AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ

ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ’ ಚಿತ್ರದ ಬಗ್ಗೆ ಅಪಸ್ವರ ತೆಗೆದ ಹಿಂದಿ ನಿರ್ಮಾಪಕ; ಫ್ಯಾನ್ಸ್ ಕೊಟ್ರು ಖಡಕ್ ಉತ್ತರ
ಕಾಂತಾರ-ತುಂಬಾಡ್
TV9 Web
| Edited By: |

Updated on: Dec 03, 2022 | 5:02 PM

Share

‘ಕಾಂತಾರ’ ಸಿನಿಮಾ (Kantara Movie) ರಿಲೀಸ್ ಆಗಿ ಎರಡು ತಿಂಗಳು ಕಳೆದರೂ ಈ ಚಿತ್ರದ ಬಗೆಗಿನ ಚರ್ಚೆ ಕಡಿಮೆ ಆಗಿಲ್ಲ. ಸಿನಿಮಾ ಒಟಿಟಿಯಲ್ಲಿ ಬಂದ ಹೊರತಾಗಿಯೂ ಅನೇಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈಗ ಈ ಸಿನಿಮಾ ಬಗ್ಗೆ ಬಾಲಿವುಡ್ ನಿರ್ಮಾಪಕ ಆನಂದ್ ಗಾಂಧಿ (Anand Gandhi) ಅಪಸ್ವರ ತೆಗೆದಿದ್ದಾರೆ. ಅವರ ನಿರ್ಮಾಣದ ‘ತುಂಬಾಡ್​’ ಚಿತ್ರವನ್ನು ಹೊಗಳಿರುವ ಅವರು, ‘ಕಾಂತಾರ’ ಚಿತ್ರವನ್ನು ತೆಗಳಿದ್ದಾರೆ. ಆನಂದ್ ಗಾಂಧಿಗೆ ‘ಕಾಂತಾರ’ ಸಿನಿಮಾ ನೋಡಿ ಅಭಿಮಾನಿಗಳಾದವರು ಕ್ಲಾಸ್ ತೆಗೆದುಕೊಂಡಿದ್ದಾರೆ.

2018ರಲ್ಲಿ ‘ತುಂಬಾಡ್​’ ಸಿನಿಮಾ ತೆರೆಗೆ ಬಂತು. ಹಾರರ್​ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತ್ತು. ಈ ಸಿನಿಮಾವನ್ನು ಅನೇಕರು ಈಗಲೂ ಇಷ್ಟಪಡುತ್ತಾರೆ. ಅನೇಕರು ‘ಕಾಂತಾರ’ ಚಿತ್ರವನ್ನು ‘ತುಂಬಾಡ್​’ ಚಿತ್ರಕ್ಕೆ ಹೋಲಿಕೆ ಮಾಡಿದ್ದರು. ‘ತುಂಬಾಡ್​’ನ ಚಿತ್ರಕಥೆ ಬರಹಗಾರ ಹಾಗೂ ನಿರ್ಮಾಪಕರಲ್ಲಿ ಒಬ್ಬರಾದ ಆನಂದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂತಾರ ಚಿತ್ರ ತುಂಬಾಡ್​ನಂತಲ್ಲ. ಸಂಕುಚಿತತೆ ಹಾಗೂ ಪುರಷತ್ವ ಸಂಕೇತವನ್ನು ಖಂಡಿಸುವ ರೀತಿಯಲ್ಲಿ ತುಂಬಾಡ್ ಇತ್ತು. ಆದರೆ, ಕಾಂತಾರ ಚಿತ್ರ ಅದನ್ನು ವೈಭವೀಕರಿಸುವಂತಿದೆ’ ಎಂದು ಹೇಳಿದ್ದಾರೆ ಆನಂದ್.  ಇದಕ್ಕೆ ಅನೇಕರು ಕಮೆಂಟ್ ಮಾಡಿದ್ದಾರೆ. ಆನಂದ್ ಗಾಂಧಿಗೆ ಬುದ್ಧಿವಾದ ಹೇಳುವ ಕೆಲಸ ಆಗಿದೆ.

ಇದನ್ನೂ ಓದಿ: Varaha Roopam Song: ಮತ್ತೆ ಯೂಟ್ಯೂಬ್​ಗೆ ಮರಳಿದ ‘ವರಾಹ ರೂಪಂ‌’ ಹಾಡು: ಕಾನೂನು ಹೋರಾಟದಲ್ಲಿ ‘ಕಾಂತಾರ’ ಚಿತ್ರಕ್ಕೆ ಗೆಲುವು

‘ಕಾಂತಾರ ಸಿನಿಮಾ ವ್ಯಭಿಚಾರದಿಂದ ಜ್ಞಾನೋದಯದ ಕಡೆಗೆ ಪ್ರಯಾಣ ಬೆಳೆಸುವುದನ್ನು ಚಿತ್ರಿಸುತ್ತದೆ. ಸ್ಥಳೀಯತೆಯನ್ನು ಸಿನಿಮಾದಲ್ಲಿ ಹೆಚ್ಚಾಗಿ ತೋರಿಸಲಾಗಿದೆ. ತುಂಬಾಡ್ ಇದಕ್ಕೆ ವಿರುದ್ಧವಾಗಿದೆ. ನೀವು ಹೇಳಿದ್ದು ಸರಿ. ಕಾಂತಾರ ತುಂಬಾಡ್​ನಂತಲ್ಲ’ ಎಂದು ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದಾನೆ. ‘ಚಿತ್ರದ ಕಥಾವಸ್ತುವು ಅಂತಹುದ್ದಾಗಿದೆ. ಅದು ಪಾತ್ರಕ್ಕೆ ಅಗತ್ಯವಾಗಿತ್ತು. ಕಥಾ ನಾಯಕನನ್ನು ಸೌಮ್ಯವಾಗಿ ತೋರಿಸಲು ಸಾಧ್ಯವಿರಲಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ