Karan Johar: ‘ಪಠಾಣ್​’ ಗೆದ್ದಿದ್ದಕ್ಕೆ ಬಾಲಿವುಡ್​ ಮಂದಿಗೆ ಬಂತು ಧೈರ್ಯ; ದೊಡ್ಡ ಓಪನಿಂಗ್​ಗಾಗಿ​ ನಡೆದಿದೆ ಪ್ಲ್ಯಾನ್​

Rocky Aur Rani Ki Prem Kahani: ಪ್ರೇಕ್ಷಕರು ಹಿಂದಿ ಸಿನಿಮಾಗಳನ್ನು ನೋಡಲು ಚಿತ್ರಮಂದಿರಕ್ಕೆ ಬರುತ್ತಾರೋ ಇಲ್ಲವೋ ಎಂಬ ಅನುಮಾನ ನಿರ್ಮಾಪಕರಿಗೆ ಇತ್ತು. ಆದರೆ ‘ಪಠಾಣ್​’ ಚಿತ್ರದಿಂದ ಆ ಅನುಮಾನ ಬಗೆಹರಿಯಿತು.

Karan Johar: ‘ಪಠಾಣ್​’ ಗೆದ್ದಿದ್ದಕ್ಕೆ ಬಾಲಿವುಡ್​ ಮಂದಿಗೆ ಬಂತು ಧೈರ್ಯ; ದೊಡ್ಡ ಓಪನಿಂಗ್​ಗಾಗಿ​ ನಡೆದಿದೆ ಪ್ಲ್ಯಾನ್​
ಶಾರುಖ್ ಖಾನ್, ಕರಣ್ ಜೋಹರ್
Follow us
|

Updated on: Feb 10, 2023 | 7:15 AM

2022ರಲ್ಲಿ ಬಾಲಿವುಡ್​ (Bollywood) ಬಾಕ್ಸ್​ ಆಫೀಸ್​ ಸೊರಗಿತ್ತು. ಘಟಾನುಘಟಿ ಹೀರೋಗಳ ಸಿನಿಮಾಗಳು ಕೂಡ ನೆಲಕಚ್ಚಿದ್ದವು. ಅದರಿಂದ ಹಿಂದಿ ಚಿತ್ರರಂಗದ ಮಂದಿಗೆ ನಿಜಕ್ಕೂ ನಿರಾಸೆ ಆಗಿತ್ತು. ಆದರೆ ಈಗ ಕಾಲ ಬದಲಾಗಿದೆ. 2023ರ ಆರಂಭದಲ್ಲಿಯೇ ‘ಪಠಾಣ್​’ ಸಿನಿಮಾ (Pathaan Movie) ಅಬ್ಬರಿಸಿದೆ. ಹಾಗಾಗಿ ಬಿ-ಟೌನ್​ನಲ್ಲಿ ಹೊಸ ಕಳೆ ಬಂದಿದೆ. ಮುಂಬರುವ ಸಿನಿಮಾಗಳು ಕೂಡ ಇದೇ ರೀತಿ ಉತ್ತಮ ಕಲೆಕ್ಷನ್​ ಮಾಡಬಹುದು ಎಂಬ ನಿರೀಕ್ಷೆ ಬಲವಾಗಿದೆ. ನಿರ್ಮಾಪಕ ಕರಣ್​ ಜೋಹರ್​ (Karan Johar) ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ತುಂಬ ದೊಡ್ಡದಾಗಿ ರಿಲೀಸ್​ ಮಾಡಲು ಅವರು ಸಿದ್ಧರಾಗುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಕೇಳಿಬಂದಿದೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿಯಾಗಿ ನಟಿಸುತ್ತಿದ್ದಾರೆ. ರಣವೀರ್​ ಸಿಂಗ್​ ಅಭಿನಯಿಸಿದ್ದ ‘ಜಯೇಶ್​ ಭಾಯ್​ ಜೋರ್ದಾರ್​’ ಹಾಗೂ ‘ಸರ್ಕಸ್​’ ಸಿನಿಮಾಗಳು ಕಳೆದ ವರ್ಷ ಹೀನಾಯವಾಗಿ ಸೋತಿವೆ. 2023ರಲ್ಲಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಅದನ್ನು ದೊರಕಿಸಿಕೊಡಲು ಕರಣ್​ ಜೋಹರ್​ ಸಕಲ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾವನ್ನು ಬರೋಬ್ಬರಿ 9 ಸಾವಿರ ಪರದೆಗಳಲ್ಲಿ ಬಿಡುಗಡೆ ಮಾಡಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಟಿಕೆಟ್​ ಬೆಲೆ ಇಳಿಕೆ: ಶಾರುಖ್​ ಖಾನ್​ ಅಭಿಮಾನಿಗಳಿಗೆ ಬಂಪರ್​ ಅವಕಾಶ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಜುಲೈ 28ರಂದು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಜಯಾ ಬಚ್ಚನ್​, ಶಬಾನಾ ಅಜ್ಮಿ, ಧರ್ಮೇಂದ್ರ ಕೂಡ ನಟಿಸಿದ್ದಾರೆ. ಈ ಸಿನಿಮಾ ಮೂಡಿಬರುತ್ತಿರುವ ಬಗ್ಗೆ ಕರಣ್​ ಜೋಹರ್​ ಅವರಿಗೆ ಸಖತ್​ ಕಾನ್ಫಿಡೆನ್ಸ್​ ಇದೆ. ಹಾಗಾಗಿ ಅವರು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡಲಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: Pathaan Beats KGF 2: ಹಿಂದಿಯಲ್ಲಿ ‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿದ ‘ಪಠಾಣ್​’; ಇನ್ನೂ ತಗ್ಗಿಲ್ಲ ಶಾರುಖ್​ ಸಿನಿಮಾ ಹವಾ

ಹಿಂದಿ ಸಿನಿಮಾಗಳ ಬಗ್ಗೆ ಕಳೆದ ವರ್ಷ ಜನರಲ್ಲಿ ಒಂದು ಬಗೆಯ ತಿರಸ್ಕಾರ ಭಾವನೆ ಮೂಡಿತ್ತು. ಕೆಲವೇ ಸಿನಿಮಾಗಳನ್ನು ಹೊರತುಪಡಿಸಿ ಇನ್ನಾವುದೇ ಚಿತ್ರಗಳನ್ನೂ ಜನರು ಗೆಲ್ಲಿಸಲಿಲ್ಲ. ‘ಬಾಯ್ಕಾಟ್​ ಬಾಲಿವುಡ್​’ ಟ್ರೆಂಡ್​ ವರ್ಷ ಪೂರ್ತಿ ಜಾರಿಯಲ್ಲಿತ್ತು. ಅದು ಹಾಗೆಯೇ ಮುಂದುವರಿದಿದ್ದರೆ ಕಷ್ಟವಾಗುತ್ತಿತ್ತು. ಆದರೆ ‘ಪಠಾಣ್​’ ಸಿನಿಮಾದಿಂದ ಲವಲವಿಕೆಯ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ: Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ

ಪ್ರೇಕ್ಷಕರು ಹಿಂದಿ ಸಿನಿಮಾಗಳನ್ನು ನೋಡಲು ಚಿತ್ರಮಂದಿರಕ್ಕೆ ಬರುತ್ತಾರೋ ಇಲ್ಲವೋ ಎಂಬ ಅನುಮಾನ ನಿರ್ಮಾಪಕರಿಗೆ ಇತ್ತು. ಆದರೆ ‘ಪಠಾಣ್​’ ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಯ ಬಳಿಕ ಆ ಅನುಮಾನ ದೂರವಾಗಿದೆ. ಹಾಗಾಗಿ ಬೇರೆ ನಿರ್ಮಾಪಕರು ಕೂಡ ತಮ್ಮ ಸಿನಿಮಾಗಳನ್ನು ದೊಡ್ಡದಾಗಿ ಬಿಡುಗಡೆ ಮಾಡಲು ಉತ್ಸಾಹ ತೋರುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್