ಅನುಷ್ಕಾ ಶರ್ಮಾ ಕರಿಯರ್ ನಾಶ ಮಾಡಲು ಹೊರಟಿದ್ದ ಕರಣ್ ಜೋಹರ್; ‘ಅವರಿಗೆ ಅದೇ ಕೆಲಸ’ ಎಂದ ಕಂಗನಾ

2016ರಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಅನುಷ್ಕಾ ಹಾಗೂ ಕರಣ್ ಒಂದೇ ವೇದಿಕೆ ಮೇಲಿದ್ದರು. ಈ ವೇಳೆ ಕರಣ್ ಈ ವಿಚಾರ ತೆರೆದಿಟ್ಟಿದ್ದರು.

ಅನುಷ್ಕಾ ಶರ್ಮಾ ಕರಿಯರ್ ನಾಶ ಮಾಡಲು ಹೊರಟಿದ್ದ ಕರಣ್ ಜೋಹರ್; ‘ಅವರಿಗೆ ಅದೇ ಕೆಲಸ’ ಎಂದ ಕಂಗನಾ
ಕರಣ್​-ಕಂಗನಾ

Updated on: Apr 07, 2023 | 1:46 PM

ಕರಣ್ ಜೋಹರ್ (Karan Johar) ಬಗ್ಗೆ ಯಾರು ಬೇಕಾದರೂ ನೆಗೆಟಿವ್ ಆಗಿ ಮಾತನಾಡಲಿ, ಅದಕ್ಕೆ ಕಂಗನಾ ಧ್ವನಿಗೂಡಿಸುತ್ತಾರೆ. ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ. ಕರಣ್ ಜೋಹರ್​​ನ ಕಂಡರೆ ಅವರಿಗೆ ಅಷ್ಟು ದ್ವೇಷ. ಹಾಗಂತ ಈ ಸಿಟ್ಟನ್ನು ಅವರು ಮುಚ್ಚಿಟ್ಟುಕೊಂಡಿಲ್ಲ. ಸಮಯ ಸಿಕ್ಕಾಗಲೆಲ್ಲ ಕರಣ್ ವಿರುದ್ಧ ಕಿಡಿಕಾರುತ್ತಲೇ ಇರುತ್ತಾರೆ. ಇತ್ತೀಚೆಗೆ ಕರಣ್ ಜೋಹರ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ‘ಅನುಷ್ಕಾ ಶರ್ಮಾ ಅವರ ಕರಿಯರ್​ನ ನಾಶ ಮಾಡಬೇಕು ಎಂದುಕೊಂಡಿದ್ದೆ’ ಎಂಬುದಾಗಿ ಕರಣ್​ ಒಪ್ಪಿಕೊಂಡಿದ್ದರು. ಈ ವಿಡಿಯೋಗೆ ಕಂಗನಾ ಉತ್ತರ ನೀಡಿದ್ದಾರೆ.

2008ರಲ್ಲಿ ಬಂದ ಶಾರುಖ್ ಖಾನ್ ನಟನೆಯ ‘ರಬ್​ ನೇ ಬನಾದಿ ಜೋಡಿ’ ಸಿನಿಮಾದಲ್ಲಿ ಅನುಷ್ಕಾ ನಟಿಸಿದ್ದರು. ಇದು ಅವರ ಮೊದಲ ಸಿನಿಮಾ. ಯಶ್ ಚೋಪ್ರಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಸಿನಿಮಾ ಸೆಟ್ಟೇರುವುದಕ್ಕೂ ಮುನ್ನ ಅನುಷ್ಕಾ ಅವರ ಫೋಟೋನ ಚಿತ್ರದ ನಿರ್ದೇಶಕ ಆದಿತ್ಯ ಚೋಪ್ರಾ ಅವರು ಕರಣ್​ ಜೋಹರ್​ಗೆ ತೋರಿಸಿದ್ದರಂತೆ. ಕರಣ್​ಗೆ ಅನುಷ್ಕಾ ಇಷ್ಟವಾಗಲೇ ಇಲ್ಲ. ಈ ಕಾರಣಕ್ಕೆ ಅವರು ಒಂದು ನಿರ್ಧಾರಕ್ಕೆ ಬಂದಿದ್ದರು.

2016ರಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಅನುಷ್ಕಾ ಹಾಗೂ ಕರಣ್ ಒಂದೇ ವೇದಿಕೆ ಮೇಲಿದ್ದರು. ಈ ವೇಳೆ ಅವರು ಈ ವಿಚಾರ ತೆರೆದಿಟ್ಟಿದ್ದರು. ‘ಆದಿತ್ಯ ಚೋಪ್ರಾ ಅವರು ಮೊದಲ ಬಾರಿಗೆ ಫೋಟೋ ತೋರಿಸಿದಾಗ ನಾನು ಅನುಷ್ಕಾ ಅವರ ವೃತ್ತಿಜೀವನವನ್ನು ನಾಶಮಾಡಬೇಕು ಎಂದುಕೊಂಡಿದ್ದೆ. ನನ್ನ ತಲೆಯಲ್ಲಿ ಬೇರೆ ಹೀರೋಯಿನ್ ಹೆಸರು ಇತ್ತು’ ಎಂದು ಕರಣ್ ಜೋಹರ್ ಹೇಳಿದ್ದರು.

ಇದನ್ನೂ ಓದಿ: ತಬ್ಬಿಕೊಂಡು ರಾಜಿಯಾದ ಪ್ರಿಯಾಂಕಾ-ಕರಣ್​ ಜೋಹರ್​; ಮಧ್ಯ ಮಾತಾಡಿ ನಿಷ್ಠುರವಾಗಿದ್ದು ಕಂಗನಾ

ಈ ವಿಡಿಯೋನ ಈಗ ಮತ್ತೆ ಶೇರ್ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಉತ್ತರಿಸಿರುವ ಕಂಗನಾ ಅವರು, ‘ಈ ಚಾಚಾ ಚೌಧರಿಗೆ ಇದೊಂದೇ ಕೆಲಸ’ ಎಂದಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಕಂಗನಾ ಈ ಪೋಸ್ಟ್ ವಿಚಾರ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Priyanka Chopra: ಮುಂಬೈನಲ್ಲಿ ಮಗಳ ಜೊತೆ ಗಣಪತಿ ದೇವರ ದರ್ಶನ ಪಡೆದ ನಟಿ ಪ್ರಿಯಾಂಕಾ ಚೋಪ್ರಾ; ಇಲ್ಲಿದೆ ಫೋಟೋ

ಇತ್ತೀಚೆಗೆ ಮಾತನಾಡಿದ್ದ ಪ್ರಿಯಾಂಕಾ ಚೋಪ್ರಾ ಅವರು, ಬಾಲಿವುಡ್​ನಿಂದ ನನ್ನ ಹೊರಗಿಡುವ ಪ್ರಯತ್ನ ಆಯಿತು ಎಂದು ಹೇಳಿದ್ದರು. ಈ ರೀತಿ ಮಾಡಿದ್ದು ಕರಣ್ ಜೋಹರ್ ಎನ್ನುವ ಆರೋಪವನ್ನು ಕಂಗನಾ ಮಾಡಿದ್ದರು. ಪ್ರಿಯಾಂಕಾ ಇತ್ತೀಚೆಗೆ ಮುಂಬೈಗೆ ಬಂದಿದ್ದಾರೆ. ಈ ವೇಳೆ ಪ್ರಿಯಾಂಕಾ ಅವರನ್ನು ಕರಣ್ ಹಗ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us