AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ

ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ
ಕಾಂತಾರ-ತುಂಬಾಡ್
TV9 Web
| Edited By: |

Updated on: Dec 03, 2022 | 5:02 PM

Share

‘ಕಾಂತಾರ’ ಸಿನಿಮಾ (Kantara Movie) ರಿಲೀಸ್ ಆಗಿ ಎರಡು ತಿಂಗಳು ಕಳೆದರೂ ಈ ಚಿತ್ರದ ಬಗೆಗಿನ ಚರ್ಚೆ ಕಡಿಮೆ ಆಗಿಲ್ಲ. ಸಿನಿಮಾ ಒಟಿಟಿಯಲ್ಲಿ ಬಂದ ಹೊರತಾಗಿಯೂ ಅನೇಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈಗ ಈ ಸಿನಿಮಾ ಬಗ್ಗೆ ಬಾಲಿವುಡ್ ನಿರ್ಮಾಪಕ ಆನಂದ್ ಗಾಂಧಿ (Anand Gandhi) ಅಪಸ್ವರ ತೆಗೆದಿದ್ದಾರೆ. ಅವರ ನಿರ್ಮಾಣದ ‘ತುಂಬಾಡ್​’ ಚಿತ್ರವನ್ನು ಹೊಗಳಿರುವ ಅವರು, ‘ಕಾಂತಾರ’ ಚಿತ್ರವನ್ನು ತೆಗಳಿದ್ದಾರೆ. ಆನಂದ್ ಗಾಂಧಿಗೆ ‘ಕಾಂತಾರ’ ಸಿನಿಮಾ ನೋಡಿ ಅಭಿಮಾನಿಗಳಾದವರು ಕ್ಲಾಸ್ ತೆಗೆದುಕೊಂಡಿದ್ದಾರೆ.

2018ರಲ್ಲಿ ‘ತುಂಬಾಡ್​’ ಸಿನಿಮಾ ತೆರೆಗೆ ಬಂತು. ಹಾರರ್​ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತ್ತು. ಈ ಸಿನಿಮಾವನ್ನು ಅನೇಕರು ಈಗಲೂ ಇಷ್ಟಪಡುತ್ತಾರೆ. ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ ಚಿತ್ರ ತುಂಬಾಡ್​ನಂತಲ್ಲ. ಸಂಕುಚಿತತೆ ಹಾಗೂ ಪುರಷತ್ವ ಸಂಕೇತವನ್ನು ಖಂಡಿಸುವ ರೀತಿಯಲ್ಲಿ ತುಂಬಾಡ್ ಇತ್ತು. ಆದರೆ, ಕಾಂತಾರ ಚಿತ್ರ ಅದನ್ನು ವೈಭವೀಕರಿಸುವಂತಿದೆ’ ಎಂದು ಹೇಳಿದ್ದಾರೆ ಆನಂದ್.  ಇದಕ್ಕೆ ಅನೇಕರು ಕಮೆಂಟ್ ಮಾಡಿದ್ದಾರೆ. ಆನಂದ್ ಗಾಂಧಿಗೆ ಬುದ್ಧಿವಾದ ಹೇಳುವ ಕೆಲಸ ಆಗಿದೆ.

ಇದನ್ನೂ ಓದಿ: Varaha Roopam Song: ಮತ್ತೆ ಯೂಟ್ಯೂಬ್​ಗೆ ಮರಳಿದ ‘ವರಾಹ ರೂಪಂ‌’ ಹಾಡು: ಕಾನೂನು ಹೋರಾಟದಲ್ಲಿ ‘ಕಾಂತಾರ’ ಚಿತ್ರಕ್ಕೆ ಗೆಲುವು

‘ಕಾಂತಾರ ಸಿನಿಮಾ ವ್ಯಭಿಚಾರದಿಂದ ಜ್ಞಾನೋದಯದ ಕಡೆಗೆ ಪ್ರಯಾಣ ಬೆಳೆಸುವುದನ್ನು ಚಿತ್ರಿಸುತ್ತದೆ. ಸ್ಥಳೀಯತೆಯನ್ನು ಸಿನಿಮಾದಲ್ಲಿ ಹೆಚ್ಚಾಗಿ ತೋರಿಸಲಾಗಿದೆ. ತುಂಬಾಡ್ ಇದಕ್ಕೆ ವಿರುದ್ಧವಾಗಿದೆ. ನೀವು ಹೇಳಿದ್ದು ಸರಿ. ಕಾಂತಾರ ತುಂಬಾಡ್​ನಂತಲ್ಲ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ಚಿತ್ರದ ಕಥಾವಸ್ತುವು ಅಂತಹುದ್ದಾಗಿದೆ. ಅದು ಪಾತ್ರಕ್ಕೆ ಅಗತ್ಯವಾಗಿತ್ತು. ಕಥಾ ನಾಯಕನನ್ನು ಸೌಮ್ಯವಾಗಿ ತೋರಿಸಲು ಸಾಧ್ಯವಿರಲಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ