Karan Johar: ಅಬ್ಬಬ್ಬಾ.. ಶರವೇಗದಲ್ಲಿ ಸಿನಿಮಾ ಮಾಡ್ತಿದ್ದಾರೆ ಕರಣ್ ಜೋಹರ್; 12 ತಿಂಗಳಲ್ಲಿ ರಿಲೀಸ್ ಆಗಲಿದೆ 7 ಸಿನಿಮಾ

ಕರಣ್ ಜೋಹರ್ ಅವರು ನಿರ್ಮಾಣದ ಮೇಲೂ ಸಾಕಷ್ಟು ಗಮನ ಹರಿಸುತ್ತಿದ್ದಾರೆ. ಏಕಕಾಲಕ್ಕೆ ಹಲವು ಸಿನಿಮಾಗಳ ಪ್ರೊಡಕ್ಷನ್​ನಲ್ಲಿ ಅವರು ತೊಡಗಿಕೊಂಡಿದ್ದಾರೆ.

Karan Johar: ಅಬ್ಬಬ್ಬಾ.. ಶರವೇಗದಲ್ಲಿ ಸಿನಿಮಾ ಮಾಡ್ತಿದ್ದಾರೆ ಕರಣ್ ಜೋಹರ್; 12 ತಿಂಗಳಲ್ಲಿ ರಿಲೀಸ್ ಆಗಲಿದೆ 7 ಸಿನಿಮಾ
ಕರಣ್ ಜೋಹರ್
Follow us
|

Updated on: Jun 08, 2023 | 6:30 AM

ಕರಣ್ ಜೋಹರ್ (Karan Johar) ಅವರು ನಿರ್ಮಾಣದಲ್ಲಿ ಸಖತ್ ಬ್ಯುಸಿ ಇದ್ದಾರೆ. ಅವರ ಒಡೆತನದ ಧರ್ಮ ಪ್ರೊಡಕ್ಷನ್ ಮೂಲಕ ಹಲವು ಸಿನಿಮಾಗಳು ಮೂಡಿ ಬಂದಿವೆ. ಈಗ ಅವರು ಹೈಪರ್ ಆ್ಯಕ್ಟೀವ್ ಆಗಿದ್ದಾರೆ. ಮುಂದಿನ ಒಂದು ವರ್ಷಗಳಲ್ಲಿ ಅವರ ನಿರ್ಮಾಣದ 7 ಸಿನಿಮಾಗಳು ರಿಲೀಸ್ ಆಗಲಿವೆ. ಈ ವಿಚಾರ ಕೇಳಿ ಅನೇಕರಿಗೆ ಖುಷಿ ಆಗಿದೆ. ಬಾಲಿವುಡ್​ ಸಿನಿಮಾಗಳು (Bollywood Movies) ನಿರಂತರವಾಗಿ ಸೋಲುತ್ತಿರುವ ಈ ಸಂದರ್ಭದಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಹಿಂದಿ ಚಿತ್ರರಂಗಕ್ಕೆ ಬೂಸ್ಟ್ ಸಿಕ್ಕಂತೆ ಆಗುತ್ತದೆ.

ಕರಣ್ ಜೋಹರ್ ಅವರು ಸದ್ಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಇನ್ನು ಕೆಲವೇ ತಿಂಗಳಲ್ಲಿ ರಿಲೀಸ್ ಆಗಲಿದೆ. ಇದರ ಜೊತೆಗೆ ಅವರು ನಿರ್ಮಾಣದ ಮೇಲೂ ಸಾಕಷ್ಟು ಗಮನ ಹರಿಸುತ್ತಿದ್ದಾರೆ. ಏಕಕಾಲಕ್ಕೆ ಹಲವು ಸಿನಿಮಾಗಳ ಪ್ರೊಡಕ್ಷನ್​ನಲ್ಲಿ ಅವರು ತೊಡಗಿಕೊಂಡಿದ್ದಾರೆ.

ವಿಕ್ಕಿ ಕೌಶಲ್ ಹಾಗೂ ತೃಪ್ತಿ ದಿಮ್ರಿ ನಟನೆಯ ‘ಮೆರೆ ಮೆಹಬೂಬ್ ಮೆರೆ ಸನಮ್​’ ಚಿತ್ರವನ್ನು ಕರಣ್ ಜೋಹರ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಸಿದ್ದಾರ್ಥ್ ಮಲ್ಹೋತ್ರಾ ಅವರು ‘ಶೇರ್ಷಾ’ ಸಿನಿಮಾದಲ್ಲಿ ಸೈನಿಕನಾಗಿ ಗಮನ ಸೆಳೆದಿದ್ದರು. ಈಗ ಅವರು ಮತ್ತೊಮ್ಮೆ ಇದೇ ರೀತಿಯ ಸಿನಿಮಾ ಒಪ್ಪಿಕೊಂಡಿದ್ದು, ‘ಯೋಧ’ ಎಂದು ಹೆಸರು ಇಡಲಾಗಿದೆ. ಈ ಚಿತ್ರದಲ್ಲಿ ಸಿದ್ದಾರ್ಥ್ ಜೊತೆ ದಿಶಾ ಪಟಾಣಿ, ರಾಶಿ ಖನ್ನಾ ಕೂಡ ನಟಿಸಿದ್ದಾರೆ. ಇದು ‘ಧರ್ಮ ಪ್ರೊಡಕ್ಷನ್’ ಮೂಲಕ ನಿರ್ಮಾಣ ಆಗುತ್ತಿದೆ.

ಅಕ್ಷಯ್ ಕುಮಾರ್ ನಟನೆಯ ಚಿತ್ರವೊಂದಕ್ಕೆ ಕರಣ್ ಹಣ ಹಾಕುತ್ತಿದ್ದಾರೆ. ಸಾರಾ ಅಲಿ ಖಾನ್ ಅವರ ‘ಯೇ ವತನ್ ಮೆರೇ ವತನ್’ ಚಿತ್ರಕ್ಕೂ ಕರಣ್ ಬಂಡವಾಳ ಹಾಕಿದ್ದಾರೆ. ಕಾಜೋಲ್​, ಪೃಥ್ವಿರಾಜ್​ ಹಾಗೂ ಇಬ್ರಾಹಿಂ ಖಾನ್ ಅವರ ‘ಸರ್ಜಮೀನ್​’, ಜಾನ್ವಿ ಕಪೂರ್, ರಾಜ್​ಕುಮಾರ್ ರಾವ್ ನಟನೆಯ ‘ಮಿಸ್ಟರ್​ ಔರ್ ಮಿಸಸ್ ಮಾಹಿ’ ಚಿತ್ರಕ್ಕೆ ಕರಣ್ ನಿರ್ಮಾಣ ಇದೆ.

ಇದನ್ನೂ ಓದಿ: ನಿಮ್ಮ ಸಹೋದರನೊಂದಿಗೆ ಮಲಗುತ್ತೀರಾ’ ಎಂದು ಆ್ಯಂಕರ್​ಗೆ ಕೇಳಿದ್ದ ಕರಣ್ ಜೋಹರ್

ಈ ಏಳು ಸಿನಿಮಾಗಳು ಮುಂದಿನ 12 ವರ್ಷಗಳಲ್ಲಿ ರಿಲೀಸ್ ಆಗಲಿವೆ. ಕೆಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್ ಆದರೆ ಕೆಲವು ಥಿಯೇಟರ್​​ನಲ್ಲಿ ರಿಲೀಸ್ ಆಗಲಿವೆ.  ಅವರ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಜುಲೈ 27ರಂದು ಬಿಡುಗಡೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ