ಕರಣ್​ ಜೋಹರ್​ ಜೊತೆ ಅಯಾನ್​ ಮುಖರ್ಜಿ ಮುನಿಸು; ‘ಬ್ರಹ್ಮಾಸ್ತ್ರ’ ತಂಡದ ಕಿರಿಕ್​ ಬಹಿರಂಗ

|

Updated on: Apr 12, 2023 | 7:15 AM

Karan Johar | Ayan Mukerji: ಅಯಾನ್​ ಮುಖರ್ಜಿ ಜೊತೆಗಿನ ವೈಮನಸ್ಸಿನ ಬಗ್ಗೆ ಕರಣ್​ ಜೋಹರ್​ ಅವರು ಮೌನ ಮುರಿದಿಲ್ಲ. ಅವರಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಕರಣ್​ ಜೋಹರ್​ ಜೊತೆ ಅಯಾನ್​ ಮುಖರ್ಜಿ ಮುನಿಸು; ‘ಬ್ರಹ್ಮಾಸ್ತ್ರ’ ತಂಡದ ಕಿರಿಕ್​ ಬಹಿರಂಗ
ಕರಣ್ ಜೋಹರ್, ಅಯಾನ್ ಮುಖರ್ಜಿ
Follow us on

ನಿರ್ದೇಶಕ, ನಿರ್ಮಾಪಕ ಕರಣ್​ ಜೋಹರ್ (Karan Johar) ಅವರು ಬಾಲಿವುಡ್​ನಲ್ಲಿ ಸಖತ್​ ಪ್ರಭಾವಿ ವ್ಯಕ್ತಿ ಆಗಿದ್ದಾರೆ. ಅವರನ್ನು ಎದುರು ಹಾಕಿಕೊಂಡರೆ ಹಿಂದಿ ಚಿತ್ರರಂಗದಲ್ಲಿ ಬೆಳೆಯುವುದು ಕಷ್ಟ ಎನ್ನುವ ಮಾತಿದೆ. ಕರಣ್​ ಜೋಹರ್​ ಕೃಪೆ ಇದ್ದರೆ ಎಂಥವರು ಕೂಡ ಸ್ಟಾರ್​ ಆಗುತ್ತಾರೆ ಎಂಬುದು ಬಿ-ಟೌನ್​ ಗಲ್ಲಿಯಲ್ಲಿ ಕೇಳಿಬರುವ ಮಾತು. ಹಾಗಿದ್ದರೂ ಕೂಡ ಕರಣ್​ ಜೋಹರ್​ ಜೊತೆ ಅನೇಕರು ಕಿರಿಕ್​ ಮಾಡಿಕೊಂಡ ಉದಾಹರಣೆ ಇದೆ. ಅದಕ್ಕೆ ಹೊಸ ಸೇರ್ಪಡೆ ನಿರ್ದೇಶಕ ಅಯಾನ್​ ಮುಖರ್ಜಿ. 2022ರಲ್ಲಿ ತೆರೆಕಂಡ ‘ಬ್ರಹ್ಮಾಸ್ತ್ರ’ ಸಿನಿಮಾದಿಂದ ಅಯಾನ್​ ಮುಖರ್ಜಿ (Ayan Mukerji) ಅವರು ದೊಡ್ಡ ಸಕ್ಸಸ್​ ಕಂಡರು. ಆ ಚಿತ್ರಕ್ಕೆ ಬಂಡವಾಳ ಹೂಡಿದವರಲ್ಲಿ ಕರಣ್​ ಜೋಹರ್​ ಕೂಡ ಪ್ರಮುಖರು. ಆದರೆ ಈಗ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಸೀಕ್ವೆಲ್​ (Brahmastra Sequel) ಸಿದ್ಧವಾಗುತ್ತಿದ್ದು, ಅದರಲ್ಲಿ ಕರಣ್​ ಜೋಹರ್​ ಪಾಲುದಾರಿಕೆ ಇಲ್ಲವೇ ಎಂಬ ಅನುಮಾನ ಮೂಡಿದೆ.

ಕೆಲವೇ ದಿನಗಳ ಹಿಂದೆ ಅಯಾನ್​ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಸೀಕ್ವೆಲ್​ಗಳ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದರು. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದರು. ‘ಬ್ರಹ್ಮಾಸ್ತ್ರ: ಪಾರ್ಟ್​ 2’ ಸಿನಿಮಾ 2026ರ ಡಿಸೆಂಬರ್​ ತಿಂಗಳಲ್ಲಿ ಬಿಡುಗಡೆ ಆಗಲಿದೆ. ‘ಬ್ರಹ್ಮಾಸ್ತ್ರ: ಪಾರ್ಟ್​ 3’ ಚಿತ್ರ 2027ರ ಡಿಸೆಂಬರ್​ಗೆ ತೆರೆಕಾಣಲಿದೆ. ಆದರೆ ಈ ಮಾಹಿತಿಯನ್ನು ಹಂಚಿಕೊಳ್ಳುವಾಗ ಕರಣ್​ ಜೋಹರ್​ ಹೆಸರನ್ನು ಅಯಾನ್​ ಮುಖರ್ಜಿ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ! ಅದೇ ಈಗ ಕಿರಿಕ್​ಗೆ ಕಾರಣ ಆಗಿದೆ.

ಇದನ್ನೂ ಓದಿ: ವೈಮನಸ್ಸು ಬದಿಗಿಟ್ಟು ಭೇಟಿ ಆದ ಕರಣ್ ಜೋಹರ್-ಕಾರ್ತಿಕ್ ಆರ್ಯನ್​; ಆದರೂ ತಪ್ಪಲಿಲ್ಲ ಟೀಕೆ

ಇದನ್ನೂ ಓದಿ
Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

ಮೂಲಗಳ ಪ್ರಕಾರ, ‘ಬ್ರಹ್ಮಾಸ್ತ್ರ’ ಚಿತ್ರದ ಬೌದ್ಧಿಕ ಆಸ್ತಿ ಹಕ್ಕುಗಳು ನಿರ್ದೇಶಕ ಅಯಾನ್​ ಮುಖರ್ಜಿ ಬಳಿ ಇದೆ. ಹಾಗಾಗಿ ಅವರು ಸೀಕ್ವೆಲ್​ಗಳನ್ನು ಮಾಡಲು ಕರಣ್​ ಜೋಹರ್​ ಅವರ ‘ಧರ್ಮ ಪ್ರೊಡಕ್ಷನ್ಸ್​’ ಜೊತೆ ಕೈ ಜೋಡಿಸುವ ಬದಲು ಬೇರೆ ನಿರ್ಮಾಣ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸದ್ಯಕ್ಕಂತೂ ಕರಣ್​ ಜೋಹರ್​ ಅವರು ಮೌನ ಮುರಿದಿಲ್ಲ. ಅವರಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ಕರಿಯರ್ ನಾಶ ಮಾಡಲು ಹೊರಟಿದ್ದ ಕರಣ್ ಜೋಹರ್; ‘ಅವರಿಗೆ ಅದೇ ಕೆಲಸ’ ಎಂದ ಕಂಗನಾ

ಅಯಾನ್​ ಮುಖರ್ಜಿ ಅವರು ‘ವಾರ್​ 2’ ಸಿನಿಮಾ ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಅವರು ‘ಯಶ್​ ರಾಜ್​ ಫಿಲ್ಮ್ಸ್​’ ಜೊತೆ ಕೈ ಜೋಡಿಸಲಿದ್ದಾರೆ. ಆದರೆ ‘ಬ್ರಹ್ಮಾಸ್ತ್ರ’ ಸೀಕ್ವೆಲ್​ಗಳನ್ನು ನಿರ್ದೇಶಿಸಿದ ನಂತರವೇ ಬೇರೆ ಸಿನಿಮಾಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಕರಣ್​ ಜೋಹರ್​ ಪಟ್ಟು ಹಿಡಿದರು ಎನ್ನಲಾಗಿದೆ. ಅದೇ ಕಾರಣದಿಂದ ಇಬ್ಬರ ನಡುವೆ ವೈಮನಸ್ಸು ಮೂಡಿತು ಎಂಬ ಸುದ್ದಿ ಕೂಡ ಹಬ್ಬಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.