AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ

ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ
ಕಾಂತಾರ-ತುಂಬಾಡ್
TV9 Web
| Edited By: |

Updated on: Dec 03, 2022 | 5:02 PM

Share

‘ಕಾಂತಾರ’ ಸಿನಿಮಾ (Kantara Movie) ರಿಲೀಸ್ ಆಗಿ ಎರಡು ತಿಂಗಳು ಕಳೆದರೂ ಈ ಚಿತ್ರದ ಬಗೆಗಿನ ಚರ್ಚೆ ಕಡಿಮೆ ಆಗಿಲ್ಲ. ಸಿನಿಮಾ ಒಟಿಟಿಯಲ್ಲಿ ಬಂದ ಹೊರತಾಗಿಯೂ ಅನೇಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈಗ ಈ ಸಿನಿಮಾ ಬಗ್ಗೆ ಬಾಲಿವುಡ್ ನಿರ್ಮಾಪಕ ಆನಂದ್ ಗಾಂಧಿ (Anand Gandhi) ಅಪಸ್ವರ ತೆಗೆದಿದ್ದಾರೆ. ಅವರ ನಿರ್ಮಾಣದ ‘ತುಂಬಾಡ್​’ ಚಿತ್ರವನ್ನು ಹೊಗಳಿರುವ ಅವರು, ‘ಕಾಂತಾರ’ ಚಿತ್ರವನ್ನು ತೆಗಳಿದ್ದಾರೆ. ಆನಂದ್ ಗಾಂಧಿಗೆ ‘ಕಾಂತಾರ’ ಸಿನಿಮಾ ನೋಡಿ ಅಭಿಮಾನಿಗಳಾದವರು ಕ್ಲಾಸ್ ತೆಗೆದುಕೊಂಡಿದ್ದಾರೆ.

2018ರಲ್ಲಿ ‘ತುಂಬಾಡ್​’ ಸಿನಿಮಾ ತೆರೆಗೆ ಬಂತು. ಹಾರರ್​ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತ್ತು. ಈ ಸಿನಿಮಾವನ್ನು ಅನೇಕರು ಈಗಲೂ ಇಷ್ಟಪಡುತ್ತಾರೆ. ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ ಚಿತ್ರ ತುಂಬಾಡ್​ನಂತಲ್ಲ. ಸಂಕುಚಿತತೆ ಹಾಗೂ ಪುರಷತ್ವ ಸಂಕೇತವನ್ನು ಖಂಡಿಸುವ ರೀತಿಯಲ್ಲಿ ತುಂಬಾಡ್ ಇತ್ತು. ಆದರೆ, ಕಾಂತಾರ ಚಿತ್ರ ಅದನ್ನು ವೈಭವೀಕರಿಸುವಂತಿದೆ’ ಎಂದು ಹೇಳಿದ್ದಾರೆ ಆನಂದ್.  ಇದಕ್ಕೆ ಅನೇಕರು ಕಮೆಂಟ್ ಮಾಡಿದ್ದಾರೆ. ಆನಂದ್ ಗಾಂಧಿಗೆ ಬುದ್ಧಿವಾದ ಹೇಳುವ ಕೆಲಸ ಆಗಿದೆ.

ಇದನ್ನೂ ಓದಿ: Varaha Roopam Song: ಮತ್ತೆ ಯೂಟ್ಯೂಬ್​ಗೆ ಮರಳಿದ ‘ವರಾಹ ರೂಪಂ‌’ ಹಾಡು: ಕಾನೂನು ಹೋರಾಟದಲ್ಲಿ ‘ಕಾಂತಾರ’ ಚಿತ್ರಕ್ಕೆ ಗೆಲುವು

‘ಕಾಂತಾರ ಸಿನಿಮಾ ವ್ಯಭಿಚಾರದಿಂದ ಜ್ಞಾನೋದಯದ ಕಡೆಗೆ ಪ್ರಯಾಣ ಬೆಳೆಸುವುದನ್ನು ಚಿತ್ರಿಸುತ್ತದೆ. ಸ್ಥಳೀಯತೆಯನ್ನು ಸಿನಿಮಾದಲ್ಲಿ ಹೆಚ್ಚಾಗಿ ತೋರಿಸಲಾಗಿದೆ. ತುಂಬಾಡ್ ಇದಕ್ಕೆ ವಿರುದ್ಧವಾಗಿದೆ. ನೀವು ಹೇಳಿದ್ದು ಸರಿ. ಕಾಂತಾರ ತುಂಬಾಡ್​ನಂತಲ್ಲ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ಚಿತ್ರದ ಕಥಾವಸ್ತುವು ಅಂತಹುದ್ದಾಗಿದೆ. ಅದು ಪಾತ್ರಕ್ಕೆ ಅಗತ್ಯವಾಗಿತ್ತು. ಕಥಾ ನಾಯಕನನ್ನು ಸೌಮ್ಯವಾಗಿ ತೋರಿಸಲು ಸಾಧ್ಯವಿರಲಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ