AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್​ ಜೋಹರ್​ ಅದ್ದೂರಿ ಬರ್ತ್​ಡೇ ಪಾರ್ಟಿಗೆ ಕನ್ನಡದ ಸೆಲೆಬ್ರಿಟಿಗಳಿಗೂ ಆಹ್ವಾನ; ಬದಲಾಯ್ತು ಕಾಲ

ಮೇ 25ರಂದು ಕರಣ್​ ಜೋಹರ್​ ಅವರ ಹುಟ್ಟುಹಬ್ಬ. ಈ ಬಾರಿ ಅವರು 50ನೇ ವಸಂತಕ್ಕೆ ಕಾಲಿಡಲಿದ್ದಾರೆ. ದಕ್ಷಿಣ ಭಾರತದ ಸೆಲೆಬ್ರಿಟಿಗಳನ್ನು ಪಾರ್ಟಿಗೆ ಆಹ್ವಾನಿಸಲಿದ್ದಾರೆ.

ಕರಣ್​ ಜೋಹರ್​ ಅದ್ದೂರಿ ಬರ್ತ್​ಡೇ ಪಾರ್ಟಿಗೆ ಕನ್ನಡದ ಸೆಲೆಬ್ರಿಟಿಗಳಿಗೂ ಆಹ್ವಾನ; ಬದಲಾಯ್ತು ಕಾಲ
ಕರಣ್ ಜೋಹರ್, ಯಶ್
TV9 Web
| Edited By: |

Updated on:May 17, 2022 | 7:55 AM

Share

ನಿರ್ಮಾಪಕ ಕಮ್​ ನಿರ್ದೇಶಕ ಕರಣ್​ ಜೋಹರ್​ (Karan Johar) ಅವರ ಖ್ಯಾತಿ ದೊಡ್ಡದು. ಹಲವಾರು ವರ್ಷಗಳಿಂದ ಬಾಲಿವುಡ್​ನಲ್ಲಿ ಸಕ್ರಿಯರಾಗಿರುವ ಅವರು ತುಂಬ ಪ್ರಭಾವಿ ವ್ಯಕ್ತಿ ಎಂಬುದರಲ್ಲಿ ಅನುಮಾನವೇ ಬೇಡ. ನಿರೂಪಕನಾಗಿಯೂ ಅವರು ಫೇಮಸ್​. ಹಿಂದಿ ಚಿತ್ರರಂಗದಲ್ಲಿ ಅನೇಕರನ್ನು ಲಾಂಚ್​ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ತಮ್ಮದೇ ‘ಧರ್ಮ ಪ್ರೊಡಕ್ಷನ್ಸ್​’ ನಿರ್ಮಾಣ ಸಂಸ್ಥೆ ಮೂಲಕ ಗಮನಾರ್ಹ ಸಿನಿಮಾಗಳನ್ನು ಅವರು ನೀಡಿದ್ದಾರೆ. ಅದ್ದೂರಿತನಕ್ಕೆ ಅವರು ಹೆಸರುವಾಸಿ. ಸಿನಿಮಾದಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಅವರದ್ದು ವರ್ಣರಂಜಿತ ವ್ಯಕಿತ್ವ. ಐಷಾರಾಮಿ ಜೀವನ ಸಾಗಿಸುವ ಕರಣ್​ ಜೋಹರ್​ ಅವರು ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು (Karan Johar Birthday) ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಾರೆ. ಬಾಲಿವುಡ್​ನ ಅನೇಕ ಸ್ಟಾರ್​ ನಟ-ನಟಿಯರನ್ನು, ತಂತ್ರಜ್ಞರನ್ನು ಕರೆದು ಅವರು ಪಾರ್ಟಿ ಮಾಡುತ್ತಾರೆ. ಹಲವು ಬಗೆಯಲ್ಲಿ ಆ ಪಾರ್ಟಿಯ ಸುದ್ದಿಗಳು ವೈರಲ್​ ಆಗುತ್ತವೆ. ಮೇ 25ರಂದು ಅವರಿಗೆ ಜನ್ಮದಿನ ಸಂಭ್ರಮ. ಕರಣ್​ ಜೋಹರ್​ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಈ ಬಾರಿ ‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರಿಗೂ ಆಹ್ವಾನ ನೀಡಲಾಗುವುದು ಎಂಬ ಸುದ್ದಿ ಹರಡಿದೆ. ಅಲ್ಲದೇ ದಕ್ಷಿಣ ಭಾರತದ ಇನ್ನೂ ಅನೇಕ ಸ್ಟಾರ್​ಗಳನ್ನು ಕರಣ್​ ಜೋಹರ್​ ಆಹ್ವಾನಿಸಲಿದ್ದಾರೆ ಎನ್ನಲಾಗಿದೆ.

ಈವರೆಗೂ ಕೇವಲ ಬಾಲಿವುಡ್​ ಮೇಲೆ ಗಮನ ಹರಿಸುತ್ತಿದ್ದ ಕರಣ್​ ಜೋಹರ್​ ಅವರು ಈಗ ದಕ್ಷಿಣ ಭಾರತದ ಚಿತ್ರರಂಗದ ಮೇಲೂ ಒಂದು ಕಣ್ಣಿಟ್ಟಿದ್ದಾರೆ. ಬಾಕ್ಸ್​ ಆಫೀಸ್​ ದೃಷ್ಟಿಯಿಂದ ಈಗ ಕಾಲ ಬದಲಾಗಿದೆ. ಸೌತ್​ ಇಂಡಿಯನ್​ ಸಿನಿಮಾಗಳು ಹಿಂದಿ ಚಿತ್ರಗಳನ್ನು ಮೀರಿಸಿ ಕಲೆಕ್ಷನ್​ ಮಾಡುತ್ತಿವೆ. ಅದಕ್ಕೆ ‘ಕೆಜಿಎಫ್​ 2’, ‘ಪುಷ್ಪ’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳೇ ಸಾಕ್ಷಿ. ಹಾಗಾಗಿ ದಕ್ಷಿಣ ಭಾರತದ ಸೆಲೆಬ್ರಿಟಿಗಳ ಜೊತೆಗೆ ಕರಣ್​ ಜೋಹರ್​ ಅವರು ಸ್ನೇಹದ ಹಸ್ತ ಚಾಚಿದ್ದಾರೆ.

ಸೌತ್​ ಸೆಲೆಬ್ರಿಟಿಗಳ ಜೊತೆಗೆ ಕರಣ್​ ಜೋಹರ್​ ಅವರಿಗೆ ಒಡನಾಟ ಹೆಚ್ಚುತ್ತಿದೆ. ತಮ್ಮ ‘ಧರ್ಮ ಪ್ರೊಡಕ್ಷನ್’​ ಮೂಲಕ ದಕ್ಷಿಣದ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡುತ್ತಿದ್ದಾರೆ. ವಿಜಯ್​ ದೇವರಕೊಂಡ ನಟಿಸುತ್ತಿರುವ ‘ಲೈಗರ್​’ ಚಿತ್ರಕ್ಕೆ ಕರಣ್​ ಜೋಹರ್​ ಅವರೇ ನಿರ್ಮಾಪಕರು. ಇನ್ನು, ‘ಕೆಜಿಎಫ್​ 2’ ತಂಡದ ಜೊತೆಗೂ ಅವರು ತುಂಬ ಆಪ್ತತೆ ಬೆಳೆಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್​ ಲಾಂಚ್​ ಕಾರ್ಯಕ್ರಮದ ನಿರೂಪಣೆ ಮಾಡಲು ಅವರು ಬೆಂಗಳೂರಿಗೆ ಬಂದಿದ್ದನ್ನು ಈ ವೇಳೆ ನೆನಪಿಸಿಕೊಳ್ಳಬಹುದು. ಹೀಗೆ ದಕ್ಷಿಣದ ಸೆಲೆಬ್ರಿಟಿಗಳ ಸ್ನೇಹ ಸಂಪಾದಿಸಿರುವ ಕರಣ್​ ಜೋಹರ್ ಅವರು ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಯಶ್​, ವಿಜಯ್​ ದೇವರಕೊಂಡ, ಜ್ಯೂ. ಎನ್​ಟಿಆರ್​, ಪ್ರಶಾಂತ್​ ನೀಲ್​ ಸೇರಿದಂತೆ ಅನೇಕರು ಆಹ್ವಾನಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ
Image
ಮತ್ತೆ ಪ್ರಾರಂಭವಾಗುವುದಿಲ್ಲ ಕಾಫಿ ವಿತ್ ಕರಣ್​; ಭಾವನಾತ್ಮಕ ಸಾಲುಗಳ ಮೂಲಕ ವಿಷಯ ತಿಳಿಸಿದ ಕರಣ್​ ಜೋಹರ್​ !
Image
ಶಾರುಖ್​ ಖಾನ್​-ಕಾಜೋಲ್​ ಮತ್ತೆ ಜೋಡಿ; ಈ ಬಾರಿ ಕೂಡ ಕರಣ್​ ಜೋಹರ್ ರೂವಾರಿ
Image
Karan Johar: ‘ಕೆಜಿಎಫ್​ 2’ ಟ್ರೇಲರ್​ ರಿಲೀಸ್​ಗೆ ಬರ್ತಿದ್ದಾರೆ ಸ್ಟಾರ್​ ನಿರೂಪಕ ಕರಣ್​ ಜೋಹರ್​; ಏನು ಇವರ ವಿಶೇಷ?
Image
ಮನಸಾರೆ ದಕ್ಷಿಣ ಭಾರತದ ಸಿನಿಮಾ ಹೊಗಳಿದ ಕರಣ್​ ಜೋಹರ್​; ಸ್ಕ್ರೀನ್​ಶಾಟ್​ ಹಂಚಿಕೊಂಡ ನಟ

ಕರಣ್​ ಜೋಹರ್​ ಅವರಿಗೆ ಈ ಬಾರಿಯ ಹುಟ್ಟುಹಬ್ಬ ಹೆಚ್ಚು ವಿಶೇಷ ಆಗಿರಲಿದೆ. ಯಾಕೆಂದರೆ ಅವರು 50ನೇ ವಸಂತಕ್ಕೆ ಕಾಲಿಡಲಿದ್ದಾರೆ. ಆದ್ದರಿಂದ ಹಿಂದೆಂದಿಗಿಂತಲೂ ಅದ್ದೂರಿಯಾಗಿ ಪಾರ್ಟಿ ನೀಡಲು ಅವರು ತೀರ್ಮಾನಿಸಿದ್ದಾರೆ. ಈ ಪಾರ್ಟಿಯಲ್ಲಿ ಹಣವನ್ನು ನೀರಿನಂತೆ ಖರ್ಚು ಮಾಡಲಾಗುತ್ತದೆ ಎಂದೆಲ್ಲ ಬಿ-ಟೌನ್​ ಗಲ್ಲಿಯಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. ಅಂತಿಮವಾಗಿ ಯಾರೆಲ್ಲ ಈ ಪಾರ್ಟಿಯಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:55 am, Tue, 17 May 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ