AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಜೋಹರ್​ಗೆ ಅನುಷ್ಕಾ ಶರ್ಮಾ ಮೇಲೆ ಇತ್ತು ಕ್ರಶ್

ಬಾಲಿವುಡ್​ ನಿರ್ದೇಶಕ, ನಿರ್ಮಾಪಕ, ವಿತರಕ ಕರಣ್ ಜೋಹರ್ ವಯಸ್ಸು 50 ಆಗಿದ್ದರೂ ಇನ್ನೂ ಮದುವೆ ಆಗಿಲ್ಲ. ಕರಣ್ ಜೋಹರ್ ಒಮ್ಮೆ ಹೇಳಿಕೊಂಡಿದ್ದಂತೆ, ಅವರಿಗೆ ನಟಿ ಅನುಷ್ಕಾ ಶರ್ಮಾ ಮೇಲೆ ಪ್ರೀತಿ ಇತ್ತಂತೆ. ಈ ವಿಷಯ ಅವರೇ ಹೇಳಿಕೊಂಡಿದ್ದಾರೆ.

ಕರಣ್ ಜೋಹರ್​ಗೆ ಅನುಷ್ಕಾ ಶರ್ಮಾ ಮೇಲೆ ಇತ್ತು ಕ್ರಶ್
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on:Oct 02, 2024 | 1:20 PM

Share

ಅನುಷ್ಕಾ ಶರ್ಮಾ ಏಕೋ ಇತ್ತೀಚೆಗೆ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅವರು ‘ಯೇ ದಿಲ್ ಹೇ ಮುಷ್ಕಿಲ್’ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾನ ನಿರ್ದೇಶನ ಮಾಡಿದ್ದು ಕರಣ್ ಜೋಹರ್. ಈ ಚಿತ್ರದಲ್ಲಿ ಅವರು ರಣಬೀರ್ ಕಪೂರ್, ಐಶ್ವರ್ಯಾ ರೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರಿ. ‘ಕಾಫಿ ವಿತ್ ಕರಣ್’ ವೇದಿಕೆ ಮೇಲೆ ಕರಣ್ ಜೋಹರ್ ಅವರು ಒಂದು ಶಾಕಿಂಗ್ ವಿಚಾರ ಹೇಳಿದ್ದರು. ‘ಯೇ ದಿಲ್ ಹೇ ಮುಷ್ಕಿಲ್’ ಚಿತ್ರದ ಶೂಟ್ ವೇಳೆ ಅನುಷ್ಕಾ ಮೇಲೆ ಕ್ರಶ್ ಆಗಿತ್ತು ಎಂದು ಹೇಳಿಕೊಂಡಿದ್ದರು.

ಕತ್ರಿನಾ, ಅನುಷ್ಕಾ ‘ಕಾಫಿ ವಿತ್ ಕರಣ್’ ಶೋಗೆ ಬಂದಿದ್ದರು. ಈ ವೇಳೆ ಕರಣ್ ಅವರು ಈ ವಿಚಾರ ಹೇಳಿದರು. ಇದನ್ನು ಕೇಳಿದ ಅನುಷ್ಕಾ ಶಾಕ್ ಆದರು. ‘ನನ್ನ ಮೇಲೆ ಕ್ರಶ್ ಇದೆ ಎಂದು ಹೇಳಿದ್ರಾ’ ಎಂಬುದಾಗಿ ಕರಣ್ ಜೋಹರ್ ಬಳಿ ಅನುಷ್ಕಾ ಮತ್ತೊಮ್ಮೆ ಕೇಳಿದರು. ‘ಹೌದು, ಸಿನಿಮಾ ಮಾಡುವಾಗ ಸಂಪೂರ್ಣ ನಿಮ್ಮ ಮೇಲೆ ಕ್ರಶ್’ ಇತ್ತು ಎಂದಿದ್ದರು.

‘ಇದನ್ನು ಕೇಳಿ ಖುಷಿ ಆಯಿತು. ಇದನ್ನು ಹೇಳಲೇಬೇಕು. ನನ್ನಿಂದಾಗಿ ಒಬ್ಬರ ಮೇಲೆ ಕ್ರಶ್ ಆಗುತ್ತದೆಯಲ್ಲ’ ಎಂದು ಅನುಷ್ಕಾ ಹೆಮ್ಮೆಯಿಂದ ಹೇಳಿಕೊಂಡಿದ್ದರು. ಕರಣ್ ಜೋಹರ್ಗೆ ಎಷ್ಟೇ ಕ್ರಶ್ ಆದರೂ ಅವರು ಮದುವೆ ಆಗುತ್ತಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ.

ಇದನ್ನೂ ಓದಿ:ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್

ಅನುಷ್ಕಾ ಅವರು ಸಿನಿಮಾಗಳಿಂದ ದೂರ ಇದ್ದು ಸ್ವಲ್ಪ ಸಮಯ ಕಳೆದಿದೆ. 2017ರ ಡಿಸೆಂಬರ್ನಲ್ಲಿ ಇವರು ವಿವಾಹ ಆದರು. 2021ರಲ್ಲಿ ವಮಿಕಾ ಜನಿಸಿದಳು. ಈಗ ಗಂಡು ಮಗು ಜನಿಸಿದ್ದು, ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಅನುಷ್ಕಾ ಶರ್ಮಾ ಅವರು ‘ಚಕ್ದಾ ಎಕ್ಸ್ಪ್ರೆಸ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಜಿಲಾನ್ ಗೋಸ್ವಾಮಿ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಈ ವರ್ಷ ನೆಟ್ಫ್ಲಿಕ್ಸ್ ಮೂಲಕ ಪ್ರಸಾರ ಕಾಣಬೇಕಿದೆ. ಈ ಸಿನಿಮಾ ನಿರ್ಮಾಣ ಮಾಡಿದ್ದು ಅನುಷ್ಕಾ ಶರ್ಮಾ ಸಹೋದರ ಕರ್ಣೇಶ್ ಶರ್ಮಾ. ನೆಟ್ಫ್ಲಿಕ್ಸ್ ಹಾಗೂ ಕರ್ಣೇಶ್ ಮಧ್ಯೆ ಕಿರಿಕ್ ಆಗಿದೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Wed, 2 October 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ