ಕರಣ್​ ಜೋಹರ್​ ಜೊತೆ ಅಯಾನ್​ ಮುಖರ್ಜಿ ಮುನಿಸು; ‘ಬ್ರಹ್ಮಾಸ್ತ್ರ’ ತಂಡದ ಕಿರಿಕ್​ ಬಹಿರಂಗ

Karan Johar | Ayan Mukerji: ಅಯಾನ್​ ಮುಖರ್ಜಿ ಜೊತೆಗಿನ ವೈಮನಸ್ಸಿನ ಬಗ್ಗೆ ಕರಣ್​ ಜೋಹರ್​ ಅವರು ಮೌನ ಮುರಿದಿಲ್ಲ. ಅವರಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಕರಣ್​ ಜೋಹರ್​ ಜೊತೆ ಅಯಾನ್​ ಮುಖರ್ಜಿ ಮುನಿಸು; ‘ಬ್ರಹ್ಮಾಸ್ತ್ರ’ ತಂಡದ ಕಿರಿಕ್​ ಬಹಿರಂಗ
ಕರಣ್ ಜೋಹರ್, ಅಯಾನ್ ಮುಖರ್ಜಿ

Updated on: Apr 12, 2023 | 7:15 AM

ನಿರ್ದೇಶಕ, ನಿರ್ಮಾಪಕ ಕರಣ್​ ಜೋಹರ್ (Karan Johar) ಅವರು ಬಾಲಿವುಡ್​ನಲ್ಲಿ ಸಖತ್​ ಪ್ರಭಾವಿ ವ್ಯಕ್ತಿ ಆಗಿದ್ದಾರೆ. ಅವರನ್ನು ಎದುರು ಹಾಕಿಕೊಂಡರೆ ಹಿಂದಿ ಚಿತ್ರರಂಗದಲ್ಲಿ ಬೆಳೆಯುವುದು ಕಷ್ಟ ಎನ್ನುವ ಮಾತಿದೆ. ಕರಣ್​ ಜೋಹರ್​ ಕೃಪೆ ಇದ್ದರೆ ಎಂಥವರು ಕೂಡ ಸ್ಟಾರ್​ ಆಗುತ್ತಾರೆ ಎಂಬುದು ಬಿ-ಟೌನ್​ ಗಲ್ಲಿಯಲ್ಲಿ ಕೇಳಿಬರುವ ಮಾತು. ಹಾಗಿದ್ದರೂ ಕೂಡ ಕರಣ್​ ಜೋಹರ್​ ಜೊತೆ ಅನೇಕರು ಕಿರಿಕ್​ ಮಾಡಿಕೊಂಡ ಉದಾಹರಣೆ ಇದೆ. ಅದಕ್ಕೆ ಹೊಸ ಸೇರ್ಪಡೆ ನಿರ್ದೇಶಕ ಅಯಾನ್​ ಮುಖರ್ಜಿ. 2022ರಲ್ಲಿ ತೆರೆಕಂಡ ‘ಬ್ರಹ್ಮಾಸ್ತ್ರ’ ಸಿನಿಮಾದಿಂದ ಅಯಾನ್​ ಮುಖರ್ಜಿ (Ayan Mukerji) ಅವರು ದೊಡ್ಡ ಸಕ್ಸಸ್​ ಕಂಡರು. ಆ ಚಿತ್ರಕ್ಕೆ ಬಂಡವಾಳ ಹೂಡಿದವರಲ್ಲಿ ಕರಣ್​ ಜೋಹರ್​ ಕೂಡ ಪ್ರಮುಖರು. ಆದರೆ ಈಗ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಸೀಕ್ವೆಲ್​ (Brahmastra Sequel) ಸಿದ್ಧವಾಗುತ್ತಿದ್ದು, ಅದರಲ್ಲಿ ಕರಣ್​ ಜೋಹರ್​ ಪಾಲುದಾರಿಕೆ ಇಲ್ಲವೇ ಎಂಬ ಅನುಮಾನ ಮೂಡಿದೆ.

ಕೆಲವೇ ದಿನಗಳ ಹಿಂದೆ ಅಯಾನ್​ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಸೀಕ್ವೆಲ್​ಗಳ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದರು. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದರು. ‘ಬ್ರಹ್ಮಾಸ್ತ್ರ: ಪಾರ್ಟ್​ 2’ ಸಿನಿಮಾ 2026ರ ಡಿಸೆಂಬರ್​ ತಿಂಗಳಲ್ಲಿ ಬಿಡುಗಡೆ ಆಗಲಿದೆ. ‘ಬ್ರಹ್ಮಾಸ್ತ್ರ: ಪಾರ್ಟ್​ 3’ ಚಿತ್ರ 2027ರ ಡಿಸೆಂಬರ್​ಗೆ ತೆರೆಕಾಣಲಿದೆ. ಆದರೆ ಈ ಮಾಹಿತಿಯನ್ನು ಹಂಚಿಕೊಳ್ಳುವಾಗ ಕರಣ್​ ಜೋಹರ್​ ಹೆಸರನ್ನು ಅಯಾನ್​ ಮುಖರ್ಜಿ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ! ಅದೇ ಈಗ ಕಿರಿಕ್​ಗೆ ಕಾರಣ ಆಗಿದೆ.

ಇದನ್ನೂ ಓದಿ: ವೈಮನಸ್ಸು ಬದಿಗಿಟ್ಟು ಭೇಟಿ ಆದ ಕರಣ್ ಜೋಹರ್-ಕಾರ್ತಿಕ್ ಆರ್ಯನ್​; ಆದರೂ ತಪ್ಪಲಿಲ್ಲ ಟೀಕೆ

ಇದನ್ನೂ ಓದಿ
Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

ಮೂಲಗಳ ಪ್ರಕಾರ, ‘ಬ್ರಹ್ಮಾಸ್ತ್ರ’ ಚಿತ್ರದ ಬೌದ್ಧಿಕ ಆಸ್ತಿ ಹಕ್ಕುಗಳು ನಿರ್ದೇಶಕ ಅಯಾನ್​ ಮುಖರ್ಜಿ ಬಳಿ ಇದೆ. ಹಾಗಾಗಿ ಅವರು ಸೀಕ್ವೆಲ್​ಗಳನ್ನು ಮಾಡಲು ಕರಣ್​ ಜೋಹರ್​ ಅವರ ‘ಧರ್ಮ ಪ್ರೊಡಕ್ಷನ್ಸ್​’ ಜೊತೆ ಕೈ ಜೋಡಿಸುವ ಬದಲು ಬೇರೆ ನಿರ್ಮಾಣ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸದ್ಯಕ್ಕಂತೂ ಕರಣ್​ ಜೋಹರ್​ ಅವರು ಮೌನ ಮುರಿದಿಲ್ಲ. ಅವರಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ಕರಿಯರ್ ನಾಶ ಮಾಡಲು ಹೊರಟಿದ್ದ ಕರಣ್ ಜೋಹರ್; ‘ಅವರಿಗೆ ಅದೇ ಕೆಲಸ’ ಎಂದ ಕಂಗನಾ

ಅಯಾನ್​ ಮುಖರ್ಜಿ ಅವರು ‘ವಾರ್​ 2’ ಸಿನಿಮಾ ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಅವರು ‘ಯಶ್​ ರಾಜ್​ ಫಿಲ್ಮ್ಸ್​’ ಜೊತೆ ಕೈ ಜೋಡಿಸಲಿದ್ದಾರೆ. ಆದರೆ ‘ಬ್ರಹ್ಮಾಸ್ತ್ರ’ ಸೀಕ್ವೆಲ್​ಗಳನ್ನು ನಿರ್ದೇಶಿಸಿದ ನಂತರವೇ ಬೇರೆ ಸಿನಿಮಾಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಕರಣ್​ ಜೋಹರ್​ ಪಟ್ಟು ಹಿಡಿದರು ಎನ್ನಲಾಗಿದೆ. ಅದೇ ಕಾರಣದಿಂದ ಇಬ್ಬರ ನಡುವೆ ವೈಮನಸ್ಸು ಮೂಡಿತು ಎಂಬ ಸುದ್ದಿ ಕೂಡ ಹಬ್ಬಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us