AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ಕಡೆಗಣಿಸಿದ ಶಾರುಖ್ ಖಾನ್; ಮರುಕ್ಷಣವೇ ತಿರುಗೇಟು ನೀಡಿದ ಕನ್ನಡಿಗರು

ಶಾರುಖ್ ಖಾನ್​ ಅವರು ಬಾಲಿವುಡ್​ನ ಬೇಡಿಕೆಯ ನಟ ನಿಜ. ಆದರೆ, ಅವರು ತಪ್ಪು ಮಾಡಿದಾಗ ಅನೇಕರು ತಿದ್ದಿ ಹೇಳಿದ್ದಾರೆ. ಈ ಬಾರಿ ಕನ್ನಡಿಗರು ಕಿಂಗ್ ಖಾನ್​ಗೆ ಬುದ್ಧಿವಾದ ಹೇಳಿದ್ದಾರೆ. ಎಲ್ಲಾ ಭಾಷೆಯನ್ನು ಗೌರವಿಸುವಂತೆ ಕನ್ನಡಿಗರು ಅವರನ್ನು ತಿವಿದಿದ್ದಾರೆ.

ಕನ್ನಡವನ್ನು ಕಡೆಗಣಿಸಿದ ಶಾರುಖ್ ಖಾನ್; ಮರುಕ್ಷಣವೇ ತಿರುಗೇಟು ನೀಡಿದ ಕನ್ನಡಿಗರು
ಶಾರುಖ್
TV9 Web
| Edited By: |

Updated on: Jun 25, 2022 | 3:50 PM

Share

ಶಾರುಖ್​ ಖಾನ್​ಗೆ (Shah Rukh Khan) ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಅಭಿಮಾನಿಗಳಿದ್ದಾರೆ. ರಾಜ್ಯ, ಭಾಷೆಗಳನ್ನೂ ಮೀರಿ ಅವರನ್ನು ಪ್ರೀತಿಸುತ್ತಾರೆ, ಗೌರವಿಸುತ್ತಾರೆ. ಅವರು ಚಿತ್ರರಂಗದಲ್ಲಿ ಈಗ 30 ವರ್ಷ ಪೂರೈಸಿದ್ದಾರೆ. ಶಾರುಖ್ ಅವರ ಈ ಸುದೀರ್ಘ ಪಯಣ ಅಷ್ಟು ಸುಲಭದ್ದಾಗಿರಲಿಲ್ಲ. ಈ ಅವಧಿಯಲ್ಲಿ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಜತೆಗೆ ಕೆಲ ವಿವಾದಗಳನ್ನು ಅವರು ಮಾಡಿಕೊಂಡಿದ್ದಾರೆ. ಕೆಲವು ಕಣ್ತಿಪ್ಪಿನಿಂದ ಆದರೆ, ಕೆಲವು ಗೊತ್ತಿದ್ದೂ ಮಾಡಿದ ತಪ್ಪುಗಳು. ಈಗ ಶಾರುಖ್ ಕನ್ನಡವನ್ನು (Kannada) ಕಡೆಗಣಿಸಿ ತಪ್ಪು ಮಾಡಿದ್ದಾರೆ. ಇದಕ್ಕೆ ಕನ್ನಡಿಗರು ಕ್ಷಣಮಾತ್ರದಲ್ಲಿ ತಿರುಗೇಟು ನೀಡಿದ್ದಾರೆ.

ಶಾರುಖ್ ಖಾನ್​ ಅವರು ಬಾಲಿವುಡ್​ನ ಬೇಡಿಕೆಯ ನಟ ನಿಜ. ಆದರೆ, ಅವರು ತಪ್ಪು ಮಾಡಿದಾಗ ಅನೇಕರು ತಿದ್ದಿ ಹೇಳಿದ್ದಾರೆ. ಈ ಬಾರಿ ಕನ್ನಡಿಗರು ಕಿಂಗ್ ಖಾನ್​ಗೆ ಬುದ್ಧಿವಾದ ಹೇಳಿದ್ದಾರೆ. ಎಲ್ಲಾ ಭಾಷೆಯನ್ನು ಗೌರವಿಸುವಂತೆ ಕನ್ನಡಿಗರು ಅವರನ್ನು ತಿವಿದಿದ್ದಾರೆ. ಅಷ್ಟಕ್ಕೂ ಶಾರುಖ್ ಮಾಡಿದ ತಪ್ಪೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇದನ್ನೂ ಓದಿ
Image
ಶಾರುಖ್​ ಖಾನ್​-ಅಟ್ಲೀ ಹೊಸ ಸಿನಿಮಾ ಅನೌನ್ಸ್​; ಟೈಟಲ್ ಘೋಷಣೆ ಮಾಡಿದ ಕಿಂಗ್ ಖಾನ್
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?
Image
ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​

ಶಾರುಖ್ ಖಾನ್ ಅವರು ಇಂದು (ಜೂನ್ 25) ಚಿತ್ರತರಂಗದಲ್ಲಿ 30 ವರ್ಷ ಪೂರೈಸಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಶಾರುಖ್ ನಟನೆಯ ‘ಪಠಾಣ್​’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಇದರಲ್ಲಿ ಒಂದು ವಿಚಾರ ಸ್ಪಷ್ಟವಾಗಿದೆ. ಈ ಸಿನಿಮಾ ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ತೆರೆಗೆ ಬರುತ್ತಿಲ್ಲ. ಇದಕ್ಕೆ ಕನ್ನಡಿಗರಿಂದ ವಿರೋಧ ವ್ಯಕ್ತವಾಗಿದೆ.

ಇತ್ತೀಚೆಗೆ ‘ನೋ ಕನ್ನಡ ನೋ ಬಿಸ್ನೆಸ್​’ ಎನ್ನುವ ಹ್ಯಾಶ್​ಟ್ಯಾಗ್ ವೈರಲ್ ಆಗಿತ್ತು. ಕಮಲ್ ಹಾಸನ್​ ನಟನೆಯ ‘ವಿಕ್ರಮ್’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿರಲಿಲ್ಲ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅನೇಕರಿಂದ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗಿತ್ತು. ಈಗ ‘ಪಠಾಣ್​’ ಚಿತ್ರದ ಹೊಸ ಪೋಸ್ಟರ್​ಗೂ ಅನೇಕರು ವಿರೋಧ ತೋರಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಈ ಕಾವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

‘ಕನ್ನಡ ಹಾಗೂ ಮಲಯಾಳಂ ಭಾಷೆಯನ್ನು ನೀವು ಕಡೆಗಣಿಸುತ್ತಿರುವುದು ಏಕೆ?’ ಎಂದು ಕೆಲವರು ಶಾರುಖ್​ ಖಾನ್​ ಹಾಗೂ ಚಿತ್ರತಂಡವನ್ನು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಸಿನಿಮಾ ನಮ್ಮ ನಾಡಲ್ಲಿ ರಿಲೀಸ್ ಮಾಡುವುದೇ ಬೇಡ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ಗೆ ಏನು ಚಿಂತೆ? ಗಡಿಬಿಡಿಯಲ್ಲಿ ಹೊರಟ ಸ್ಟಾರ್​ ಕಿಡ್​

ಶಾರುಖ್​ ಖಾನ್​-ಅಟ್ಲೀ ಹೊಸ ಸಿನಿಮಾ ಅನೌನ್ಸ್​; ಟೈಟಲ್ ಘೋಷಣೆ ಮಾಡಿದ ಕಿಂಗ್ ಖಾನ್

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ