AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ‘ಪಠಾಣ್​’ ಗೆದ್ದಿದ್ದಕ್ಕೆ ಬಾಲಿವುಡ್​ ಮಂದಿಗೆ ಬಂತು ಧೈರ್ಯ; ದೊಡ್ಡ ಓಪನಿಂಗ್​ಗಾಗಿ​ ನಡೆದಿದೆ ಪ್ಲ್ಯಾನ್​

Rocky Aur Rani Ki Prem Kahani: ಪ್ರೇಕ್ಷಕರು ಹಿಂದಿ ಸಿನಿಮಾಗಳನ್ನು ನೋಡಲು ಚಿತ್ರಮಂದಿರಕ್ಕೆ ಬರುತ್ತಾರೋ ಇಲ್ಲವೋ ಎಂಬ ಅನುಮಾನ ನಿರ್ಮಾಪಕರಿಗೆ ಇತ್ತು. ಆದರೆ ‘ಪಠಾಣ್​’ ಚಿತ್ರದಿಂದ ಆ ಅನುಮಾನ ಬಗೆಹರಿಯಿತು.

Karan Johar: ‘ಪಠಾಣ್​’ ಗೆದ್ದಿದ್ದಕ್ಕೆ ಬಾಲಿವುಡ್​ ಮಂದಿಗೆ ಬಂತು ಧೈರ್ಯ; ದೊಡ್ಡ ಓಪನಿಂಗ್​ಗಾಗಿ​ ನಡೆದಿದೆ ಪ್ಲ್ಯಾನ್​
ಶಾರುಖ್ ಖಾನ್, ಕರಣ್ ಜೋಹರ್
ಮದನ್​ ಕುಮಾರ್​
|

Updated on: Feb 10, 2023 | 7:15 AM

Share

2022ರಲ್ಲಿ ಬಾಲಿವುಡ್​ (Bollywood) ಬಾಕ್ಸ್​ ಆಫೀಸ್​ ಸೊರಗಿತ್ತು. ಘಟಾನುಘಟಿ ಹೀರೋಗಳ ಸಿನಿಮಾಗಳು ಕೂಡ ನೆಲಕಚ್ಚಿದ್ದವು. ಅದರಿಂದ ಹಿಂದಿ ಚಿತ್ರರಂಗದ ಮಂದಿಗೆ ನಿಜಕ್ಕೂ ನಿರಾಸೆ ಆಗಿತ್ತು. ಆದರೆ ಈಗ ಕಾಲ ಬದಲಾಗಿದೆ. 2023ರ ಆರಂಭದಲ್ಲಿಯೇ ‘ಪಠಾಣ್​’ ಸಿನಿಮಾ (Pathaan Movie) ಅಬ್ಬರಿಸಿದೆ. ಹಾಗಾಗಿ ಬಿ-ಟೌನ್​ನಲ್ಲಿ ಹೊಸ ಕಳೆ ಬಂದಿದೆ. ಮುಂಬರುವ ಸಿನಿಮಾಗಳು ಕೂಡ ಇದೇ ರೀತಿ ಉತ್ತಮ ಕಲೆಕ್ಷನ್​ ಮಾಡಬಹುದು ಎಂಬ ನಿರೀಕ್ಷೆ ಬಲವಾಗಿದೆ. ನಿರ್ಮಾಪಕ ಕರಣ್​ ಜೋಹರ್​ (Karan Johar) ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ತುಂಬ ದೊಡ್ಡದಾಗಿ ರಿಲೀಸ್​ ಮಾಡಲು ಅವರು ಸಿದ್ಧರಾಗುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಕೇಳಿಬಂದಿದೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿಯಾಗಿ ನಟಿಸುತ್ತಿದ್ದಾರೆ. ರಣವೀರ್​ ಸಿಂಗ್​ ಅಭಿನಯಿಸಿದ್ದ ‘ಜಯೇಶ್​ ಭಾಯ್​ ಜೋರ್ದಾರ್​’ ಹಾಗೂ ‘ಸರ್ಕಸ್​’ ಸಿನಿಮಾಗಳು ಕಳೆದ ವರ್ಷ ಹೀನಾಯವಾಗಿ ಸೋತಿವೆ. 2023ರಲ್ಲಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಅದನ್ನು ದೊರಕಿಸಿಕೊಡಲು ಕರಣ್​ ಜೋಹರ್​ ಸಕಲ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾವನ್ನು ಬರೋಬ್ಬರಿ 9 ಸಾವಿರ ಪರದೆಗಳಲ್ಲಿ ಬಿಡುಗಡೆ ಮಾಡಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಟಿಕೆಟ್​ ಬೆಲೆ ಇಳಿಕೆ: ಶಾರುಖ್​ ಖಾನ್​ ಅಭಿಮಾನಿಗಳಿಗೆ ಬಂಪರ್​ ಅವಕಾಶ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಜುಲೈ 28ರಂದು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಜಯಾ ಬಚ್ಚನ್​, ಶಬಾನಾ ಅಜ್ಮಿ, ಧರ್ಮೇಂದ್ರ ಕೂಡ ನಟಿಸಿದ್ದಾರೆ. ಈ ಸಿನಿಮಾ ಮೂಡಿಬರುತ್ತಿರುವ ಬಗ್ಗೆ ಕರಣ್​ ಜೋಹರ್​ ಅವರಿಗೆ ಸಖತ್​ ಕಾನ್ಫಿಡೆನ್ಸ್​ ಇದೆ. ಹಾಗಾಗಿ ಅವರು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡಲಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: Pathaan Beats KGF 2: ಹಿಂದಿಯಲ್ಲಿ ‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿದ ‘ಪಠಾಣ್​’; ಇನ್ನೂ ತಗ್ಗಿಲ್ಲ ಶಾರುಖ್​ ಸಿನಿಮಾ ಹವಾ

ಹಿಂದಿ ಸಿನಿಮಾಗಳ ಬಗ್ಗೆ ಕಳೆದ ವರ್ಷ ಜನರಲ್ಲಿ ಒಂದು ಬಗೆಯ ತಿರಸ್ಕಾರ ಭಾವನೆ ಮೂಡಿತ್ತು. ಕೆಲವೇ ಸಿನಿಮಾಗಳನ್ನು ಹೊರತುಪಡಿಸಿ ಇನ್ನಾವುದೇ ಚಿತ್ರಗಳನ್ನೂ ಜನರು ಗೆಲ್ಲಿಸಲಿಲ್ಲ. ‘ಬಾಯ್ಕಾಟ್​ ಬಾಲಿವುಡ್​’ ಟ್ರೆಂಡ್​ ವರ್ಷ ಪೂರ್ತಿ ಜಾರಿಯಲ್ಲಿತ್ತು. ಅದು ಹಾಗೆಯೇ ಮುಂದುವರಿದಿದ್ದರೆ ಕಷ್ಟವಾಗುತ್ತಿತ್ತು. ಆದರೆ ‘ಪಠಾಣ್​’ ಸಿನಿಮಾದಿಂದ ಲವಲವಿಕೆಯ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ: Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ

ಪ್ರೇಕ್ಷಕರು ಹಿಂದಿ ಸಿನಿಮಾಗಳನ್ನು ನೋಡಲು ಚಿತ್ರಮಂದಿರಕ್ಕೆ ಬರುತ್ತಾರೋ ಇಲ್ಲವೋ ಎಂಬ ಅನುಮಾನ ನಿರ್ಮಾಪಕರಿಗೆ ಇತ್ತು. ಆದರೆ ‘ಪಠಾಣ್​’ ಚಿತ್ರಕ್ಕೆ ಜನರು ತೋರಿಸಿದ ಪ್ರೀತಿಯ ಬಳಿಕ ಆ ಅನುಮಾನ ದೂರವಾಗಿದೆ. ಹಾಗಾಗಿ ಬೇರೆ ನಿರ್ಮಾಪಕರು ಕೂಡ ತಮ್ಮ ಸಿನಿಮಾಗಳನ್ನು ದೊಡ್ಡದಾಗಿ ಬಿಡುಗಡೆ ಮಾಡಲು ಉತ್ಸಾಹ ತೋರುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ