AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಮನಸ್ಸು ಬದಿಗಿಟ್ಟು ಭೇಟಿ ಆದ ಕರಣ್ ಜೋಹರ್-ಕಾರ್ತಿಕ್ ಆರ್ಯನ್​; ಆದರೂ ತಪ್ಪಲಿಲ್ಲ ಟೀಕೆ

Karan Johar: ಕರಣ್ ಜೋಹರ್ ಅವರು 2019ರಲ್ಲಿ ‘ದೋಸ್ತಾನ 2’ ಘೋಷಣೆ ಮಾಡಿದರು. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್ ನಟಿಸಬೇಕಿತ್ತು. ಆದರೆ, ಅವರನ್ನು ಹೊರಗಿಟ್ಟರು ಕರಣ್.

ವೈಮನಸ್ಸು ಬದಿಗಿಟ್ಟು ಭೇಟಿ ಆದ ಕರಣ್ ಜೋಹರ್-ಕಾರ್ತಿಕ್ ಆರ್ಯನ್​; ಆದರೂ ತಪ್ಪಲಿಲ್ಲ ಟೀಕೆ
ಕಾರ್ತಿಕ್​-ಕರಣ್​
ರಾಜೇಶ್ ದುಗ್ಗುಮನೆ
|

Updated on:Apr 10, 2023 | 9:21 AM

Share

ಮುಖ್ಯಾಂಶಗಳು

  • ಕರಣ್ ಜೋಹರ್ ಹಾಗೂ ಕಾರ್ತಿಕ್ ಆರ್ಯನ್ ಮಧ್ಯೆ ಮೂಡಿತ್ತು ವೈಮನಸ್ಸು
  • ಮುಂಬೈನಲ್ಲಿ ಇಬ್ಬರೂ ಭೇಟಿ ಮಾಡಿದ ವಿಡಿಯೋ ವೈರಲ್
  • ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮೂಡಿದ ಅನುಮಾನ

ಬಾಲಿವುಡ್​​ನ ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಕರಣ್​ ಜೋಹರ್ (Karan Johar) ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಯಾರನ್ನಾದರೂ ತುಳಿಯಬೇಕು, ಇಂಡಸ್ಟ್ರಿಯಿಂದ ಹೊರ ಹಾಕಬೇಕು ಎಂದು ಕರಣ್​ಗೆ ಅನಿಸಿದರೆ ಅದು ಅವರಿಗೆ ಹೆಚ್ಚುಹೊತ್ತಿನ ಕೆಲಸವಲ್ಲ. ಈ ಕಾರಣಕ್ಕೆ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ. ಅವರು ನೆಪೋಟಿಸಂನ ಬೆಂಬಲಿಸುತ್ತಾರೆ ಎನ್ನುವ ಆರೋಪವೂ ಜೋರಾಗಿಯೇ ಇದೆ. ಇಷ್ಟೆಲ್ಲ ಟೀಕೆ ಬಂದ ಮಾತ್ರಕ್ಕೆ ಅವರು ಇದೆಲ್ಲವುಗಳಿಂದ ದೂರ ಉಳಿದುಕೊಂಡಿಲ್ಲ. ಈ ಮೊದಲು ಕಾರ್ತಿಕ್ ಆರ್ಯನ್ (Kartik Aaryan) ಹಾಗೂ ಕರಣ್ ಜೋಹರ್ ಮಧ್ಯೆ ಕಿತ್ತಾಟ ಆಗಿದೆ ಎನ್ನಲಾಗಿತ್ತು. ಆದರೆ, ಈಗ ಎಲ್ಲವೂ ಸರಿಯಾದಂತಿದೆ. ಇಬ್ಬರೂ ಭೇಟಿ ಮಾಡಿ ಹೊಸ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದಾರೆ. ಇದೇ ವಿಚಾರ ಇಟ್ಟುಕೊಂಡು ಕರಣ್ ಜೋಹರ್ ಅವರನ್ನು ಟೀಕೆ ಮಾಡಲಾಗಿದೆ.

ಕರಣ್ ಜೋಹರ್ ಅವರು 2019ರಲ್ಲಿ ‘ದೋಸ್ತಾನ 2’ ಘೋಷಣೆ ಮಾಡಿದರು. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್ ನಟಿಸಬೇಕಿತ್ತು. ಆದರೆ, ಅವರನ್ನು ಹೊರಗಿಟ್ಟರು ಕರಣ್. ಬಿಹೇವಿಯರ್ ಸರಿ ಇಲ್ಲ ಎನ್ನುವ ಕಾರಣಕ್ಕೆ ಕಾರ್ತಿಕ್ ಅವರನ್ನು ಕರಣ್ ಹೊರಗಿಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬಂದವು. ಕಾರ್ತಿಕ್ ಆರ್ಯನ್ ಈ ಚಿತ್ರದಿಂದ ಹೊರ ಬಂದರು. ಈ ವಿಚಾರದಲ್ಲಿ ಕರಣ್ ಜೋಹರ್ ಅವರ ಬಗ್ಗೆ ಸಾಕಷ್ಟು ಟೀಕೆ ಮಾಡಲಾಯಿತು. ಆದರೆ, ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಈಗ ಇಬ್ಬರೂ ಮತ್ತೆ ಭೇಟಿ ಆಗಿರೋದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಕಂಗನಾ ರಣಾವತ್​-ಕರಣ್​ ಜೋಹರ್​ ನಡುವಿನ ಜಗಳ ಜೋರಾಯ್ತು; ಪರೋಕ್ಷವಾಗಿ ಕುಟುಕಿದ ನಿರ್ಮಾಪಕ

ಕಾರ್ತಿಕ್ ಆರ್ಯನ್ ಅವರಿಗೆ ದೊಡ್ಡ ಮಾರುಕಟ್ಟೆ ಸೃಷ್ಟಿ ಆಗಿದೆ. ‘ಭೂಲ್​ ಭುಲಯ್ಯ 2’ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ಹಲವು ನಿರ್ಮಾಪಕರು ಕಾರ್ತಿಕ್ ಮನೆ ಎದುರು ನಿಂತಿದ್ದಾರೆ. ಈ ಕಾರಣಕ್ಕೆ ಕರಣ್ ಜೋಹರ್ ಅವರು ಕಾರ್ತಿಕ್ ಜೊತೆ ಸಿನಿಮಾ ಮಾಡೋಕೆ ಮುಂದೆ ಬಂದರಾ ಎನ್ನುವ ಪ್ರಶ್ನೆ ಮೂಡಿದೆ. ಇಬ್ಬರೂ ವೈಮನಸ್ಸು ಮರೆತು ಮತ್ತೆ ಒಂದಾಗಿರೋದು ಅನೇಕರಿಗೆ ಖುಷಿ ನೀಡಿದೆ. ಪಾಪರಾಜಿಗಳು ಕಾರ್ತಿಕ್​ ಹಾಗೂ ಕರಣ್ ಭೇಟಿ ಮಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.

View this post on Instagram

A post shared by @varindertchawla

ಇದನ್ನೂ ಓದಿ: ಅನುಷ್ಕಾ ಶರ್ಮಾ ಕರಿಯರ್ ನಾಶ ಮಾಡಲು ಹೊರಟಿದ್ದ ಕರಣ್ ಜೋಹರ್; ‘ಅವರಿಗೆ ಅದೇ ಕೆಲಸ’ ಎಂದ ಕಂಗನಾ

ಕರಣ್ ಜೋಹರ್ ಅವರ ನಡೆಯ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ. ‘ಕಾರ್ತಿಕ್ ಆರ್ಯನ್​ಗೆ ಹೆಚ್ಚು ಜನಪ್ರಿಯತೆ ಇಲ್ಲದಾಗ ಅವರನ್ನು ಸಿನಿಮಾದಿಂದ ಹೊರಗಿಟ್ಟರು. ಈಗ ಅವರು ಫೇಮಸ್ ಆದಮೇಲೆ ತಮ್ಮ ಸಿನಿಮಾದಲ್ಲಿ ನಟಿಸೋಕೆ ಚಾನ್ಸ್​’ ನೀಡುತ್ತಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ‘ಇಬ್ಬರೂ ಹಳೆಯ ಘಟನೆ ಮರೆತು ಒಂದಾಗಿದ್ದು ಖುಷಿ ಇದೆ. ದೋಸ್ತಾನ ಸೀಕ್ವೆಲ್ ತಯಾರಿಯೇ’ ಎನ್ನುವ ಪ್ರಶ್ನೆಯನ್ನೂ ಕೇಳಲಾಗಿದೆ. ಈ ಬಗ್ಗೆ ಕರಣ್ ಅಥವಾ ಕಾರ್ತಿಕ್ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:21 am, Mon, 10 April 23

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ