‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್

ಕರಣ್ ಅವರು ಈ ಬಾರಿ 50ನೇ ವರ್ಷಕ್ಕೆ ಕಾಲಿಟ್ಟರು. ಈ ಪಾರ್ಟಿಯಲ್ಲಿ ಭಾಗಿಯಾದ ಅನೇಕ ಸೆಲೆಬ್ರಿಟಿಗಳಿಗೆ ಕೊವಿಡ್ ಆಗಿತ್ತು ಎಂದು ವರದಿಗಳು ಹೇಳಿವೆ. ಇದನ್ನು ಕೆಲವರು ‘ಕರಣ್ ಜೋಹರ್ ಪಾರ್ಟಿ ಮಹಿಮೆ’ ಎಂದು ಲೇವಡಿ ಮಾಡಲಾಯಿತು.

‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
ಕರಣ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 15, 2022 | 9:54 PM

ಕರಣ್ ಜೋಹರ್ ಅವರ (Karan Johar) ಬರ್ತ್​ಡೇ ಪಾರ್ಟಿಗೆ ಆಗಮಿಸಿದ 55ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಕೊವಿಡ್ ಅಂಟಿದೆ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಯಶ್ ರಾಜ್​ ಸ್ಟುಡಿಯೋದಲ್ಲಿ ನಡೆದ ಈ ಅದ್ದೂರಿ ಪಾರ್ಟಿ ಬಗ್ಗೆ ಅನೇಕ ವರದಿಗಳು ಬಿತ್ತರಗೊಂಡವು. ಅದ್ದೂರಿ ಪಾರ್ಟಿ ಕೊವಿಡ್ ಹಾಟ್​ಸ್ಪಾಟ್ ಎನ್ನುವ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ (Social Media) ಹರಿದಾಡಿದವು. ಎಲ್ಲಾ ಸೆಲೆಬ್ರಿಟಿಗಳಿಗೆ ಪಾರ್ಟಿ ಕೊಟ್ಟಿದ್ದು ಅಲ್ಲದೆ, ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಿಂದ ಬಂದ ಟೀಕೆಯನ್ನು ಕರಣ್​ ಜೋಹರ್ ಸ್ವೀಕರಿಸಬೇಕಾಯಿತು. ಈ ಬಗ್ಗೆ ಕರಣ್ ಜೋಹರ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ನನ್ನನ್ನೇಕೆ ದೂಷಿಸುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಕರಣ್ ಅವರು ಈ ಬಾರಿ 50ನೇ ವರ್ಷಕ್ಕೆ ಕಾಲಿಟ್ಟರು. ಹೀಗಾಗಿ ಬರ್ತ್​ಡೇ ಪಾರ್ಟಿ ಜೋರಾಗಿಯೇ ಇತ್ತು. ರಶ್ಮಿಕಾ ಮಂದಣ್ಣ, ಬಾಲಿವುಡ್​ ನಟ ಶಾರುಖ್ ಖಾನ್​, ಟಾಲಿವುಡ್​ ಹೀರೋ ವಿಜಯ್ ದೇವರಕೊಂಡ ಮೊದಲಾದವರು ಭಾಗಿ ಆಗಿದ್ದರು. ಪಾರ್ಟಿ ಮುಗಿದ ಕೆಲವೇ ದಿನಗಳಲ್ಲಿ ಕತ್ರಿನಾ ಹಾಗೂ ಶಾರುಖ್​ಗೆ ಕೊವಿಡ್ ಪಾಸಿಟಿವ್ ಆಯಿತು. ಇವರಲ್ಲದೆ ಇನ್ನೂ ಅನೇಕ ಸೆಲೆಬ್ರಿಟಿಗಳಿಗೆ ಕೊವಿಡ್ ಆಗಿತ್ತು ಎಂದು ವರದಿಗಳು ಹೇಳಿವೆ. ಇದನ್ನು ಕೆಲವರು ‘ಕರಣ್ ಜೋಹರ್ ಪಾರ್ಟಿ ಮಹಿಮೆ’ ಎಂದು ಲೇವಡಿ ಮಾಡಿದರು. ಈ ವಿಚಾರ ಕರಣ್​ಗೆ ಬೇಸರ ತರಿಸಿದೆ.

‘ಒಂದು ವಾರದಲ್ಲಿ ಸಾಕಷ್ಟು ವಿಚಾರಗಳು ನಡೆಯುತ್ತಿರುತ್ತವೆ. ಯಾರಿಗೆ ಎಲ್ಲಿ ಕೊವಿಡ್ ಅಂಟಿದೆ ಅಂತ ಹೇಗೆ ಹೇಳುವುದು?ಪಾರ್ಟಿ ಮಾತ್ರ ಅಲ್ಲ, ಮದುವೆಗಳಿದ್ದವು, ಅನೇಕ ಕಾರ್ಯಕ್ರಮಗಳಿದ್ದವು, ಶೂಟಿಂಗ್ ಇತ್ತು. ನನ್ನನ್ನು ಮಾತ್ರ ಏಕೆ ದೂಷಿಸಲಾಗುತ್ತಿದೆ? ಎಲ್ಲವೂ ನನಗೆ ಏಕೆ ಬರುತ್ತದೆ? ಕೊವಿಡ್​​ ಹರಡಿದ್ದಕ್ಕೂ ನನಗೆ ಯಾವುದೇ ಸಂಬಂಧವಿಲ್ಲ. ನಾನು ಇದಕ್ಕೆ ಪೂರ್ಣವಿರಾಮ ಇಡಲು ಬಯಸುತ್ತೇನೆ. ಅದು ಆಗಿದ್ದು ನನ್ನಿಂದ ಅಲ್ಲ. ಈ ಕೊವಿಡ್​ ಆರಂಭಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದಿದ್ದಾರೆ ಕರಣ್​.

ಇದನ್ನೂ ಓದಿ
Image
ಕರಣ್​ ಜೋಹರ್​ ಬರ್ತ್​ಡೇ ಪಾರ್ಟಿಗೆ ಬಂದ 55 ಮಂದಿಗೆ ಕೊರೊನಾ ಪಾಸಿಟಿವ್​? ಶಾಕಿಂಗ್​ ಸುದ್ದಿ ವೈರಲ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
ಕರಣ್ ಜೋಹರ್​ ಬರ್ತ್​ಡೇ ಪಾರ್ಟಿಯಲ್ಲಿ ಟೆಂಪ್ರೇಚರ್ ಹೆಚ್ಚಿಸಿದ ರಶ್ಮಿಕಾ
Image
Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್​​ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?

ಇದನ್ನೂ ಓದಿ: ಕರಣ್ ಜೋಹರ್ ಪಾರ್ಟಿ ಎಫೆಕ್ಟ್​; ಶಾರುಖ್​, ಕತ್ರಿನಾಗೆ ಕೊರೊನಾ ಪಾಸಿಟಿವ್

‘ಯಶ್ ರಾಜ್ ಫಿಲ್ಮ್ಸ್​ ಸ್ಟುಡಿಯೋದಲ್ಲಿ ಪಾರ್ಟಿ ಆಯೋಜನೆ ಮಾಡುವುದು ಆದಿತ್ಯ ಚೋಪ್ರಾ ಅವರ ಐಡಿಯಾ ಆಗಿತ್ತು. ನನ್ನ ತಂಡ ಅಲ್ಲಿ ಪಾರ್ಟಿ ಆಯೋಜನೆ ಮಾಡಿತು. ಕೊವಿಡ್​ ಅಲ್ಲಿಂದ ಹರಡಿದೆಯೋ ಅಥವಾ ಹರಡಿಲ್ಲವೋ ಎನ್ನುವ ಬಗ್ಗೆ ನಾನು ಮಾತನಾಡುತ್ತಿಲ್ಲ. ಆ ಬಗ್ಗೆ ನನಗೆ ಗೊತ್ತಿಲ್ಲ ಎಂದಷ್ಟೇ ಹೇಳುತ್ತಿದ್ದೇನೆ’ ಎಂಬುದು ಕರಣ್ ಜೋಹರ್ ಮಾತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:53 pm, Wed, 15 June 22

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?