AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ

Kapil Sharma Biopic: ‘ಫನ್ಕಾರ್​’ ಎಂಬುದು ಉರ್ದು ಶಬ್ದ. ಇದರ ಅರ್ಥ ಕಲಾವಿದ ಎಂದು. ಕಪಿಲ್​ ಶರ್ಮಾ ಓರ್ವ ಕಲಾವಿದ. ಈ ಕಾರಣಕ್ಕೆ ‘ಫನ್ಕಾರ್​’ ಎಂದು ಇಡಲಾಗಿದೆ. ಈ ಚಿತ್ರವನ್ನು ನಿರ್ದೇಶಕರು ಹೇಗೆ ಕಟ್ಟಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡುತ್ತಿದೆ.

ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ
ಕಪಿಲ್​ ಶರ್ಮಾ
TV9 Web
| Updated By: ಮದನ್​ ಕುಮಾರ್​|

Updated on:Jan 15, 2022 | 7:28 AM

Share

ಇತ್ತೀಚೆಗೆ ಚಿತ್ರರಂಗದಲ್ಲಿ ಬಯೋಪಿಕ್​ ಟ್ರೆಂಡ್​ ಹೆಚ್ಚಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಕಷ್ಟು ಜನರ ಬಯೋಪಿಕ್​ಗಳನ್ನು ಮಾಡಲಾಗುತ್ತಿದೆ. ಇದರಲ್ಲಿ ಅನೇಕರು ಯಶಸ್ಸು ಕಂಡಿದ್ದಾರೆ. ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡ ಕಾಮಿಡಿಯನ್​ ಕಪಿಲ್​ ಶರ್ಮಾ (Kapil Sharma) ಕುರಿತು ಈಗ ಬಯೋಪಿಕ್​ ಸಿದ್ಧಗೊಳ್ಳುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ. ಕಪಿಲ್​ ಶರ್ಮಾ ಅವರ ಆರಂಭಿಕ ಜೀವನ ಹೇಗಿತ್ತು? ಅವರು ಬಣ್ಣದ ಲೋಕಕ್ಕೆ ಬಂದಿದ್ದು ಹೇಗೆ? ಹೀಗೆ ಹಲವು ವಿಚಾರಗಳ ಬಗ್ಗೆ ಈ ಬಯೋಪಿಕ್​ನಲ್ಲಿ ಹೇಳಲಾಗುತ್ತದೆ. ‘ಫನ್ಕಾರ್​’ (Funkaar ) ಎನ್ನುವ ಶೀರ್ಷಿಕೆಯನ್ನು ಸಿನಿಮಾಗೆ ಇಡಲಾಗಿದೆ. ಮೃಗದೀಪ್​ ಸಿಂಗ್​ ಲಂಬಾ (Mrighdeep Singh Lamba) ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಕಪಿಲ್​ ಶರ್ಮಾ ಅಭಿಮಾನಿಗಳು ಖುಷಿಪಟ್ಟಿದ್ದಾರೆ.  

‘ಫನ್ಕಾರ್​’ ಎಂಬುದು ಉರ್ದು ಶಬ್ದ. ಇದರ ಅರ್ಥ ಕಲಾವಿದ ಎಂದು. ಕಪಿಲ್​ ಶರ್ಮಾ ಓರ್ವ ಕಲಾವಿದ. ಈ ಕಾರಣಕ್ಕೆ ‘ಫನ್ಕಾರ್​’ ಎಂದು ಇಡಲಾಗಿದೆ. ಈ ಚಿತ್ರವನ್ನು ನಿರ್ದೇಶಕರು ಹೇಗೆ ಕಟ್ಟಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡುತ್ತಿದೆ. ಮೃಗದೀಪ್​ ಸಿಂಗ್ ಅವರು ‘ಫುಕ್ರೇ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಸದ್ಯ, ಅವರು ‘ಫುಕ್ರೇ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ಬಯೋಪಿಕ್​ಅನ್ನು ಅವರು ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ.

ಕಪಿಲ್​ ಶರ್ಮಾ ಪಂಜಾಬ್​ನ ಅಮೃತ್​ಸರದವರು. ಸಾಮಾನ್ಯ ಕುಟುಂಬದಿಂದ ಬಂದು, ಈಗ ‘ದಿ ಕಪಿಲ್​ ಶರ್ಮಾ ಶೋ’ ಅನ್ನು ಅದ್ಭುತವಾಗಿ ನಡೆಸಿಕೊಡುತ್ತಿರುವ ಹೆಚ್ಚುಗಾರಿಕೆ ಅವರದ್ದು. ಈ ಶೋಗೆ ಸಾಕಷ್ಟು ಸೆಲೆಬ್ರಿಟಿಗಳು ಅತಿಥಿಗಳಾಗಿ ಬಂದು ಹೋಗಿದ್ದಾರೆ.

2007ರಲ್ಲಿ ‘ದಿ ಗ್ರೇಟ್​ ಇಂಡಿಯನ್​ ಲಾಫ್ಟರ್​ ಚಾಲೆಂಜ್​’ನಲ್ಲಿ ಕಪಿಲ್​ ಶರ್ಮಾ ಗೆದ್ದಿದ್ದರು. ನಂತರ ಹಲವು ಕಾಮಿಡಿ ಶೋಗಳಲ್ಲಿ ಅವರು ಕಾಣಿಸಿಕೊಂಡರು. 2013ರಲ್ಲಿ ‘ಕಾಮಿಡಿ ನೈಟ್ಸ್​ ವಿತ್​ ಕಪಿಲ್​’ ಅನ್ನು ಆರಂಭಿಸಿದರು. ಈ ಶೋ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತು. ವಾಹಿನಿ ಜತೆಗಿನ ಹಣದ ವ್ಯವಹಾರದಲ್ಲಿ ಹೊಂದಾಣಿಕೆ ಆಗದ ಕಾರಣ ಮೂರು ವರ್ಷದ ನಂತರ ಈ ಶೋ ಕ್ಯಾನ್ಸಲ್​ ಆಯಿತು. ಸ್ವಲ್ಪ ಸಮಯದ ನಂತರ (2016) ಬೇರೆ ಚಾನೆಲ್​ನಲ್ಲಿ ‘ದಿ ಕಪಿಲ್​ ಶರ್ಮಾ ಶೋ’ ಆರಂಭಿಸಿದರು ಅವರು. ಅಲ್ಲಿಂದ ಇಲ್ಲಿಯವರೆಗೂ ಅವರ ಶೋ ಖ್ಯಾತಿ ಗಳಿಸಿಕೊಂಡಿದೆ.  ಇದಲ್ಲದೇ, ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.

ಇದನ್ನೂ ಓದಿ: ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?

ಹೆಂಡತಿ ಬಿಟ್ಟುಹೋದ ನೋವು, ಆರ್ಥಿಕ ಸಂಕಷ್ಟ; ಆತ್ಮಹತ್ಯೆಗೆ ಯತ್ನಿಸಿದ ‘ದಿ ಕಪಿಲ್​ ಶರ್ಮಾ ಶೋ’ ಹಾಸ್ಯನಟ

Published On - 6:30 am, Sat, 15 January 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ