AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ

Kapil Sharma Biopic: ‘ಫನ್ಕಾರ್​’ ಎಂಬುದು ಉರ್ದು ಶಬ್ದ. ಇದರ ಅರ್ಥ ಕಲಾವಿದ ಎಂದು. ಕಪಿಲ್​ ಶರ್ಮಾ ಓರ್ವ ಕಲಾವಿದ. ಈ ಕಾರಣಕ್ಕೆ ‘ಫನ್ಕಾರ್​’ ಎಂದು ಇಡಲಾಗಿದೆ. ಈ ಚಿತ್ರವನ್ನು ನಿರ್ದೇಶಕರು ಹೇಗೆ ಕಟ್ಟಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡುತ್ತಿದೆ.

ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ
ಕಪಿಲ್​ ಶರ್ಮಾ
Follow us
TV9 Web
| Updated By: ಮದನ್​ ಕುಮಾರ್​

Updated on:Jan 15, 2022 | 7:28 AM

ಇತ್ತೀಚೆಗೆ ಚಿತ್ರರಂಗದಲ್ಲಿ ಬಯೋಪಿಕ್​ ಟ್ರೆಂಡ್​ ಹೆಚ್ಚಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಕಷ್ಟು ಜನರ ಬಯೋಪಿಕ್​ಗಳನ್ನು ಮಾಡಲಾಗುತ್ತಿದೆ. ಇದರಲ್ಲಿ ಅನೇಕರು ಯಶಸ್ಸು ಕಂಡಿದ್ದಾರೆ. ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡ ಕಾಮಿಡಿಯನ್​ ಕಪಿಲ್​ ಶರ್ಮಾ (Kapil Sharma) ಕುರಿತು ಈಗ ಬಯೋಪಿಕ್​ ಸಿದ್ಧಗೊಳ್ಳುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ. ಕಪಿಲ್​ ಶರ್ಮಾ ಅವರ ಆರಂಭಿಕ ಜೀವನ ಹೇಗಿತ್ತು? ಅವರು ಬಣ್ಣದ ಲೋಕಕ್ಕೆ ಬಂದಿದ್ದು ಹೇಗೆ? ಹೀಗೆ ಹಲವು ವಿಚಾರಗಳ ಬಗ್ಗೆ ಈ ಬಯೋಪಿಕ್​ನಲ್ಲಿ ಹೇಳಲಾಗುತ್ತದೆ. ‘ಫನ್ಕಾರ್​’ (Funkaar ) ಎನ್ನುವ ಶೀರ್ಷಿಕೆಯನ್ನು ಸಿನಿಮಾಗೆ ಇಡಲಾಗಿದೆ. ಮೃಗದೀಪ್​ ಸಿಂಗ್​ ಲಂಬಾ (Mrighdeep Singh Lamba) ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಕಪಿಲ್​ ಶರ್ಮಾ ಅಭಿಮಾನಿಗಳು ಖುಷಿಪಟ್ಟಿದ್ದಾರೆ.  

‘ಫನ್ಕಾರ್​’ ಎಂಬುದು ಉರ್ದು ಶಬ್ದ. ಇದರ ಅರ್ಥ ಕಲಾವಿದ ಎಂದು. ಕಪಿಲ್​ ಶರ್ಮಾ ಓರ್ವ ಕಲಾವಿದ. ಈ ಕಾರಣಕ್ಕೆ ‘ಫನ್ಕಾರ್​’ ಎಂದು ಇಡಲಾಗಿದೆ. ಈ ಚಿತ್ರವನ್ನು ನಿರ್ದೇಶಕರು ಹೇಗೆ ಕಟ್ಟಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡುತ್ತಿದೆ. ಮೃಗದೀಪ್​ ಸಿಂಗ್ ಅವರು ‘ಫುಕ್ರೇ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಸದ್ಯ, ಅವರು ‘ಫುಕ್ರೇ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ಬಯೋಪಿಕ್​ಅನ್ನು ಅವರು ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ.

ಕಪಿಲ್​ ಶರ್ಮಾ ಪಂಜಾಬ್​ನ ಅಮೃತ್​ಸರದವರು. ಸಾಮಾನ್ಯ ಕುಟುಂಬದಿಂದ ಬಂದು, ಈಗ ‘ದಿ ಕಪಿಲ್​ ಶರ್ಮಾ ಶೋ’ ಅನ್ನು ಅದ್ಭುತವಾಗಿ ನಡೆಸಿಕೊಡುತ್ತಿರುವ ಹೆಚ್ಚುಗಾರಿಕೆ ಅವರದ್ದು. ಈ ಶೋಗೆ ಸಾಕಷ್ಟು ಸೆಲೆಬ್ರಿಟಿಗಳು ಅತಿಥಿಗಳಾಗಿ ಬಂದು ಹೋಗಿದ್ದಾರೆ.

2007ರಲ್ಲಿ ‘ದಿ ಗ್ರೇಟ್​ ಇಂಡಿಯನ್​ ಲಾಫ್ಟರ್​ ಚಾಲೆಂಜ್​’ನಲ್ಲಿ ಕಪಿಲ್​ ಶರ್ಮಾ ಗೆದ್ದಿದ್ದರು. ನಂತರ ಹಲವು ಕಾಮಿಡಿ ಶೋಗಳಲ್ಲಿ ಅವರು ಕಾಣಿಸಿಕೊಂಡರು. 2013ರಲ್ಲಿ ‘ಕಾಮಿಡಿ ನೈಟ್ಸ್​ ವಿತ್​ ಕಪಿಲ್​’ ಅನ್ನು ಆರಂಭಿಸಿದರು. ಈ ಶೋ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತು. ವಾಹಿನಿ ಜತೆಗಿನ ಹಣದ ವ್ಯವಹಾರದಲ್ಲಿ ಹೊಂದಾಣಿಕೆ ಆಗದ ಕಾರಣ ಮೂರು ವರ್ಷದ ನಂತರ ಈ ಶೋ ಕ್ಯಾನ್ಸಲ್​ ಆಯಿತು. ಸ್ವಲ್ಪ ಸಮಯದ ನಂತರ (2016) ಬೇರೆ ಚಾನೆಲ್​ನಲ್ಲಿ ‘ದಿ ಕಪಿಲ್​ ಶರ್ಮಾ ಶೋ’ ಆರಂಭಿಸಿದರು ಅವರು. ಅಲ್ಲಿಂದ ಇಲ್ಲಿಯವರೆಗೂ ಅವರ ಶೋ ಖ್ಯಾತಿ ಗಳಿಸಿಕೊಂಡಿದೆ.  ಇದಲ್ಲದೇ, ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.

ಇದನ್ನೂ ಓದಿ: ಕಪಿಲ್​ ಶರ್ಮಾ ಶೋಗೆ ಸ್ಮೃತಿ ಇರಾನಿಗೆ ಸಿಗಲಿಲ್ಲ ಎಂಟ್ರಿ? ಸಿಟ್ಟಾದ ಕೇಂದ್ರ ಸಚಿವೆ ಮಾಡಿದ್ದೇನು?

ಹೆಂಡತಿ ಬಿಟ್ಟುಹೋದ ನೋವು, ಆರ್ಥಿಕ ಸಂಕಷ್ಟ; ಆತ್ಮಹತ್ಯೆಗೆ ಯತ್ನಿಸಿದ ‘ದಿ ಕಪಿಲ್​ ಶರ್ಮಾ ಶೋ’ ಹಾಸ್ಯನಟ

Published On - 6:30 am, Sat, 15 January 22

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು