Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?

Rocky Aur Rani Kii Prem Kahaani Total Collection: ಕರಣ್ ಜೋಹರ್ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕೂಡ ಇದೇ ರೀತಿಯಲ್ಲಿ ಮೂಡಿ ಬಂದಿದೆ. ಆದರೆ,  ಜನರು ಸಿನಿಮಾನ  ಅಷ್ಟಾಗಿ ಇಷ್ಟಪಟ್ಟಿಲ್ಲ.

ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?
ಆಲಿಯಾ-ರಣವೀರ್
Follow us
ರಾಜೇಶ್ ದುಗ್ಗುಮನೆ
|

Updated on: Jul 31, 2023 | 10:11 AM

ಕಳೆದ ಏಳು ತಿಂಗಳಲ್ಲಿ ಬಾಲಿವುಡ್​ನಲ್ಲಿ ‘ಪಠಾಣ್’ (Pathaan Movie) ಹಾಗೂ ‘ದಿ ಕೇರಳ ಸ್ಟೋರಿ’ ಹೊರತುಪಡಿಸಿ ಬೇರೆ ಯಾವುದೇ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಅಬ್ಬರಿಸಿಲ್ಲ. ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Ki Prem Kahani) ಚಿತ್ರದ ಮೂಲಕ ದೊಡ್ಡ ಗೆಲುವು ಕಾಣಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಸಿನಿಮಾ ಹೀನಾಯವಾಗಿ ಸೋಲು ಕಂಡಿದೆ. ಇದರಿಂದ ಸಿನಿಮಾಗೆ ದೊಡ್ಡ ಹಿನ್ನಡೆ ಆಗುವ ಸೂಚನೆ ಸಿಕ್ಕಿದೆ.

ಕರಣ್ ಜೋಹರ್ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕೂಡ ಇದೇ ರೀತಿಯಲ್ಲಿ ಮೂಡಿ ಬಂದಿದೆ. ಆದರೆ,  ಜನರು ಸಿನಿಮಾನ  ಅಷ್ಟಾಗಿ ಇಷ್ಟಪಟ್ಟಿಲ್ಲ. ಸ್ಟಾರ್ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣ ಆಗಿದೆ.

ಒಟ್ಟಾರೆ ಗಳಿಕೆ ಎಷ್ಟು?

ಸ್ಟಾರ್ ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡುತ್ತವೆ ಎಂಬ ನಂಬಿಕೆ ಇದೆ. ಆದರೆ, ರಣವೀರ್-ಆಲಿಯಾ ವಿಚಾರದಲ್ಲಿ ಇದು ಸುಳ್ಳಾಗಿದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಮೊದಲ ದಿನ (ಜುಲೈ 28) 11 ಕೋಟಿ ರೂಪಾಯಿ, ಎರಡನೇ ದಿನ 16.05 ಕೋಟಿ ಹಾಗೂ ಭಾನುವಾರ (ಜುಲೈ 30) 19 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟೂ ಗಳಿಕೆ 46 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ನೀವು ಸಲಿಂಗ ಕಾಮಿ ತಾನೇ?’: ನೇರ ಪ್ರಶ್ನೆಗೆ ಉತ್ತರ ನೀಡಿದ ಕರಣ್​ ಜೋಹರ್​

100 ಕೋಟಿ ರೂಪಾಯಿ ಗಳಿಕೆಯೂ ಕಷ್ಟ?

ರಣವೀರ್ ಸಿಂಗ್​ಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರ ಬೇಡಿಕೆ ಕುಗ್ಗಿದಂತೆ ಕಾಣುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 100 ಕೋಟಿ ರೂಪಾಯಿ ಆಗೋದು ಅನುಮಾನ ಎನ್ನಲಾಗುತ್ತಿದೆ. ಹಾಗಾದಲ್ಲಿ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸೋದು ಪಕ್ಕಾ. ಇಂದಿನ (ಜುಲೈ 31) ಗಳಿಕೆ ಆಧಾರದ ಮೇಲೆ ಸಿನಿಮಾ ಭವಿಷ್ಯ ನಿರ್ಧಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್