ ಹೊಸ ಸಿನಿಮಾ ಅನೌನ್ಸ್​; ಟೈಟಲ್ ಘೋಷಣೆ ಮಾಡಿದ ಕಿಂಗ್ ಖಾನ್

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ