AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?

Rocky Aur Rani Kii Prem Kahaani Total Collection: ಕರಣ್ ಜೋಹರ್ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕೂಡ ಇದೇ ರೀತಿಯಲ್ಲಿ ಮೂಡಿ ಬಂದಿದೆ. ಆದರೆ,  ಜನರು ಸಿನಿಮಾನ  ಅಷ್ಟಾಗಿ ಇಷ್ಟಪಟ್ಟಿಲ್ಲ.

ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?
ಆಲಿಯಾ-ರಣವೀರ್
ರಾಜೇಶ್ ದುಗ್ಗುಮನೆ
|

Updated on: Jul 31, 2023 | 10:11 AM

Share

ಕಳೆದ ಏಳು ತಿಂಗಳಲ್ಲಿ ಬಾಲಿವುಡ್​ನಲ್ಲಿ ‘ಪಠಾಣ್’ (Pathaan Movie) ಹಾಗೂ ‘ದಿ ಕೇರಳ ಸ್ಟೋರಿ’ ಹೊರತುಪಡಿಸಿ ಬೇರೆ ಯಾವುದೇ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಅಬ್ಬರಿಸಿಲ್ಲ. ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Ki Prem Kahani) ಚಿತ್ರದ ಮೂಲಕ ದೊಡ್ಡ ಗೆಲುವು ಕಾಣಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಸಿನಿಮಾ ಹೀನಾಯವಾಗಿ ಸೋಲು ಕಂಡಿದೆ. ಇದರಿಂದ ಸಿನಿಮಾಗೆ ದೊಡ್ಡ ಹಿನ್ನಡೆ ಆಗುವ ಸೂಚನೆ ಸಿಕ್ಕಿದೆ.

ಕರಣ್ ಜೋಹರ್ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕೂಡ ಇದೇ ರೀತಿಯಲ್ಲಿ ಮೂಡಿ ಬಂದಿದೆ. ಆದರೆ,  ಜನರು ಸಿನಿಮಾನ  ಅಷ್ಟಾಗಿ ಇಷ್ಟಪಟ್ಟಿಲ್ಲ. ಸ್ಟಾರ್ ಪಾತ್ರವರ್ಗ ಇದ್ದ ಹೊರತಾಗಿಯೂ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣ ಆಗಿದೆ.

ಒಟ್ಟಾರೆ ಗಳಿಕೆ ಎಷ್ಟು?

ಸ್ಟಾರ್ ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡುತ್ತವೆ ಎಂಬ ನಂಬಿಕೆ ಇದೆ. ಆದರೆ, ರಣವೀರ್-ಆಲಿಯಾ ವಿಚಾರದಲ್ಲಿ ಇದು ಸುಳ್ಳಾಗಿದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಮೊದಲ ದಿನ (ಜುಲೈ 28) 11 ಕೋಟಿ ರೂಪಾಯಿ, ಎರಡನೇ ದಿನ 16.05 ಕೋಟಿ ಹಾಗೂ ಭಾನುವಾರ (ಜುಲೈ 30) 19 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟೂ ಗಳಿಕೆ 46 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ‘ನೀವು ಸಲಿಂಗ ಕಾಮಿ ತಾನೇ?’: ನೇರ ಪ್ರಶ್ನೆಗೆ ಉತ್ತರ ನೀಡಿದ ಕರಣ್​ ಜೋಹರ್​

100 ಕೋಟಿ ರೂಪಾಯಿ ಗಳಿಕೆಯೂ ಕಷ್ಟ?

ರಣವೀರ್ ಸಿಂಗ್​ಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರ ಬೇಡಿಕೆ ಕುಗ್ಗಿದಂತೆ ಕಾಣುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 100 ಕೋಟಿ ರೂಪಾಯಿ ಆಗೋದು ಅನುಮಾನ ಎನ್ನಲಾಗುತ್ತಿದೆ. ಹಾಗಾದಲ್ಲಿ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸೋದು ಪಕ್ಕಾ. ಇಂದಿನ (ಜುಲೈ 31) ಗಳಿಕೆ ಆಧಾರದ ಮೇಲೆ ಸಿನಿಮಾ ಭವಿಷ್ಯ ನಿರ್ಧಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!