AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?

ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್​ ದೇವಗನ್ ಅಭಿನಯದ ‘ಥ್ಯಾಂಕ್​ ಗಾಡ್’ ಚಿತ್ರ ಅಕ್ಟೋಬರ್ 25ರಂದು ರಿಲೀಸ್ ಆಗಿವೆ. ಈ ಎರಡೂ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿವೆ.

ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?
‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?
TV9 Web
| Edited By: |

Updated on: Oct 26, 2022 | 2:58 PM

Share

‘ಕಾಂತಾರ’ (Kantara Movie)ಸಿನಿಮಾ ಬಾಲಿವುಡ್​ನಲ್ಲಿ ಅಬ್ಬರಿಸುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಇದೇ ಸಂದರ್ಭಕ್ಕೆ ಸರಿಯಾಗಿ ಬಾಲಿವುಡ್​ನಲ್ಲಿ ಎರಡು ಬಿಗ್ ಬಜೆಟ್ ಸಿನಿಮಾಗಳು ತೆರೆಗೆ ಬಂದಿವೆ. ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಜಯ್​ ದೇವಗನ್ ಅಭಿನಯದ ‘ಥ್ಯಾಂಕ್​ ಗಾಡ್’ ಚಿತ್ರ ಅಕ್ಟೋಬರ್ 25ರಂದು ರಿಲೀಸ್ ಆಗಿವೆ. ಈ ಎರಡೂ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿವೆ. ಇದು ಮುಂದಿನ ದಿನಗಳಲ್ಲಿ ‘ಕಾಂತಾರ’ ಚಿತ್ರದ ಕಲೆಕ್ಷನ್ ಮೇಲೆ ಪ್ರಭಾವ ಬೀರಬಹುದು.

25 ಕೋಟಿ ರೂ. ದಾಟಿದ ‘ಕಾಂತಾರ’

‘ಕಾಂತಾರ’ ಸಿನಿಮಾ ನಿತ್ಯ ಒಂದರಿಂದ ಎರಡು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಇದರಿಂದ ಬಾಲಿವುಡ್​ನಲ್ಲೂ ಚಿತ್ರ ಒಳ್ಳೆಯ ಲಾಭ ಕಾಣುತ್ತಿದೆ. ಈ ಸಿನಿಮಾ ಮಂಗಳವಾರ (ಅಕ್ಟೋಬರ್ 25) 2.35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ (ಹಿಂದಿ ವರ್ಷನ್​) 26.50 ಕೋಟಿ ರೂಪಾಯಿ ದಾಟಿದೆ. ಇನ್ನೂ ಕೆಲವು ದಿನಗಳ ಕಾಲ ‘ಕಾಂತಾರ’ ಸಿನಿಮಾ ಅಬ್ಬರಿಸುವ ಸಾಧ್ಯತೆ ದಟ್ಟವಾಗಿದೆ.

‘ರಾಮ್ ಸೇತು’ ಭರ್ಜರಿ ಕಮಾಯಿ

ಅಕ್ಷಯ್ ಕುಮಾರ್ ನಟನೆಯ ಸಿನಿಮಾಗಳು ಎಂದರೆ ತಕ್ಕ ಮಟ್ಟಿನ ಬಿಸ್ನೆಸ್ ಮಾಡುತ್ತವೆ ಎಂಬ ನಂಬಿಕೆ ಇತ್ತು. ಆದರೆ, ಇತ್ತೀಚೆಗೆ ಆ ನಂಬಿಕೆ ಸುಳ್ಳಾಗುವಂತಹ ಸಾಕಷ್ಟು ಘಟನೆಗಳು ನಡೆದವು. ಅಕ್ಷಯ್ ಅವರಿಂದ ಸಾಕಷ್ಟು ನಿರ್ಮಾಪಕರು ನಷ್ಟ ಅನುಭವಿಸಿದರು. ‘ರಾಮ್ ಸೇತು’ ಚಿತ್ರದಿಂದ ಅವರಿಗೆ ಗೆಲುವು ಬೇಕಾಗಿದೆ. ಈ ಗೆಲುವು ಮರಳಿ ಸಿಗುವ ಸೂಚನೆ ಸಿಕ್ಕಿದೆ. ಈ ಸಿನಿಮಾ ಮೊದಲ ದಿನ 15.25 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ವಾರ ಪೂರ್ತಿ ‘ರಾಮ್ ಸೇತು’ ಅಬ್ಬರಿಸಬಹುದು ಎಂದು ಬಾಕ್ಸ್​ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

‘ಥ್ಯಾಂಕ್ ಗಾಡ್’

‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ಅಜಯ್ ದೇವಗನ್ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇಬ್ಬರು ಸ್ಟಾರ್​ಗಳು ಇದ್ದಾರೆ ಎಂಬ ಕಾರಣಕ್ಕೆ ಸಿನಿಮಾ ಮೇಲೆ ನಿರೀಕ್ಷೆ ಇತ್ತು. ಈ ಚಿತ್ರ ನಿರೀಕ್ಷೆಯನ್ನು ಹುಸಿ ಮಾಡಿಲ್ಲ. ಮೊದಲ ದಿನ ಈ ಚಿತ್ರ 8.10 ಕೋಟಿ ರೂಪಾಯಿ ಬಾಚಿಕೊಂಡಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಹೇಗೆ ಕಲೆಕ್ಷನ್ ಮಾಡಲಿದೆ ಅನ್ನೋದು ಮುಖ್ಯವಾಗಲಿದೆ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ