AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್ತರನ್ನೇ ಅನ್​ಫಾಲೋ ಮಾಡಿದ್ದಕ್ಕೆ ಕಾರಣ ತಿಳಿಸಿದ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್

ಕರಣ್ ಜೋಹರ್ ಅವರು ತಮ್ಮ ಆಪ್ತರನ್ನೇ ಅನ್​ಫಾಲೋ ಮಾಡಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಶಾರುಖ್ ಖಾನ್, ಕರೀನಾ ಕಪೂರ್ ಮುಂತಾದವರ ಜೊತೆ ಕರಣ್ ಕಿರಿಕ್ ಮಾಡಿಕೊಂಡಿರಬಹುದು ಎಂಬ ಅನುಮಾನ ಮೂಡಿತ್ತು. ಆದರೆ ಆ ರೀತಿ ಯಾವುದೇ ಕಿರಿಕ್ ಆಗಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಆಪ್ತರನ್ನೇ ಅನ್​ಫಾಲೋ ಮಾಡಿದ್ದಕ್ಕೆ ಕಾರಣ ತಿಳಿಸಿದ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್
Karan Johar
ಮದನ್​ ಕುಮಾರ್​
|

Updated on: May 29, 2026 | 2:59 PM

Share

ಬಾಲಿವುಡ್‌ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ (Karan Johar) ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದಿಢೀರನೆ ಚಿತ್ರರಂಗದ ಹಲವು ಸ್ಟಾರ್‌ ನಟ-ನಟಿಯರು ಹಾಗೂ ಆಪ್ತ ಸ್ನೇಹಿತರನ್ನು ಅನ್‌ಫಾಲೋ (Unfollow) ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದರು. ಇದೀಗ ಈ ಎಲ್ಲಾ ಚರ್ಚೆಗಳಿಗೆ ಸ್ವತಃ ಕರಣ್ ಜೋಹರ್ ಅವರೇ ತೆರೆ ಎಳೆದಿದ್ದು, ತಮ್ಮ ಈ ನಡೆಗೆ ಅಸಲಿ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ. ಗುರುವಾರ (ಮೇ 28) ಕರಣ್ ಜೋಹರ್ ಅವರು ಇನ್‌ಸ್ಟಾಗ್ರಾಮ್ ಫಾಲೋಯಿಂಗ್ ಲಿಸ್ಟ್‌ನಿಂದ ಶಾರುಖ್ ಖಾನ್ (Shah Rukh Khan), ಕರೀನಾ ಕಪೂರ್, ಮಲೈಕಾ ಅರೋರಾ, ಕಾರ್ತಿಕ್ ಆರ್ಯನ್, ಅನನ್ಯಾ ಪಾಂಡೆ ಮತ್ತು ತಮ್ಮ ದಶಕಗಳ ಆಪ್ತ ಸ್ನೇಹಿತ-ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರನ್ನು ತೆಗೆದುಹಾಕಿದ್ದರು.

ಅಷ್ಟೇ ಅಲ್ಲದೆ, ತಮ್ಮದೇ ಗರಡಿಯಲ್ಲಿ ಬೆಳೆದ ಆಲಿಯಾ ಭಟ್, ವರುಣ್ ಧವನ್ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರನ್ನೂ ಸಹ ಅವರು ಅನ್‌ಫಾಲೋ ಮಾಡಿದ್ದರು. ಆದರೆ, ಈ ಪಟ್ಟಿಯಲ್ಲಿ ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಅವರ ಹೆಸರು ಮಾತ್ರ ಇನ್ನೂ ಹಾಗೇ ಉಳಿದಿರುವುದು ನೆಟ್ಟಿಗರ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಕರಣ್ ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೇವಲ 78 ಜನರನ್ನು ಮಾತ್ರ ಫಾಲೋ ಮಾಡುತ್ತಿರುವುದು ಕಾಣಿಸುತ್ತಿದೆ.

ಬಾಲಿವುಡ್ ವಲಯದಲ್ಲಿ ಈ ಅನ್‌ಫಾಲೋ ಸಂಗತಿ ಬಗ್ಗೆ ನಾನಾ ರೀತಿಯ ವದಂತಿಗಳು ಮತ್ತು ಗಾಸಿಪ್‌ಗಳು ಹರಡಲಾರಂಭಿಸಿದವು. ಚಿತ್ರರಂಗದ ಆಪ್ತರ ನಡುವೆ ಏನಾದರೂ ಬಿರುಕು ಮೂಡಿದೆಯೇ ಎಂಬ ಚರ್ಚೆಗಳೂ ನಡೆದವು. ಈ ಎಲ್ಲಾ ಗೊಂದಲಗಳಿಗೆ ಗುರುವಾರ ರಾತ್ರಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕರಣ್ ಜೋಹರ್ ನೇರ ಉತ್ತರ ನೀಡಿದ್ದಾರೆ.

‘ಇದು ಕೇವಲ ಡಿಜಿಟಲ್ ಡಿಟಾಕ್ಸ್ ಅಷ್ಟೇ! ಸೋಶಿಯಲ್ ಮೀಡಿಯಾದಲ್ಲಿ ನನ್ನ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುವುದನ್ನು ಕಡಿಮೆ ಮಾಡಿಕೊಳ್ಳಲು ನಾನು ಎಲ್ಲರನ್ನೂ ಅನ್‌ಫಾಲೋ ಮಾಡುತ್ತಿದ್ದೇನೆ’ ಎಂದು ಕರಣ್ ಜೋಹರ್ ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ವೈಯಕ್ತಿಕ ನಿರ್ಧಾರವನ್ನು ಮಾಧ್ಯಮಗಳು ದೊಡ್ಡ ಸುದ್ದಿಯನ್ನಾಗಿ ಮಾಡುತ್ತಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬದಲಾದ ಕರಣ್ ಜೋಹರ್; ಬಾಲಿವುಡ್ ನೆಪೋ ಕಿಡ್ಸ್ ಕಳ್ಳಾಟ ಬಯಲು ಮಾಡಿದ ನಿರ್ಮಾಪಕ

‘ದಯವಿಟ್ಟು ಇದನ್ನು ರಾಷ್ಟ್ರೀಯ ಸುದ್ದಿ ಮಾಡಬೇಡಿ. ಜನರನ್ನು ಸೆಳೆಯಲು ಬೇರೆ ಯಾವುದಾದರೂ ವಿಷಯ ಹುಡುಕಿಕೊಳ್ಳಿ! ಇದು ತೀರಾ ಅಪ್ರಸ್ತುತವಾದ ವಿಚಾರ’ ಎಂದು ಕರಣ್ ಜೋಹರ್ ಅವರು ಟೀಕೆ ಮಾಡಿದ್ದಾರೆ. ಅನ್‌ಫಾಲೋ ಮಾಡಿದ್ದರ ಹಿಂದೆ ಯಾವುದೇ ವೈಯಕ್ತಿಕ ದ್ವೇಷ ಅಥವಾ ಮುನಿಸು ಇಲ್ಲ ಎಂಬುದು ಈ ಸ್ಪಷ್ಟನೆಯಿಂದ ತಿಳಿದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ