AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ

ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ
ಕಾಂತಾರ-ತುಂಬಾಡ್
TV9 Web
| Edited By: |

Updated on: Dec 03, 2022 | 5:02 PM

Share

‘ಕಾಂತಾರ’ ಸಿನಿಮಾ (Kantara Movie) ರಿಲೀಸ್ ಆಗಿ ಎರಡು ತಿಂಗಳು ಕಳೆದರೂ ಈ ಚಿತ್ರದ ಬಗೆಗಿನ ಚರ್ಚೆ ಕಡಿಮೆ ಆಗಿಲ್ಲ. ಸಿನಿಮಾ ಒಟಿಟಿಯಲ್ಲಿ ಬಂದ ಹೊರತಾಗಿಯೂ ಅನೇಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈಗ ಈ ಸಿನಿಮಾ ಬಗ್ಗೆ ಬಾಲಿವುಡ್ ನಿರ್ಮಾಪಕ ಆನಂದ್ ಗಾಂಧಿ (Anand Gandhi) ಅಪಸ್ವರ ತೆಗೆದಿದ್ದಾರೆ. ಅವರ ನಿರ್ಮಾಣದ ‘ತುಂಬಾಡ್​’ ಚಿತ್ರವನ್ನು ಹೊಗಳಿರುವ ಅವರು, ‘ಕಾಂತಾರ’ ಚಿತ್ರವನ್ನು ತೆಗಳಿದ್ದಾರೆ. ಆನಂದ್ ಗಾಂಧಿಗೆ ‘ಕಾಂತಾರ’ ಸಿನಿಮಾ ನೋಡಿ ಅಭಿಮಾನಿಗಳಾದವರು ಕ್ಲಾಸ್ ತೆಗೆದುಕೊಂಡಿದ್ದಾರೆ.

2018ರಲ್ಲಿ ‘ತುಂಬಾಡ್​’ ಸಿನಿಮಾ ತೆರೆಗೆ ಬಂತು. ಹಾರರ್​ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತ್ತು. ಈ ಸಿನಿಮಾವನ್ನು ಅನೇಕರು ಈಗಲೂ ಇಷ್ಟಪಡುತ್ತಾರೆ. ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ ಚಿತ್ರ ತುಂಬಾಡ್​ನಂತಲ್ಲ. ಸಂಕುಚಿತತೆ ಹಾಗೂ ಪುರಷತ್ವ ಸಂಕೇತವನ್ನು ಖಂಡಿಸುವ ರೀತಿಯಲ್ಲಿ ತುಂಬಾಡ್ ಇತ್ತು. ಆದರೆ, ಕಾಂತಾರ ಚಿತ್ರ ಅದನ್ನು ವೈಭವೀಕರಿಸುವಂತಿದೆ’ ಎಂದು ಹೇಳಿದ್ದಾರೆ ಆನಂದ್.  ಇದಕ್ಕೆ ಅನೇಕರು ಕಮೆಂಟ್ ಮಾಡಿದ್ದಾರೆ. ಆನಂದ್ ಗಾಂಧಿಗೆ ಬುದ್ಧಿವಾದ ಹೇಳುವ ಕೆಲಸ ಆಗಿದೆ.

ಇದನ್ನೂ ಓದಿ: Varaha Roopam Song: ಮತ್ತೆ ಯೂಟ್ಯೂಬ್​ಗೆ ಮರಳಿದ ‘ವರಾಹ ರೂಪಂ‌’ ಹಾಡು: ಕಾನೂನು ಹೋರಾಟದಲ್ಲಿ ‘ಕಾಂತಾರ’ ಚಿತ್ರಕ್ಕೆ ಗೆಲುವು

‘ಕಾಂತಾರ ಸಿನಿಮಾ ವ್ಯಭಿಚಾರದಿಂದ ಜ್ಞಾನೋದಯದ ಕಡೆಗೆ ಪ್ರಯಾಣ ಬೆಳೆಸುವುದನ್ನು ಚಿತ್ರಿಸುತ್ತದೆ. ಸ್ಥಳೀಯತೆಯನ್ನು ಸಿನಿಮಾದಲ್ಲಿ ಹೆಚ್ಚಾಗಿ ತೋರಿಸಲಾಗಿದೆ. ತುಂಬಾಡ್ ಇದಕ್ಕೆ ವಿರುದ್ಧವಾಗಿದೆ. ನೀವು ಹೇಳಿದ್ದು ಸರಿ. ಕಾಂತಾರ ತುಂಬಾಡ್​ನಂತಲ್ಲ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ಚಿತ್ರದ ಕಥಾವಸ್ತುವು ಅಂತಹುದ್ದಾಗಿದೆ. ಅದು ಪಾತ್ರಕ್ಕೆ ಅಗತ್ಯವಾಗಿತ್ತು. ಕಥಾ ನಾಯಕನನ್ನು ಸೌಮ್ಯವಾಗಿ ತೋರಿಸಲು ಸಾಧ್ಯವಿರಲಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?