AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?

ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್​ ದೇವಗನ್ ಅಭಿನಯದ ‘ಥ್ಯಾಂಕ್​ ಗಾಡ್’ ಚಿತ್ರ ಅಕ್ಟೋಬರ್ 25ರಂದು ರಿಲೀಸ್ ಆಗಿವೆ. ಈ ಎರಡೂ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿವೆ.

ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?
‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?
TV9 Web
| Edited By: |

Updated on: Oct 26, 2022 | 2:58 PM

Share

‘ಕಾಂತಾರ’ (Kantara Movie)ಸಿನಿಮಾ ಬಾಲಿವುಡ್​ನಲ್ಲಿ ಅಬ್ಬರಿಸುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಇದೇ ಸಂದರ್ಭಕ್ಕೆ ಸರಿಯಾಗಿ ಬಾಲಿವುಡ್​ನಲ್ಲಿ ಎರಡು ಬಿಗ್ ಬಜೆಟ್ ಸಿನಿಮಾಗಳು ತೆರೆಗೆ ಬಂದಿವೆ. ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್​ ದೇವಗನ್ ಅಭಿನಯದ ‘ಥ್ಯಾಂಕ್​ ಗಾಡ್’ ಚಿತ್ರ ಅಕ್ಟೋಬರ್ 25ರಂದು ರಿಲೀಸ್ ಆಗಿವೆ. ಈ ಎರಡೂ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿವೆ. ಇದು ಮುಂದಿನ ದಿನಗಳಲ್ಲಿ ‘ಕಾಂತಾರ’ ಚಿತ್ರದ ಕಲೆಕ್ಷನ್ ಮೇಲೆ ಪ್ರಭಾವ ಬೀರಬಹುದು.

25 ಕೋಟಿ ರೂ. ದಾಟಿದ ‘ಕಾಂತಾರ’

‘ಕಾಂತಾರ’ ಸಿನಿಮಾ ನಿತ್ಯ ಒಂದರಿಂದ ಎರಡು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಇದರಿಂದ ಬಾಲಿವುಡ್​ನಲ್ಲೂ ಚಿತ್ರ ಒಳ್ಳೆಯ ಲಾಭ ಕಾಣುತ್ತಿದೆ. ಈ ಸಿನಿಮಾ ಮಂಗಳವಾರ (ಅಕ್ಟೋಬರ್ 25) 2.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ (ಹಿಂದಿ ವರ್ಷನ್​) 26.50 ಕೋಟಿ ರೂಪಾಯಿ ದಾಟಿದೆ. ಇನ್ನೂ ಕೆಲವು ದಿನಗಳ ಕಾಲ ‘ಕಾಂತಾರ’ ಸಿನಿಮಾ ಅಬ್ಬರಿಸುವ ಸಾಧ್ಯತೆ ದಟ್ಟವಾಗಿದೆ.

‘ರಾಮ್ ಸೇತು’ ಭರ್ಜರಿ ಕಮಾಯಿ

ಅಕ್ಷಯ್ ಕುಮಾರ್ ನಟನೆಯ ಸಿನಿಮಾಗಳು ಎಂದರೆ ತಕ್ಕ ಮಟ್ಟಿನ ಬಿಸ್ನೆಸ್ ಮಾಡುತ್ತವೆ ಎಂಬ ನಂಬಿಕೆ ಇತ್ತು. ಆದರೆ, ಇತ್ತೀಚೆಗೆ ಆ ನಂಬಿಕೆ ಸುಳ್ಳಾಗುವಂತಹ ಸಾಕಷ್ಟು ಘಟನೆಗಳು ನಡೆದವು. ಅಕ್ಷಯ್ ಅವರಿಂದ ಸಾಕಷ್ಟು ನಿರ್ಮಾಪಕರು ನಷ್ಟ ಅನುಭವಿಸಿದರು. ‘ರಾಮ್ ಸೇತು’ ಚಿತ್ರದಿಂದ ಅವರಿಗೆ ಗೆಲುವು ಬೇಕಾಗಿದೆ. ಈ ಗೆಲುವು ಮರಳಿ ಸಿಗುವ ಸೂಚನೆ ಸಿಕ್ಕಿದೆ. ಈ ಸಿನಿಮಾ ಮೊದಲ ದಿನ 15.25 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ವಾರ ಪೂರ್ತಿ ‘ರಾಮ್ ಸೇತು’ ಅಬ್ಬರಿಸಬಹುದು ಎಂದು ಬಾಕ್ಸ್​ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

‘ಥ್ಯಾಂಕ್ ಗಾಡ್’

‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ಅಜಯ್ ದೇವಗನ್ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇಬ್ಬರು ಸ್ಟಾರ್​ಗಳು ಇದ್ದಾರೆ ಎಂಬ ಕಾರಣಕ್ಕೆ ಸಿನಿಮಾ ಮೇಲೆ ನಿರೀಕ್ಷೆ ಇತ್ತು. ಈ ಚಿತ್ರ ನಿರೀಕ್ಷೆಯನ್ನು ಹುಸಿ ಮಾಡಿಲ್ಲ. ಮೊದಲ ದಿನ ಈ ಚಿತ್ರ 8.10 ಕೋಟಿ ರೂಪಾಯಿ ಬಾಚಿಕೊಂಡಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಹೇಗೆ ಕಲೆಕ್ಷನ್ ಮಾಡಲಿದೆ ಅನ್ನೋದು ಮುಖ್ಯವಾಗಲಿದೆ.

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ